
ಇಸ್ಲಾಮಾಬಾದ್ (ಜು.17): ಆರ್ಎಸ್ಎಸ್ ರೀತಿಯ ಸಿದ್ಧಾಂತಗಳು ಭಾರತದ ಜೊತೆಗಿನ ಶಾಂತಿ-ಸಹಬಾಳ್ವೆಗೆ ಅಡ್ಡಿಯಾಗಿವೆ ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ.
ಭಯೋತ್ಪಾದನೆ ಮತ್ತು ಶಾಂತಿ ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವೇ ಎಂಬ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದ ಖಾನ್, ‘ಭಾರತ ಮತ್ತು ನಾವು ಶಾಂತಿ ಮತ್ತು ಸಹಬಾಳ್ವೆ ಜೀವನ ನಡೆಸಲು ದೀರ್ಘಕಾಲದಿಂದ ಕಾಯುತ್ತಿದ್ದೇವೆ. ಆದರೆ ಮಾತುಕತೆಗೆ ಆರ್ಎಸ್ಎಸ್ ಇದಕ್ಕೆ ಅಡ್ಡಿಯಾಗಿದೆ’ ಎಂದರು.
ಪಾಕ್ಗೆ ಕೋವಿಡ್ 4ನೇ ಅಲೆ ಭೀತಿ: ಸೋಂಕಿತರ ಸಂಖ್ಯೆ 3 ಪಟ್ಟು ಏರಿಕೆ!
ಆದರೆ ಇದೇ ವೇಳೆ ಆಷ್ಘಾನಿಸ್ತಾನದ ಬಹುತೇಕ ಭಾಗಗಳನ್ನು ತನ್ನ ವಶಕ್ಕೆ ತೆಗೆದುಕೊಳ್ಳುತ್ತಿರುವ ತಾಲಿಬಾನ್ ಉಗ್ರರ ಮೇಲೆ ಪಾಕಿಸ್ತಾನದ ನಿಯಂತ್ರಣವಿಲ್ಲ ಎಂಬ ಪ್ರಶ್ನೆಗೆ ಖಾನ್ ಅವರು ಉತ್ತರಿಸಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ