ಭಾರತಕ್ಕೆ ರಾಜತಾಂತ್ರಿಕ ಗೆಲುವು, ನೌಕಾಸೇನೆ ಮಾಜಿ ಅಧಿಕಾರಿಗಳ ಗಲ್ಲುಶಿಕ್ಷೆ ರದ್ದುಗೊಳಿಸಿದ ಕತಾರ್!

Published : Dec 28, 2023, 04:09 PM ISTUpdated : Dec 28, 2023, 04:30 PM IST
ಭಾರತಕ್ಕೆ ರಾಜತಾಂತ್ರಿಕ ಗೆಲುವು, ನೌಕಾಸೇನೆ ಮಾಜಿ ಅಧಿಕಾರಿಗಳ ಗಲ್ಲುಶಿಕ್ಷೆ ರದ್ದುಗೊಳಿಸಿದ ಕತಾರ್!

ಸಾರಾಂಶ

ಗೂಢಚರ್ಯೆ ಆರೋಪದಲ್ಲಿ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ವಾಯುಪಡೆಗೆ 8 ನಿವೃತ್ತಿ ಸಿಬ್ಬಂದಿಗಳಿಗೆ ರಿಲೀಫ್ ಸಿಕ್ಕಿದೆ. ಭಾರದದ ಮೇಲ್ಮನವಿಗೆ ಸ್ಪಂದಿಸಿದ ಕೋರ್ಟ್, ಗಲ್ಲುಶಿಕ್ಷೆಯನ್ನು ಜೈಲುಶಿಕ್ಷೆಗೆ ಕಡಿತಗೊಳಿಸಿದೆ.

ಕತಾರ್(ಡಿ.28) ಬೇಹುಗಾರಿಕೆ ಆರೋಪದ ಮೇಲೆ ದಹ್ರಾ ಗ್ಲೋಬಲ್‌ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ನೀಡಿದ್ದ ಗಲ್ಲು ಶಿಕ್ಷೆಯನ್ನು ಕತಾರ್ ನ್ಯಾಯಾಲಯ ಕಡಿತಗೊಳಿಸಿದೆ. ಗಲ್ಲು ಶಿಕ್ಷೆ ಕಡಿತಗೊಳಿಸಿ ಇದೀಗ ಜೈಲು ಶಿಕ್ಷೆ ವಿಧಿಸಲಾಗಿದೆ. COP28 ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕತಾರ್ ಶೇಕ್ ತಮೀಮ್ ಬಿನ್ ಹಮಾದ್ ಅಲ್ ತಾನಿ ಭೇಟಿಯಾದ ಕೆಲವೇ ದಿನಗಳಲ್ಲಿ ಈ ನಿರ್ಧಾರ ಹೊರಬಂದಿರುವುದು ಭಾರತದ ರಾಜತಾಂತ್ರಿಕತೆಗೆ ಸಿಕ್ಕಿದ ಅತೀ ದೊಡ್ಡ ಗೆಲುವು ಎಂದೇ ಪರಿಗಣಿಸಲಾಗುತ್ತಿದೆ. 

ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ನೀಡಿದ್ದ ಗಲ್ಲು ಶಿಕ್ಷೆಯನ್ನು ಮರುಪರಿಶೀಲಿಸಲು ಭಾರತ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ  COP28 ಶೃಂಗಸಭೆಯಲ್ಲಿ ಕತಾರ್ ಸರ್ಕಾರದ ಸಚಿವರು ಹಾಗೂ ಹಲವು ಪ್ರಮುಖರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ಕತಾರ್ ಕೋರ್ಟ್ ಮಹತ್ವದ ನಿರ್ಧಾರ ಘೋಷಿಸಿದೆ. ಇದೀಗ 9 ನಿವೃತ್ತ ಸೇನಾಧಿಕಾರಿಗಳ ಗಲ್ಲು ಶಿಕ್ಷೆ ರದ್ದುಗೊಳಿಸಿ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 

ಚೀನಾ ಹತ್ತಿಕ್ಕಲು ಅಮೆರಿಕಾ ಜೊತೆ ಸೇರಿ ಜಂಟಿಯಾಗಿ ಸೇನಾ ಸ್ಟ್ರೈಕರ್ ನಿರ್ಮಾಣಕ್ಕೆ ಭಾರತ ನಿರ್ಧಾರ

ಕತಾರ್ ಕೋರ್ಟ್ ಆದೇಶದ ಪ್ರತಿ ಇನ್ನೂ ಲಭ್ಯವಾಗಿಲ್ಲ. ನಾವು ಕಾನೂನು ತಜ್ಞರ ಜೊತೆ ಹಾಗೂ ನಿವೃತ್ತ ಸೇನಾಧಿಕಾರಿಗಳ ಕುಟುಂಬದ ಜೊತೆ ನಿಕಟ ಸಂಪರ್ಕದಲ್ಲಿದ್ದೇವೆ. ಕೋರ್ಟ್ ಆದೇಶ ಪ್ರತಿ ಸಿಕ್ಕ ಬಳಿಕ ಮುಂದಿನ ನಿರ್ಧಾರದ ಕುರಿತು ಚರ್ಚಿಸುತ್ತೇವೆ ಎಂದು ಜೈಶಂಕರ್ ಹೇಳಿದ್ದಾರೆ. ಈ ಪ್ರಕರಣದ ಆರಂಭದಿಂದಲೂ ನಾವು ಸೇನಾಧಿಕಾರಿಗಳ ಕುಟುಂಬದ ಜೊತೆ ನಿಂತಿದ್ದೇವೆ. ಎಲ್ಲಾ ರೀತಿಯ ಕಾನೂನು ನೆರವು ನೀಡಿದ್ದೇವೆ. ಒಂದೆಡೆಯಿಂದ ಕಾನೂನು ಹೋರಾಟ, ಮತ್ತೊಂದೆಡೆಯಿಂದ ಈ ವಿಚಾರವನ್ನು ಕತಾರ್ ಅಧಿಕಾರಿಗಳ ಜೊತೆಗೂ ಚರ್ಚಿಸಿದ್ದೇವೆ. ಭಾರತ ಸರ್ಕಾರ ಪ್ರಮಾಣಿಕ ಪ್ರಯತ್ನ ಮಾಡಲಿದೆ ಎಂದು ಜೈಶಂಕರ್ ಹೇಳಿದ್ದಾರೆ.

ಭಾರತ ವಿದೇಶಾಂಗ ನೀತಿಯನ್ನು ಬಹುತೇಕ ದೇಶಗಳು ಮೆಚ್ಚಿಕೊಂಡಿದೆ. ಬದ್ಧವೈರಿ ಪಾಕಿಸ್ತಾನ ಕೂಡ ಪದೇ ಪದೇ ಭಾರತದ ವಿದೇಶಾಂಗ ನೀತಿಯನ್ನು ಹೊಗಳಿದೆ. ಸಮರ್ಥ ವಿದೇಶಾಂಗ ನೀತಿ ಹಾಗೂ ಜಾಗತಿಕ ಮಟ್ಟದಲ್ಲಿ ತನ್ನ ಪ್ರಭಾವವನ್ನು ಬಳಸಿಕೊಂಡಿರುವ ಭಾರತಕ್ಕೆ ಅತೀ ದೊಡ್ಡ ರಾಜತಾಂತ್ರಿಕ ಗೆಲುವು ಎಂದು ಹಲವರು ಬಣ್ಣಿಸಿದ್ದಾರೆ.  

ಕಮಾಂಡ್‌ಗಳಾಗಿದ್ದ  ಪುರ್ನೆಂದು ತಿವಾರಿ, ಸುಗುನಾಕರ್ ಪಕಲ, ಅಮಿತ್ ನಾಗಪಾಲ್, ಸಂಜೀವ್ ಗುಪ್ತಾ ಹಾಗೂ ಕ್ಯಾಪ್ಟನ್‌ಗಳಾಗಿದ್ದ ನವತೇಜ್ ಸಿಂಗ್ ಗಿಲ್, ಬಿರೇಂದ್ರ ಕುಮಾರ್ ವರ್ಮಾ, ಸೌರಬ್ ವಶಿಷ್ಠ, ನಾಕೆ ಸೇನೆ ನಾವಿಕ ರಾಜೇಶ್ ಗೋಪಕುಮಾರ್ ಕತಾರ್‌ನಲ್ಲಿ ಬಂಧನಕ್ಕೊಳಗಾಗಿದ್ದರು.  ಇವರ ಮೇಲೆ ಆರೋಪವನ್ನು ಇದುವರೆಗೆ ಕತಾರ್ ಬಹಿರಂಗಪಡಿಸಿಲ್ಲ. ಗೂಡಚರ್ಯೆ ಆರೋಪದ ಮೇಲೆ ಬಂಧಿಸಲಾಗಿತ್ತು. ಗಲ್ಲುಶಿಕ್ಷೆಗೆ ಗುರಿಯಾದ ಎಂಟು ಮಂದಿಯ ವಿರುದ್ಧ ಕತಾರ್‌ ಪೊಲೀಸರು ಇಸ್ರೇಲ್‌ನ ಪರ ಗೂಢಚರ್ಯೆ ನಡೆಸಿದ ಆರೋಪ ಹೊರಿಸಿದ್ದರು. ಇದಕ್ಕೆ ಪೂರಕವಾದ ಡಿಜಿಟಲ್ ಸಾಕ್ಷ್ಯಗಳಿವೆ ಎಂಬುದನ್ನು ಮಾತ್ರ ಹೇಳಿದ್ದರು. ಆದರೆ ನಿರ್ದಿಷ್ಠ ಆರೋಪಗಳ ಕುರಿತು ಯಾವುದೇ ಮಾಹಿತಿ ಬಹಿರಂಗಪಡಿಸಿರಲಿಲ್ಲ. 

ಆಂತರಿಕ ವಿಷಯದಲ್ಲಿ ಕೆನಡಾ ದೂತರ ಹಸ್ತಕ್ಷೇಪ: ಕೆನಡಾ ಜತೆ ಸಂಬಂಧ ಸುಧಾರಣೆಗೆ ಜೈಶಂಕರ್ ಷರತ್ತು ಹೀಗಿದೆ..

ಬೇಹುಗಾರಿಕೆ ಆರೋಪದ ಮೇಲೆ ಕಳೆದ ಅ.26ರಂದು ಈ 8 ನಿವೃತ್ತ ಸೇನಾಧಿಕಾರಿಗಳಿಗೆ ಕತಾರ್ ಕೋರ್ಟ್ ಗಲ್ಲು ಶಿಕ್ಷೆ ನೀಡಿತ್ತು.  ಕತಾರ್‌ ಸ್ಥಳೀಯ ನ್ಯಾಯಾಲಯದ ತೀರ್ಪು ಆಘಾತಕಾರಿ ಎಂದು ಬಣ್ಣಿಸಿದ್ದ ಭಾರತದ ವಿದೇಶಾಂಗ ಸಚಿವಾಲಯ, ಅವರನ್ನು ರಕ್ಷಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಕಾನೂನಾತ್ಮಕ ಮಾರ್ಗಗಳನ್ನು ಉಪಯೋಗಿಸುವುದಾಗಿ ಹೇಳಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!
ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?