
ವಿಶ್ವಸಂಸ್ಥೆ, (ನ 25) ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯಾ ಗುಟೆರಸ್ ಅವರಿಗೆ 'ಸುಳ್ಳುಗಳ ಕಂತೆ'ಯನ್ನೇ ನೀಡಿರುವ ಪಾಕಿಸ್ತಾನಕ್ಕೆ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲ್ಯಾಡನ್ ಹಲವು ವರ್ಷಗಳ ಕಾಲ ಅಡಗಿಕುಳಿತು ಹತ್ಯೆಗೀಡಾದ ಅಬೋಟಾಬಾದ್ ನಿಮಗೆ ನೆನಪಿದೇಯಾ ಎಂದು ಭಾರತ ಪ್ರಶ್ನೆ ಮಾಡಿದೆ.
ಪಾಕಿಸ್ತಾನದ ರಾಯಭಾರಿಯು ನೀಡಿರುವ ಮಾಹಿತಿಗಳೆಲ್ಲ ಸುಳ್ಳಿನ ಕಂತೆಯಾಗಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ರಾಯಭಾರಿ ಟಿ.ಎಸ್. ತ್ರಿಮೂರ್ತಿ ಹೇಳಿದ್ದಾರೆ.
ಮುಂಬೈ ದಾಳಿಕೋರನ ಪರಿಸ್ಥಿತಿ ಏನಾಯಿತು?
ನಕಲಿ ದಾಖಲೆ ಸೃಷ್ಟಿಮಾಡಿ ಮತ್ತು ಸುಳ್ಳು ಆರೋಪ ಮಾಡುವುದು ಪಾಕಿಸ್ತಾನಕ್ಕೆ ಹೊಸತಲ್ಲ. ವಿಶ್ವಸಂಸ್ಥೆಯೇ ಗುರುತಿಸಿರುವಂತೆ ಅತಿಹೆಚ್ಚು ಭಯೋತ್ಪಾದಕರು ಮತ್ತು ಸಂಘಟನೆಗಳು ಪಾಕಿಸ್ತಾನದಲ್ಲಿಯೇ ಇವೆ. ಅಬೋಟಾಬಾದ್ ನಗರವನ್ನು ಒಮ್ಮೆ ನೆನಪಿಸಿಕೊಳ್ಳಿ' ಎಂದು ಅವರು ಟ್ವೀಟ್ ಮೂಲಕ ತ್ರಿಮೂರ್ತಿ ತಿರುಗೇಟು ನೀಡಿದ್ದಾರೆ.
ಇಸ್ಲಾಮಾಬಾದಿನ ವಿಶ್ವಸಂಸ್ಥೆಯ ರಾಯಭಾರಿ ಮುನೀರ್ ಅಕ್ರಮ್ ಅವರು ಗುಟೆರಸ್ ಜತೆಗಿನ ಭೇಟಿ ವೇಳೆ ಭಾರತದ ಮೇಲೆಯೂ ಆರೋಪ ಮಾಡುವಂತಹ ಮಾಹಿತಿ ಹಸ್ತಾಂತರಿಸಿದ್ದರು. ಇದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ.
ಭಯೋತ್ಪಾದನೆಗೆ ಭಾರತವೇ ಕುಮ್ಮಕ್ಕು ನೀಡುತ್ತಿದೆ ಎಂಬ ಆರೋಪ ಮಾಡಿದ್ದ ಪಾಕಿಸ್ತಾನ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ ಕಳೆದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ