ಇತ್ತ ಪಾಕ್‌ನಲ್ಲಿ ರಾಜಕೀಯ ಬಿಕ್ಕಟ್ಟು ಅತ್ತ ಮಾಜಿ ಪ್ರಧಾನಿ ಮೇಲೆ ದಾಳಿ, ಕೇಳಿ ಬಂತು ಗಂಭೀರ ಆರೋಪ!

Published : Apr 03, 2022, 04:58 AM ISTUpdated : Apr 03, 2022, 02:23 PM IST
ಇತ್ತ ಪಾಕ್‌ನಲ್ಲಿ ರಾಜಕೀಯ ಬಿಕ್ಕಟ್ಟು ಅತ್ತ ಮಾಜಿ ಪ್ರಧಾನಿ ಮೇಲೆ ದಾಳಿ, ಕೇಳಿ ಬಂತು ಗಂಭೀರ ಆರೋಪ!

ಸಾರಾಂಶ

ಇತ್ತ ಪಾಕ್‌ನಲ್ಲಿ ರಾಜಕೀಯ ಬಿಕ್ಕಟ್ಟು ಅತ್ತ ಮಾಜಿ ಪ್ರಧಾನಿ ಮೇಲೆ ದಾಳಿ, ಕೇಳಿ ಬಂತು ಗಂಭೀರ ಆರೋಪ!

ಲಂಡನ್(ಏ.03): ಲಂಡನ್‌ನಲ್ಲಿ ನೆಲೆಸಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಮೇಲೆ ಇಮ್ರಾನ್ ಖಾನ್ ಅವರ ಪಕ್ಷದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಕಾರ್ಯಕರ್ತನೊಬ್ಬ ದಾಳಿ ನಡೆಸಿದ್ದಾನೆ ಎಂದು ವರದಿಯಾಗಿದೆ. ಈ ದಾಳಿಯಲ್ಲಿ ನವಾಜ್ ಷರೀಫ್ ಅವರ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆರೋಪಿಯನ್ನು ಬಂಧಿಸಲು ಬ್ರಿಟನ್ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಪಾಕಿಸ್ತಾನಿ ಪತ್ರಕರ್ತರೊಬ್ಬರು ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಮೇಲೆ ಲಂಡನ್‌ನಲ್ಲಿ ಪಾಕಿಸ್ತಾನದ ಹಾಲಿ ಪ್ರಧಾನಿ ಇಮ್ರಾನ್ ಖಾನ್ ಅವರ ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಕಾರ್ಯಕರ್ತನೊಬ್ಬ ದಾಳಿ ನಡೆಸಿದ್ದಾನೆ ಎಂದು ಪಾಕಿಸ್ತಾನಿ ಪತ್ರಕರ್ತರೊಬ್ಬರು ತಿಳಿಸಿದ್ದಾರೆ.

ನನ್ನ ಬಳಿ ಎಲ್ಲಾ ಇದೆ ಎಂದ ಪಾಕ್ ಪ್ರಧಾನಿಗೆ ಮಾಜಿ ಪತ್ನಿ ಏನಂದ್ಲು ನೋಡಿ!

ಇಮ್ರಾನ್ ಪಕ್ಷದ ಮೇಲೆ ದಾಳಿ ನಡೆಸಿರುವ ಆರೋಪ

ಪಾಕಿಸ್ತಾನ ಮೂಲದ ಡಿಜಿಟಲ್ ಮಾಧ್ಯಮದ ಫ್ಯಾಕ್ಟ್ ಫೋಕಸ್‌ಗೆ ಸಂಬಂಧಿಸಿದ ಪತ್ರಕರ್ತ ಅಹ್ಮದ್ ನೂರಾನಿ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ, "ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಲಂಡನ್‌ನಲ್ಲಿ ಪಿಟಿಐ ಕಾರ್ಯಕರ್ತನಿಂದ ಹಲ್ಲೆಗೊಳಗಾಗಿದ್ದಾರೆ. ಪಾಕಿಸ್ತಾನದಲ್ಲಿ ಪಿಟಿಐ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಏಕೆಂದರೆ ಈಗ ಪಕ್ಷವು ಎಲ್ಲಾ ಮಿತಿಗಳನ್ನು ಮೀರಿದೆ. ದೈಹಿಕ ಹಿಂಸೆಯನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ. ಪಿಟಿಐ ಈಗ ಉದಾಹರಣೆಯಾಗಬೇಕು. ದಾಳಿಯಲ್ಲಿ ಷರೀಫ್ ಅವರ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹಂಚಿಕೊಂಡಿದ್ದಾರೆ. ಯುಕೆಯಲ್ಲಿ ಅಪರಾಧಿಗಳ ಬಂಧನವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ.

ಭಾನುವಾರ ಬಹುಮತ ಸಾಬೀತು ಮಾಡಬೇಕಿದೆ ಇಮ್ರಾನ್ ಖಾನ್ 

ಪ್ರಧಾನಿ ಇಮ್ರಾನ್ ಖಾನ್ ಭಾನುವಾರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಬಹುಮತವನ್ನು ಸಾಬೀತುಪಡಿಸಬೇಕಾಗಿದೆ. ಇಮ್ರಾನ್ ಖಾನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಅವಿಶ್ವಾಸ ಮಂಡಿಸಿವೆ. ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾದ ನಂತರ ಇಮ್ರಾನ್ ಖಾನ್ ಅವರ ಮಿತ್ರಪಕ್ಷಗಳು ಕೂಡ ಅವರ ಪಕ್ಷವನ್ನು ತೊರೆದಿವೆ. ಮತ್ತೊಂದೆಡೆ, ಇಮ್ರಾನ್ ಖಾನ್ ತಮ್ಮ ಸರ್ಕಾರವನ್ನು ಉಳಿಸಲು ಪ್ರತಿಪಕ್ಷಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ. ಹಿಂದೆ, ಅವರು ತಮ್ಮ ರ್ಯಾಲಿ ಮತ್ತು ರಾಷ್ಟ್ರವನ್ನುದ್ದೇಶಿಸಿ ಭಾಷಣದಲ್ಲಿ, ಅವರು ಪ್ರತಿಪಕ್ಷಗಳ ಮೇಲೆ ದಾಳಿ ಮಾಡಿದರು ಮತ್ತು ವಿದೇಶಿ ಶಕ್ತಿಗಳು ತಮ್ಮನ್ನು ಅಧಿಕಾರದಿಂದ ತೆಗೆದುಹಾಕಿದ್ದಾರೆ ಎಂದು ಆರೋಪಿಸಿದರು. ಅಮೆರಿಕವನ್ನೂ ಉಗ್ರವಾಗಿ ಗುರಿಯಾಗಿಸಿಕೊಂಡಿದ್ದರು.

ಅಧಿಕಾರ ಉಳಿಸಲು ಇಮ್ರಾನ್ ಖಾನ್ ಈ 'ಹೊಸ ರಣತಂತ್ರ', ಉಳಿಸಿಕೊಳ್ತಾರಾ ಕುರ್ಚಿ?

ಶನಿವಾರ ಮತ್ತೆ ವಾಗ್ದಾಳಿ

ಇಮ್ರಾನ್ ಖಾನ್ ಶನಿವಾರ ಮತ್ತೊಮ್ಮೆ ಪ್ರತಿಪಕ್ಷಗಳನ್ನು ಗುರಿಯಾಗಿಸಿದ್ದಾರೆ. ಇಮ್ರಾನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ತಕ್ಷಣ ಮುಂದಿನ ಪ್ರಧಾನಿ ಎಂದೇ ಬಿಂಬಿತರಾದ ಪ್ರತಿಪಕ್ಷದ ನಾಯಕ ಶಹಬಾಜ್ ಷರೀಫ್ ಅವರನ್ನು ತರಾಟೆಗೆ ತೆಗೆದುಕೊಂಡ ಇಮ್ರಾನ್ ಖಾನ್, ಶಹಬಾಜ್ ಷರೀಫ್ ಪ್ರಧಾನಿಯಾದರೆ ಅಮೆರಿಕದ ಗುಲಾಮಗಿರಿ ಮಾಡುತ್ತಾರೆ ಎಂದು ಹೇಳಿದರು. ಶಹಬಾಜ್ ಷರೀಫ್ ಅಮೆರಿಕದ ಗುಲಾಮನಾಗುತ್ತಾನೆ. ಶಾಹಬಾಜ್ ಷರೀಫ್ ಭಾರೀ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದಾರೆ ಎಂದು ಇಮ್ರಾನ್ ಖಾನ್ ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!
ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?