
ಇಸ್ಲಾಮಾಬಾದ್ (ಜು.1): ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ‘ನಾವು ಪಾಕ್ನ ಭಾಗವೇ ಅಲ್ಲ’ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಸವಾಲೆಸೆಯುತ್ತಿದ್ದಾರೆ. ಅಲ್ಲದೆ, ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಬೇರೆ ಮಾರ್ಗದತ್ತ (ಭಾರತ) ತಿರುಗುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈದ್ಗಾ ಮೈದಾನದಲ್ಲಿ ನಡೆದ ಭಾರಿ ಪ್ರತಿಭಟನೆಯಲ್ಲಿ ಮಾತನಾಡಿದ ಜೆಎಎಸಿ ನಾಯಕ ಸರ್ದಾರ್ ಅಮಾನ್ ಖಾನ್, ‘ಪಿಒಕೆ ಪಾಕಿಸ್ತಾನದ ಭಾಗವಲ್ಲ. ನಮಗೆ ಪಾಕಿಸ್ತಾನ ಬೇಡ, ಆದರೆ ಪಾಕಿಸ್ತಾನಕ್ಕೆ ಪಿಒಕೆ ಅಗತ್ಯ. ನಾವು ಬೇರೆ ಮಾರ್ಗದತ್ತ (ಭಾರತ) ಹೊರಡುವ ಅಗತ್ಯವನ್ನು ಸೃಷ್ಟಿಸಬೇಡಿ. ಆ ದಾರಿ ತೆರೆದರೆ, ನೀವೇ ನಮ್ಮ ಬಳಿ ಬೇಡಿಕೊಳ್ಳುವ ಸ್ಥಿತಿ ಬರುತ್ತದೆ’ ಎಂದು ಎಚ್ಚರಿಸಿದ್ದಾರೆ.
ಪಾಕ್ ಸರ್ಕಾರ ಪಿಒಕೆ ಪ್ರದೇಶಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂಬುದು ಜನರ ಆಕ್ರೋಶಕ್ಕೆ ಕಾರಣ. ಹೀಗಾಗಿ ಜೂ.9ರಿಂದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ನಿರಂತರ ಪ್ರತಿಭಟನೆ ನಡೆಯುತ್ತಿದೆ. ಪಾಕ್ ಅಧಿಕಾರಿಗಳು ಆಹಾರ ಮತ್ತು ಅಗತ್ಯ ವಸ್ತುಗಳ ಸರಬರಾಜು ನಿರ್ಬಂಧಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ