
ಕಾಠ್ಮಂಡು (ಜು. 06): ಭಾರತದ ಭೂ ಪ್ರದೇಶವನ್ನು ಒಳಗೊಂಡ ಹೊಸ ನಕಾಶೆಯನ್ನು ಬಿಡುಗಡೆ ಮಾಡಿ ಆಕ್ರೋಶಕ್ಕೆ ಗುರಿಯಾಗಿರುವ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಈಗ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.
ನೇಪಾಳದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ನೇತೃತ್ವದ ಬಣ ಓಲಿ ವಿರುದ್ಧ ಬಂಡಾಯ ಸಾರಿದೆ. ಇದೇ ವೇಳೆ ಅಧಿಕಾರ ಹಂಚಿಕೆ ಕುರಿತಂತೆ ಪ್ರಚಂಡ ಮತ್ತು ಓಲಿ ಬಣದ ನಡುವೆ ಭಾನುವಾರ ನಡೆದ ಮಾತುಕತೆ ವಿಫಲವಾಗಿದೆ.
ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಸಜ್ಜಿತ 4 ಡ್ರೋನ್ ನೀಡಲಿದೆ ಚೀನಾ; ಅಲರ್ಟ್ ಆದ ಭಾರತ!
ಇಂದು ಮತ್ತೊಂದು ಮಾತುಕತೆ ನಡೆಯಲಿದ್ದು, ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ. ಓಲಿ ರಾಜೀನಾಮೆಗೆ ಈಗಾಗಲೇ ವಿರೋಧಿ ಬಣ ಒತ್ತಾಯಿಸಿದೆ. ಹೊಸ ನಕಾಶೆ ರಚಿಸಿದ್ದಕ್ಕೆ ತಮ್ಮ ಸರ್ಕಾರವನ್ನು ಉರುಳಿಸಲು ಭಾರತ ಯತ್ನಿಸುತ್ತಿದೆ ಎಂದು ಓಲಿ ಆರೋಪಿದ್ದರು. ಆದರೆ, ಈ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ