
ಢಾಕಾ(ಮಾ.26): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ರಾಜತಾಂತ್ರಿಕ ಸಂಬಂಧ 50 ವರ್ಷ ಪೂರೈಸಿದೆ. ಈ ಹಿನ್ನಲೆಯಲ್ಲಿ ಬಾಂಗ್ಲಾದೇಶದ 50 ಉದ್ಯಮಿಗಳನ್ನು ಭಾರತಕ್ಕೆ ಭೇಟಿ ನೀಡಲು ಆಹ್ವಾನ ನೀಡಿದ್ದಾರೆ. ಇದರೊಂದಿಗೆ ವಿಶ್ವವನ್ನೇ ವ್ಯಾಪಿಸುತ್ತಿರುವ ಸ್ಟಾರ್ಟ್ಅಪ್ ಜೊತೆ ಸೇರಿಕೊಳ್ಳಿ ಎಂದಿದ್ದಾರೆ. ಇದೇ ವೇಳೆ ಬಾಂಗ್ಲಾದೇಶದ ಯುವಕರಿಗೆ ಸ್ವರ್ಣ ಜಯಂತಿ ವಿದ್ಯಾರ್ಥಿವೇತನವನ್ನು ಮೋದಿ ಘೋಷಿಸಿದ್ದಾರೆ.
ಪ್ರಧಾನಿ ಮೋದಿ ಗುಣಗಾನ ಮಾಡಿದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್
ಶೇಖ್ ಮುಜಿಬುರ್ ಜನ್ಮ ಶತಮಾನೋತ್ಸವ, ಬಾಂಗ್ಲಾದೇಶ ವಿಮೋಚನಾ ಸಂಭ್ರಮಕ್ಕೆ 50 ವರ್ಷ ಸಂದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶಕ್ಕೆ 2ದಿನ ಪ್ರವಾಸ ಕೈಗೊಂಡಿದ್ದಾರೆ. ಬಾಂಗ್ಲಾ ಪ್ರವಾಸದಲ್ಲಿ ಮೋದಿ ಮಾಡಿದ ಮೊದಲ ಭಾಷಣದಲ್ಲಿ ಹಲವು ಪ್ರಮುಖ ವಿಚಾರಗಳ ಕುರಿತು ಬೆಳಕು ಚೆಲ್ಲಿದ್ದಾರೆ.
ಭಯೋತ್ಪಾದನೆ, ಕೋವಿಡ್ -19 ಸಾಂಕ್ರಾಮಿಕ, ರಾಜತಾಂತ್ರಿಕ ಮತ್ತು ವ್ಯಾಪಾರ ಸರಿದಂತೆ ಉಭಯ ದೇಶಗಳ ನಡುವಿನ ಸಂಬಂಧ ಕುರಿತು ಮೋದಿ ಮಾತನಾಡಿದರು. ಅಭಿವೃದ್ಧಿ ಪಥದಲ್ಲಿ ಭಾರತ ಮತ್ತು ಬಾಂಗ್ಲಾದೇಶ ಒಟ್ಟಾಗಿ ಕೆಲಸ ಮಾಡುವುದು ಮುಖ್ಯವಾಗಿದೆ ಎಂದು ಮೋದಿ ಹೇಳಿದ್ದಾರೆ.
ಭಾರತ ತಯಾರಿಸಿದ ಕೊರೋನಾ ಲಸಿಕೆ ಬಾಂಗ್ಲಾದೇಶ ಜನರು ಬಳಸುತ್ತಿದ್ದಾರೆ ಎಂದು ಹೇಳಲು ಸಂತೋಷವಾಗುತ್ತಿದೆ. ಇದೇ ರೀತಿ ವ್ಯಾಪಾರ ಹಾಗೂ ವಾಣಿಜ್ಯ ಕ್ಷೇತ್ರದಲ್ಲಿ ಇದೇ ರೀತಿಯ ಅವಕಾಶಗಳು ಭಾರತ ಹಾಗೂ ಬಾಂಗ್ಲಾದೇಶದ ಮುಂದಿದೆ ಎಂದು ಮೋದಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ