ನಾನು ಭಾರತ ಮಾತೆಯ ಪೂಜಾರಿ, ಅಬುಧಾಬಿ ಹಿಂದೂ ಮಂದಿರ ಉದ್ಘಾಟಿಸಿ ಮೋದಿ ಭಾಷಣ!

Published : Feb 14, 2024, 08:58 PM ISTUpdated : Feb 14, 2024, 09:20 PM IST
ನಾನು ಭಾರತ ಮಾತೆಯ ಪೂಜಾರಿ, ಅಬುಧಾಬಿ ಹಿಂದೂ ಮಂದಿರ ಉದ್ಘಾಟಿಸಿ ಮೋದಿ ಭಾಷಣ!

ಸಾರಾಂಶ

ಅಬುಧಾಬಿಯಲ್ಲಿ ಹಿಂದೂ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಹಿಂದೂ ಸಮುದಾಯವನ್ನುದ್ದೇಶಿ ಮಾತನಾಡಿದ್ದಾರೆ. ಇದೇ ವೇಳೆ ಬಾಪ್ಸ್ ಮಂದದಿರದ ಸ್ವಾಮೀಜಿಗಳ ಮಾರ್ಗದರ್ಶನ ಹಾಗೂ ಅಧ್ಯಕ್ಷ ಶೇಕ್ ಮೊಹಮ್ಮದ್ ಸಹಕಾರವನ್ನು ಕೊಂಡಾಡಿದ್ದಾರೆ.

ಅಬುಧಾಬಿ(ಫೆ.14) ಆಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಲೋಕಾರ್ಪಣೆಗೊಂಡಿದೆ. ರಾಮಲಲ್ಲಾ ಜನ್ಮಭೂಮಿಯಲ್ಲಿ ವಿರಾಜಮಾನನಾಗಿದ್ದಾನೆ. ಸಂಪೂರ್ಣ ಭಾರತೀಯರು ಈ ದೈವಿಕ ಭಾವನೆಯಲ್ಲಿ ಮುಳುಗಿದ್ದಾರೆ. ಇದೀಗ ಅಬುಧಾಬಿ ಮಂದಿರ ಉದ್ಘಾಟನೆಗೊಂಡಿದೆ. ನನಗೆ ಸ್ವಾಮೀಜಿ ಪೂಜಾರಿ ಎಂದು ಹೇಳಿದರು. ಈ ಮಾತು ನನಗೆ ಮತ್ತಷ್ಟು ಹೆಮ್ಮೆ ತಂದಿದೆ. ನಾನು ಮಂದಿರದ ಪೂಜಾರಿಯಾಗುವ ಯೋಗ್ಯತೆ, ಗೌರವ ಹೊಂದಿದ್ದೇನೆ ಅನ್ನೋದು ನನಗೆ ಗೊತ್ತಿಲ್ಲ. ಆದರೆ ನಾನು ಮಾ ಭಾರತ ಮಾತೆಯ ಪೂಜಾರಿ ಎಂದು ಮೋದಿ ಹೇಳಿದ್ದಾರೆ 

ಯುನೈಟೆಡ್ ಅರಬ್‌ ಎಮಿರೇಟ್ಸ್‌ (ಯುಎಇ)ನಲ್ಲಿ ನಿರ್ಮಾಣಗೊಂಡಿರುವ ದೇಶದ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಬಳಿಕ ಮಂದಿರ ಆವರಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ್ದರೆ. ಮಾನವೀಯತೆ ಜಗತ್ತಿನಲ್ಲಿ ಒಂದು ಸ್ವರ್ಣಮಯ ಅಧ್ಯಾಯ ಬರೆಯಲಾಗಿದೆ. ಅಬುಧಾಬಿಯಲ್ಲಿ ಭವ್ಯ ಮಂದಿರ ಲೋಕಾರ್ಪಣೆಯಾಗಿದೆ. ಇದರ ಹಿಂದೆ ಹಲವು ವರ್ಷಗಳ ಪರಿಶ್ರಮವಿದೆ. ಇದರ ಹಿಂದೆ ವರ್ಷಗಳ ಹಿಂದಿನ ಕನಸಿದೆ. ಭಗವಾನ್ ಸ್ವಾಮಿ ನಾರಾಯಣನ ಆಶೀರ್ವಾದ ಈ ದೇವಸ್ಥಾನದ ಮೇಲಿದೆ ಎಂದು ಮೋದಿ ಹೇಳಿದ್ದಾರೆ. 

ಉದ್ಘಾಟಕರಾಗಿ ಅಲ್ಲ, ಪೂಜಾರಿಯಾಗಿ ಆಗಮಿಸಿ UAE ಮಂದಿರ ಲೋಕಾರ್ಪಣೆ, ಮೋದಿ ಪೂಜೆಗೆ ಸ್ವಾಮೀಜಿ ಮೆಚ್ಚುಗೆ!

ನನಗೆ ಇಲ್ಲಿನ ಸ್ವಾಮಿಜಿಗಳ ಆಶೀರ್ವಾದ, ಮಾರ್ಗದರ್ಶನ ಹಲವು ವರ್ಷಗಳಿಂದ ಸಿಗುತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ, ಪ್ರಧಾನಿಯಾಗಿದ್ದಾಗಲೂ ಯಾವುದು ಸರಿ ಎನಿಸಿದ್ದನ್ನೂ , ತಪ್ಪು ಎನಿಸಿದ್ದನ್ನೂ ನನಗೆ ಸ್ಪಷ್ಟ ಶಬ್ಧಗಳಲ್ಲಿ ಹೇಳುತ್ತಿದ್ದಾರೆ. ಅವರ ಮಾರ್ಗದರ್ಶನ ನನಗೆ ಸದಾ ಸಿಗುತ್ತಿದೆ. ದೆಹಲಿಯಲ್ಲಿ ಲೋಟಸ್ ಮಂದಿರ ಶಿಲನ್ಯಾಸವಾದಾಗ, ನಾನು ರಾಜನೀತಿಯಲ್ಲಿ ಇರಲಿಲ್ಲ. ಆದರೆ ಗುರೂಜಿಗಳ ಮಾರ್ಗದರ್ಶನದ ಮೂಲಕ ಮಂದಿರ ನಿರ್ಮಾಣವಾಗಿತ್ತು. ಇದೀಗ ಅವರ ಕನಸನ್ನು ನಾವೆಲ್ಲಾ ಸೇರಿ ಅಬುಧಾಬಿಯಲ್ಲಿ ಪೂರ್ಣಗೊಳಿಸಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ಈ ಮಂದಿರ ಇಲ್ಲಿ ನಿರ್ಮಾಣವಾಗಲು ಅತೀ ದೊಡ್ಡ ಕೊಡುಗೆ ಎಂದರೆ ಅದು ಇಲ್ಲಿನ ಅಧ್ಯಕ್ಷ ಶೇಕ್ ಮೊಹಮ್ಮದ್ ಬಿನ್ ಜ್ಯಾಯದ್ ಅವರಿಗೆ ಸಲ್ಲಬೇಕು ಎಂದು ಮೋದಿ ಹೇಳಿದ್ದಾರೆ. ಮೊಹಮ್ಮದ್ ಶೇಕ್ ಕೇವಲ ಅಬುಧಾಬಿಯಲ್ಲಿನ ಹಿಂದೂಗಳ ಮಾತ್ರವಲ್ಲ, 140 ಕೋಟಿ ಭಾರತೀಯರ ಮನಸ್ಸು ಗೆದ್ದಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಅರಬ್ ಸಂಸ್ಥಾನ ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟಿಸಿದ ಮೋದಿ!

ಈ ಮಂದಿರಕ್ಕೆ ಸ್ಥಳ ನೀಡಿದ್ದರಿಂದ ಹಿಡಿದು, ಶಿಲನ್ಯಾಸ, ನಿರ್ಮಾಣ, ಉದ್ಘಾಟನೆವರೆಗೆ ಪ್ರತಿ ಹಂತದಲ್ಲಿಶೇಕ್  ಮೊಹಮ್ಮದ್ ನೆರವು ನೀಡಿದ್ದಾರೆ. ನಾನು 2017ರಲ್ಲಿ ಶೇಕ್ ಮೊಹಮ್ಮದ್ ಭೇಟಿಯಾದಾಗ ಈ ಮಂದಿರ ಕುರಿತು ಚರ್ಚೆ ನಡೆಸಿದ್ದೆ. ಈ ವೇಳೆ ಅತೀ ಕಡಿಮೆ ಸಮಯದಲ್ಲಿ ಭೂಮಿ ನೀಡಿದರು. 2018ರಲ್ಲಿ ಆಗಮಿಸಿದಾಗ ಎರಡು ಹಿಂದೂ ದೇಗಲದ ಮಾಡೆಲ್ ಇತ್ತು. ಈ ಮಾಡೆಲ್ ಅಬುಧಾಬಿ ಸರ್ಕಾರ ಅಂಗೀಕರಿಸಿದ ಮಾಡೆಲ್ ನಿರ್ಮಾಣವಾಗಲಿದೆ ಎಂದು ಸಮಿತಿ ಹೇಳಿತ್ತು. ಈ ಮಾಡೆಲ್ ಸರ್ಕಾರದ ಮುಂದೆ ಬಂದಾಗ, ಶೇಕ್ ಮೊಹಮ್ಮದ್ ಒಂದು ಮಾತು ಹೇಳಿದ್ದರು. ಈ ಹಿಂದೂ ಮಂದಿರ ಅತ್ಯಂತ ಭವ್ಯ ಹಾಗೂ ಪವಿತ್ರ ಹಿಂದೂ ಮಂದಿರವಾಗಬೇಕು ಎಂದು ಒತ್ತಿ ಹೇಳಿದರು. ಇದು ಶೇಕ್ ಮೊಹಮ್ಮದ್ ಅವರ ವಿಶಾಲ ಯೋಚನೆಯ ರೀತಿ ಎಂದು ಮೋದಿ ಹೇಳಿದರು.

ಅಬುದಾಬಿಯಲ್ಲಿಲ್ಲಿ ಭವ್ಯ ಹಿಂದೂ ಮಂದಿರ ನಿರ್ಮಾಣವಾಗಲು ಅತೀ ದೊಡ್ಡ ಕೊಡುಗೆ ಎಂದರೆ ಅದು ಇಲ್ಲಿನ ಅಧ್ಯಕ್ಷ ಶೇಕ್ ಮೊಹಮ್ಮದ್ ಬಿನ್ ಜ್ಯಾಯದ್ ಅವರಿಗೆ ಸಲ್ಲಬೇಕು ಎಂದು ಮೋದಿ ಹೇಳಿದ್ದಾರೆ. ಮೊಹಮ್ಮದ್ ಶೇಕ್ ಕೇವಲ ಅಬುಧಾಬಿಯಲ್ಲಿನ ಹಿಂದೂಗಳ ಮಾತ್ರವಲ್ಲ, 140 ಕೋಟಿ ಭಾರತೀಯರ ಮನಸ್ಸು ಗೆದ್ದಿದ್ದಾರೆ ಎಂದು ಮೋದಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್: ಏನಿದು ಥಾಯ್‌ ವಿಚಿತ್ರ ನಿಯಮ!
ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ