ಭಾರತದ ಏಳಿಗೆಯಲ್ಲಿ ಭಾಗಿಯಾಗಿ: ಜಾಗತಿಕ ಸಿಇಒಗಳಿಗೆ ಮೋದಿ ಕರೆ

Published : Sep 24, 2024, 08:03 AM IST
ಭಾರತದ ಏಳಿಗೆಯಲ್ಲಿ ಭಾಗಿಯಾಗಿ: ಜಾಗತಿಕ ಸಿಇಒಗಳಿಗೆ ಮೋದಿ ಕರೆ

ಸಾರಾಂಶ

ಜಾಗತಿಕ ಕಂಪನಿಗಳ ಸಿಇಒಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದಾರೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ಸಾಗುತ್ತಿದ್ದು, ಈ ಪ್ರಗತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಕಂಪನಿಗಳು ಮುಂದಾಗಬೇಕೆಂದು ಅವರು ಹೇಳಿದರು. ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಸೆಮಿಕಂಡಕ್ಟರ್ ಕ್ಷೇತ್ರಗಳಲ್ಲಿ ಭಾರತದಲ್ಲಿ ಭಾರಿ ಬದಲಾವಣೆಗಳಾಗುತ್ತಿವೆ ಎಂದು ಮೋದಿ ಒತ್ತಿ ಹೇಳಿದರು.

ನವದೆಹಲಿ: ವಿಶ್ವದ ಮೂರನೇ ದೊಡ್ಡ ಆರ್ಥಿಕತೆಯಾಗುವತ್ತ ಭಾರತ ಹೆಜ್ಜೆ ಹಾಕುತ್ತಿದ್ದು, ಭಾರತದ ಈ ಅಭಿವೃದ್ಧಿಯಲ್ಲಿ ನೀವೂ ಭಾಗಿಯಾಗಿ ಎಂದು ಜಾಗತಿಕ ಕಂಪನಿಗಳ ಸಿಇಒಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಭಾನುವಾರ ಇಲ್ಲಿ ಅಮೆರಿಕದ ಪ್ರಮುಖ ಕಂಪನಿಗಳ ಸಿಇಒಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ಪ್ರಧಾನಿಯಾಗಿ ನನ್ನ ಮೂರನೇ ಅವಧಿಯಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ಎಲ್ಲಾ ಪ್ರಯತ್ನ ನಡೆಸಲಾಗುವುದು. ಭಾರತದ ಈ ಅಭಿವೃದ್ಧಿ ಕಥೆ ಲಾಭ ಪಡೆಯಲು ಕಂಪನಿಗಳು ಮುಂದಾಗಬೇಕು. ಭಾರತದ ಜೊತೆ ಪಾಲುದಾರಿಕೆ ಮೂಲಕ, ಜಂಟಿ ಅಭಿವೃದ್ಧಿ ಯೋಜನೆಗಳ ಮೂಲಕ, ವಿನ್ಯಾಸದಲ್ಲಿ ಸಹ ಪಾಲುದಾರರಾಗುವ ಮೂಲಕ ಮತ್ತು ಸಹ ಉತ್ಪಾದಕರಾಗುವ ಮೂಲಕ ಅಭಿವೃದ್ಧಿಯ ಭಾಗವಾಗಿ ಎಂದು ಮೋರಿ ಕರೆ ನೀಡಿದರು.

ಇದೇ ವೇಳೆ ಎಲೆಕ್ಟ್ರಾನಿಕ್ಸ್‌, ಐಟಿ ವಲಯ ಮತ್ತು ಸೆಮಿಕಂಡಕ್ಟರ್‌ ವಲಯದಲ್ಲಿ ಭಾರತದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಸೆಮಿಕಂಡಕ್ಟರ್ ವಲಯದಲ್ಲಿ ಭಾರತವನ್ನು ಜಾಗತಿಕ ಹಬ್‌ ಮಾಡುವಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮೋದಿ ಹೇಳಿದರು.

ವಿಶ್ವಸಂಸ್ಥೆಯಲ್ಲೂ ಈಗ ಮೋದಿ ಶಾಂತಿ ಮಂತ್ರ..!

ನಿವಿಡಾ, ಗೂಗಲ್‌ ಸ್ಪಂದನೆ:

ಸಭೆ ಬಳಿಕ ಮಾತನಾಡಿದ ನಿವಿಡಾ ಸಿಇಒ ಜೆನ್ಸೆನ್‌ ಹುವಾಂಗ್‌, ‘ಕೃತಕ ಬುದ್ಧಿಮತ್ತೆ ವಿಷಯದಲ್ಲಿ ಹೊಸತನದ ಬಗ್ಗೆ, ಅದರ ಸಾಮರ್ಥ್ಯದ ಬಗ್ಗೆ ಮತ್ತು ಭಾರತದಲ್ಲಿ ಅದರ ಅವಕಾಶಗಳ ಬಗ್ಗೆ ಅರಿಯಲು ಮೋದಿ ಸದಾ ಕಾತರರಾಗಿರುತ್ತಾರೆ ಎಂದು ಹೇಳಿದರು.

ಗೂಗಲ್ ಸಿಇಒ ಸುಂದರ್ ಪಿಚೈ ಮಾತನಾಡಿ, ‘ಮೋದಿ ಡಿಜಿಟಲ್‌ ಇಂಡಿಯಾ ಮೂಲಕ ಭಾರತವನ್ನು ಬದಲಾವಣೆ ಮಾಡುವ ಗುರಿ ಹೊಂದಿದ್ದಾರೆ. ಅವರ ಈ ಪ್ರೋತ್ಸಾಹದ ಕಾರಣ ಗೂಗಲ್‌ ಕೂಡಾ ಮೇಕ್‌ ಇನ್ ಇಂಡಯಾ ಮತ್ತು ಡಿಸೈನ್‌ ಇನ್‌ ಇಂಡಿಯಾದತ್ತ ಹೆಜ್ಜೆ ಇಡಲು ಸಾಧ್ಯವಾಗಿದೆ. ಅವರು ನಮ್ಮನ್ನು ಆರೋಗ್ಯ, ಶಿಕ್ಷಣ, ಕೃಷಿ ವಿಷಯದಲ್ಲಿ ಚಿಂತಿಸುವ ಸವಾಲು ಮುಂದಿಟ್ಟಿದ್ದಾರೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಸ್ವಸ್ಥ ಖಲೀದಾ ಜಿಯಾ ಹೆಚ್ಚಿನ ಚಿಕಿತ್ಸೆಗೆ ನಾಳೆ ಲಂಡನ್‌ಗೆ
ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!