
ನವದೆಹಲಿ (ಫೆ.17): ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದ್ದ ನಾಲ್ಕು ತಿಂಗಳಲ್ಲೇ ಭಾರತದ ಹರ್ಯಾಣ ಮೂಲದ ಕೊಲೆ ಮತ್ತು ಗಲಭೆಕೋರ ನರೇಂದ್ರ ಸಿಂಗ್ನನ್ನು ಯುಎಇನಲ್ಲಿ ಬಂಧಿಸಲಾಗಿದ್ದು, ಆತನನ್ನು ಭಾರತಕ್ಕೆ ಗಡೀಪಾರು ಮಾಡಲಾಗಿದೆ.
ಜಿಯೋ ಲೊಕೇಷನ್ ತಂತ್ರಜ್ಞಾನದ ಮೂಲಕ ಅಪರಾಧಿಯು ಯುಎಇಯಲ್ಲಿ ತಲೆಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿ ನರೇಂದ್ರ ಸಿಂಗ್ನನ್ನು ಬಂಧಿ ಸಲಾಗಿದೆ.
ಶಿವಮೊಗ್ಗ ಹ್ಯೂಂಡಾಯ್ ಕಾರ್ ಶೋ ರೂಂನಲ್ಲಿ ಅಗ್ನಿ ಅವಘಡ, 7 ಕಾರು ಭಸ್ಮ!
ನರೇಂದ್ರ ಸಿಂಗ್ಗೆ ಹರ್ಯಾಣ ಕೋರ್ಟ್ 2009ರಲ್ಲಿ ದೋಷಿ ಎಂದು ಪರಿಗಣಿಸಿ ಶಿಕ್ಷೆ ನೀಡಿದ್ದರೂ ಆತ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಕಳೆದ ನ.7ರಂದು ನರೇಂದ್ರ ತೋಮರ್ ಪತ್ತೆಗೆ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು.
ಸೋನಿಯಾ ಗಾಂಧಿಗೆ ಭಾರತದಲ್ಲಿ ಸ್ವಂತ ಮನೆಯೇ ಇಲ್ಲ, ಕಾರು ಇಲ್ಲ, ಅಫಿಡವಿಟ್ನಲ್ಲಿ ಆಸ್ತಿ ಬಹಿರಂಗ
ಸಿಬಿಐನ ಜಾಗತಿಕ ಕಾರ್ಯಾಚರಣೆ ಕೇಂದ್ರವು ಅಬುಧಾಬಿಯಲ್ಲಿರುವ ಇಂಟರ್ಪೋಲ್ಗಾಗಿ ಅದರ ರಾಷ್ಟ್ರೀಯ ಕೇಂದ್ರೀಯ ಬ್ಯೂರೋ, ಭಾರತೀಯ ರಾಯಭಾರ ಕಚೇರಿ, ವಿದೇಶಾಂಗ ಸಚಿವಾಲಯ ಮತ್ತು ಹರಿಯಾಣ ಪೊಲೀಸರೊಂದಿಗೆ ಆತನ ಹಸ್ತಾಂತರ ಕಾರ್ಯ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ