ಮಂಗಳೂರು ದುರಂತ ರೀತಿಯಲ್ಲಿ ಪಾಕಿಸ್ತಾನದಲ್ಲಿ ವಿಮಾನ ಪತನ; 107 ಮಂದಿ ಸಜೀವ ದಹನ?

Suvarna News   | Asianet News
Published : May 22, 2020, 05:09 PM ISTUpdated : May 22, 2020, 07:42 PM IST
ಮಂಗಳೂರು ದುರಂತ ರೀತಿಯಲ್ಲಿ ಪಾಕಿಸ್ತಾನದಲ್ಲಿ ವಿಮಾನ ಪತನ; 107 ಮಂದಿ ಸಜೀವ ದಹನ?

ಸಾರಾಂಶ

ಪಾಕಿಸ್ತಾನದ ಲಾಹೋರ್‌ನಿಂದ ಹೊರಟ್ಟಿದ್ದ ವಿಮಾನ ಕರಾಚಿಯಲ್ಲಿ ಪತನ 99 ಪ್ರಯಾಣಿಕರು ಸೇರಿದಂತೆ 107 ಮಂದಿ ಸಜೀವ ದಹನ  ಜಿನ್ನಾ ಅಂತಾರಾಷ್ಟ್ರೀಯ ಏರ್ಪೋರ್ಟ್‌ನಲ್ಲಿ ಲ್ಯಾಂಡ್‌ ಆಗೋ ಕೆಲ ಕ್ಷಣಗಳ ಮುಂಚೆ ದುರ್ಘಟನೆ 10 ವರ್ಷಗಳ ಹಿಂದೆ ಇದೇ ದಿನ (ಮೇ 22) ಮಂಗಳೂರಿನಲ್ಲೂ ಸಂಭವಿಸಿದ್ದ ವಿಮಾನ ದುರಂತ 

ಕರಾಚಿ(ಮೇ.22):  ಮೇ 22, 2010ರಂದು ಮಂಗಳೂರು ವಿಮಾನ ದುರಂತ ಸಂಭವಿಸಿ 158 ಮಂದಿ ಮೃತಪಟ್ಟಿದ್ದರು. ಈ ದುರಂತ ನಡೆದು ಇಂದಿಗೆ 10 ವರ್ಷಗಳಾಗಿವೆ. ಇದೀಗ ಇದೇ ದಿನ ಪಾಕಿಸ್ತಾನದ ಕರಾಚಿಯಲ್ಲಿ ಇದೇ ರೀತಿ ವಿಮಾನ ದುರಂತ ನಡೆದಿದೆ.  98 ಪ್ರಯಾಣಿಕರು ಹಾಗೂ 8 ಸಿಬ್ಬಂದಿಗಳನ್ನು ಹೊತ್ತ ವಿಮಾನ ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗೋ ಕೆಲ ನಿಮಿಷಗಳ ಮುನ್ನ ಅಪಘಾತಕ್ಕೀಡಾಗಿದೆ.

"

ಲಾಹೋರ್‌ನಿಂದ 99 ಪ್ರಯಾಣಿಕರನ್ನು ಹೊತ್ತ ಕರಾಚಿಗೆ ಆಗಮಿಸುತ್ತಿದ್ದ ವಿಮಾನ 8303, ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಅನ್ನುವಷ್ಟರಲ್ಲೇ ದುರಂತ ಸಂಭವಿಸಿದೆ. ಜಿನ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲ್ಯಾಡಿಂಗ್ ಸನಿಹ ರೆಸಿಡೆನ್ಶಿಯಲ್ ವಲಯವಿದೆ. ಇಲ್ಲಿ ಹಲವು ಮನೆಗಳು ಹಾಗೂ ನಿವಾಸಿಗಳಿದ್ದಾರೆ. ವಿಮಾನ ಪತನದಿಂದ ಇದೀಗ ಇಲ್ಲಿನ ಕೆಲ ಮನೆಗಳು ಹೊತ್ತಿ ಉರಿದಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದೆ. 

 

ಪಾಕಿಸ್ತಾನ ವಿಮಾನ ದುರಂತವನ್ನು ಪಿಐಎ ವಕ್ತಾರ ಅಬ್ದುಲ್ ಸತ್ತರ್ ಖಚಿತಪಡಿಸಿದ್ದಾರೆ. ವರದಿಗಳ ಪ್ರಕಾರ 98 ಪ್ರಯಾಣಿಕರು ಸೇರಿದಂತೆ 107 ಮಂದಿಯನ್ನು ಹೊತ್ತ ಪಾಕಿಸ್ತಾನ ಇಂಟರ್‌ನ್ಯಾಷನಲ್ ಏರ್‌ಲೈನ್ಸ್ ವಿಮಾನ ದುರಂತಕ್ಕೀಡಾಗಿದೆ. ವಿಮಾನ  ದುರಂತದಿಂದ ಹತ್ತಿರದ ಮನೆಗಳು ಸುಟ್ಟು ಭಸ್ಮವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಆದರೆ ಲ್ಯಾಂಡಿಂಗ್ ಸನಿಹದಲ್ಲಿ ಹಲವು ಮನೆಗಳಿದೆ ಎಂದು ಅಬ್ದುಲ್ ಸತ್ತರ್ ಹೇಳಿದ್ದಾರೆ.

ಮಂಗಳೂರು ವಿಮಾನ ದುರಂತದ ರೀತಿಯಲ್ಲೇ ಇದೀಗ ಕರಾಚಿಯಲ್ಲಿ ವಿಮಾನ ದುರಂತ ಸಂಭವಿಸಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ದುಬೈನಿಂದ ಮೇ. 22, 2020ರಲ್ಲಿ ಮಂಗಳೂರಿನತ್ತ ಪ್ರಯಾಣ ಬೆಳೆಸಿತ್ತು. ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ  ನಿಲ್ದಾಣದಲ್ಲಿ ಲ್ಯಾಂಡಿಂಗ್‌ಗೂ ಮುನ್ನ ವಿಮಾನ ಪತನಗೊಂಡಿತ್ತು. ಇದರಲ್ಲಿದ್ದ 158 ಪ್ರಯಾಣಿಕರು ಸಾವನ್ನಪ್ಪಿದ್ದರೆ, 8 ಮಂದಿ ಬದುಕುಳಿದಿದ್ದರು.

ಈ ದುರಂತ ನಡೆದು ಇಂದಿಗೆ 10 ವರ್ಷಗಳು ಸಂದಿದೆ. ಇದೇ ದಿನ, ಇದೀ ರೀತಿ ಪಾಕಿಸ್ತಾನದ ಕರಾಚಿಯಲ್ಲಿ ವಿಮಾನ ಪತನಗೊಂಡಿರುವುದು ದುರಂತ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!
ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!