
ಇಸ್ಲಾಮಾಬಾದ್(ಜೂ.13): ಜಮ್ಮು ಮತ್ತು ಕಾಶ್ಮೀರ ಭಾರತಕ್ಕೆ ಸೇರಿದ ಭಾಗವೆಂದು ಇರುವ ಭೂಪಟವನ್ನು ಪ್ರಸಾರ ಮಾಡಿದಕ್ಕಾಗಿ ಇಬ್ಬರು ಪತ್ರಕರ್ತರನ್ನು ಪಾಕಿಸ್ತಾನದ ಸರ್ಕಾರಿ ಸ್ವಾಮ್ಯದ ಪಾಕಿಸ್ತಾನ ಟೀವಿ ಕೆಲಸದಿಂದ ವಜಾ ಮಾಡಿದೆ.
ಜೂ.6ರಂದು ಸುದ್ದಿಯೊಂದರ ಪ್ರಸಾರದ ವೇಳೆ ಕಾಶ್ಮೀರವು ಭಾರತದ ಭೂಭಾಗವೆಂದು ತೋರಿಸುವ ಭೂಪಟವನ್ನು ಪಿಟೀವಿ ವರದಿ ಮಾಡಿತ್ತು. ಆ ನಂತರ ಈ ಘಟನೆಯು ಸಂಸತ್ತಿನಲ್ಲಿ ಕೋಲಾಹಲಕ್ಕೂ ಕಾರಣವಾಗಿ, ಕೊನೆಗೆ ಈ ಕುರಿತಾದ ತನಿಖೆ ಕೈಗೊಂಡು ಕ್ರಮ ಕೈಗೊಳ್ಳಬೇಕು ಎಂದು ಕೋರಿ ಮಾಹಿತಿ ಮತ್ತು ಪ್ರಸಾರದ ಸ್ಥಾಯಿ ಸಮಿತಿಗೆ ವಹಿಸಲಾಗಿತ್ತು. ಅದರ ಬೆನ್ನಲ್ಲೇ ಇಬ್ಬರು ಪತ್ರಕರ್ತರನ್ನು ಹುದ್ದೆಯಿಂದ ತೆಗೆದುಹಾಕಿದೆ.
ಪಾಕ್ ಆಕ್ರಮಿತ ಕಾಶ್ಮೀರ ತನ್ನದು ಎಂಬ ಭಾರತದ ಅರ್ಹ ವಾದಕ್ಕೆ ತಿರುಗೇಟು ನೀಡುವ ನಿಟ್ಟಿನಲ್ಲಿ ಪಾಕಿಸ್ತಾನವು, ಭಾರತದ ಜಮ್ಮು ಮತ್ತು ಕಾಶ್ಮೀರ ತನಗೆ ಸೇರಿದ್ದೆಂದು ಹುಚ್ಚು ವಾದ ಮಂಡಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ