
ಕಾಬೂಲ್(ಜು.21): ತಾಲಿಬಾನ್ ಉಗ್ರರು ಆಷ್ಘಾನಿಸ್ತಾನವನ್ನು ಹಂತಹಂತವಾಗಿ ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಹೊತ್ತಿನಲ್ಲೇ, ರಾಜಧಾನಿ ಕಾಬೂಲ್ನಲ್ಲಿರುವ ಅರಮನೆ ಸಮೀಪವೇ ಮಂಗಳವಾರ 3 ರಾಕೆಟ್ ದಾಳಿ ನಡೆಸಲಾಗಿದೆ. ಇದು ಸರ್ಕಾರ ಮತ್ತು ಸ್ಥಳೀಯರ ಆತಂಕವನ್ನು ಹೆಚ್ಚಿಸಿದೆ.
ಇದುವರೆಗೆ ಯಾವುದೇ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲವಾದರೂ, ಇದರ ಹಿಂದೆ ತಾಲಿಬಾನ್ನ ಕೈವಾಡದ ಪ್ರಬಲ ಶಂಕೆ ವ್ಯಕ್ತವಾಗಿದೆ. ಮಂಗಳವಾರ ಅಧ್ಯಕ್ಷ ಅಶ್ರಫ್ ಘನಿ ಅವರ ಈದುಲ್ ಅಝ್ಹಾ ಭಾಷಣಕ್ಕೂ ಮುನ್ನ ಕಾಬೂಲ್ ಅರಮನೆಯ ಸಮೀಪ ರಾಕೆಟ್ ದಾಳಿ ಮಾಡಲಾಗಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
3 ರಾಕೆಟ್, ಅರಮನೆ ಸಮೀಪದಲ್ಲಿ ಬಿದ್ದಿದ್ದು, ಸ್ಥಳದಲ್ಲಿದ್ದ ಕಾರೊಂದು ನಾಶವಾಗಿದೆ. ದಾಳಿ ಕುರಿತು ಪ್ರತಿಕ್ರಿಯಿಸಿರುವ ಅಧ್ಯಕ್ಷ ಅಶ್ರಫ್ ಘನಿ, ತಾಲಿಬಾನ್ ವಿರುದ್ಧ ಕಿಡಿಕಾರಿದ್ದು, ಶಾಂತಿ ಕಾಪಾಡುವ ಯಾವುದೇ ಉದ್ದೇಶ ಮತ್ತು ಇಚ್ಛೆ ತಾಲಿಬಾನ್ಗೆ ಇಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ