
ಇಸ್ಲಾಮಾಬಾದ್: ಈ ಬಾರಿ ನಾವು ಗೆದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಸೇರಿಸಲಾಗುವುದು ಎಂಬ ಬಿಜೆಪಿ ಭರವಸೆಗಳ ನಡುವೆಯೇ ಆಜಾದ್ ಕಾಶ್ಮೀರ (ಪಿಒಕೆಯನ್ನು ಪಾಕಿಸ್ತಾನ ಕರೆಯುವುದು), ವಿದೇಶಿ ಸರಹದ್ದು ಎಂದು ಪಾಕಿಸ್ತಾನ ಸರ್ಕಾರ, ಇಸ್ಲಾಮಾಬಾದ್ ಹೈಕೋರ್ಟ್ಗೆ ಅಚ್ಚರಿಯ ಮಾಹಿತಿ ಸಲ್ಲಿಸಿದೆ.
ಕಾಶ್ಮೀರಿ ಕವಿ ಅಹ್ಮದ್ ಫರ್ಹಾದ್ ಶಾ ನಿಗೂಢ ನಾಪತ್ತೆ ಹಿನ್ನೆಲೆಯಲ್ಲಿ ಅವರ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ಗೆ ಮಾಹಿತಿ ನೀಡಿದ ಪಾಕಿಸ್ತಾನದ ಹೆಚ್ಚುವರಿ ಅಟಾರ್ನಿ ಜನರಲ್, ‘ಆಜಾದ್ ಕಾಶ್ಮೀರದಲ್ಲಿ ಅಹ್ಮದ್ ಶಾ ಇರುವ ಕಾರಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಾಧ್ಯವಿಲ್ಲ. ಅದು ವಿದೇಶಿ ಸರಹದ್ದು. ಅಲ್ಲಿಗೆ ಪ್ರತ್ಯೇಕ ಸಂವಿಧಾನ, ನ್ಯಾಯಾಲಯಗಳಿವೆ. ಅಲ್ಲಿನ ಕೋರ್ಟ್ಗಳು ನೀಡಿದ ತೀರ್ಪನ್ನು ವಿದೇಶಿ ನ್ಯಾಯಾಲಯದ ತೀರ್ಪುಗಳ ರೀತಿ ಪರಿಗಣಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.
ಈ ವೇಳೆ ನ್ಯಾ. ಕಯಾನಿ ಅವರು, ‘ಅದು ವಿದೇಶಿ ನೆಲವೆಂದಾದಲ್ಲಿ ಪಾಕಿಸ್ತಾನ ಸೇನೆ ಆ ಪ್ರದೇಶಕ್ಕೆ ಪ್ರವೇಶ ಮಾಡಿದ್ದು ಹೇಗೆ’ ಎಂದು ಪ್ರಶ್ನಿಸಿದರು.
ಪಾಕಿಸ್ತಾನದ ವಿರುದ್ಧ ಪಿಒಕೆ ದಂಗೆ: ಹಿಂಸಾಚಾರದಲ್ಲಿ ಪೊಲೀಸ್ ಸಾವು, 100 ಮಂದಿಗೆ ಗಾಯ
ಪಾಕ್ ಆಕ್ರಮಿತ ಕಾಶ್ಮೀರ ಭಾರತದ್ದೇ ಭೂಭಾಗವಾಗಿದ್ದು, ಅದನ್ನು ಭಾರತ ಸರ್ಕಾರ ಮರಳಿ ವಶಕ್ಕೆ ಪಡೆಯಲಿದೆ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಗೃಹ ಸಚಿವ ಅಮಿತ್ಶಾ, ಈ ಬಾರಿ ಮತ್ತೊಮ್ಮೆ ಮೋದಿ ಪ್ರಧಾನಿಯಾದರೆ ಪಾಕ್ ಆಕ್ರಮಿತ ಕಾಶ್ಮೀರವನ್ನ ಭಾರತ ಸರ್ಕಾರ ಮರಳಿ ವಶಕ್ಕೆ ಪಡೆಯಲಿದೆ ಎಂದು ಹೇಳುವ ಮೂಲಕ 'ಪಾಕಿಸ್ತಾನದ ಬಳಿ ಅಣುಬಾಂಬ್ ಇರುವುದನ್ನು ಭಾರತ ನೆನಪಿನಲ್ಲಿಟ್ಟುಕೊಳ್ಳಬೇಕು' ಎಂದು ಕೆಲವು ಪ್ರತಿಪಕ್ಷ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ