
ನವದೆಹಲಿ: 4 ತಿಂಗಳ ಮಗುವಿನ ಕೊಲೆ ಪ್ರಕರಣದಲ್ಲಿ ದೋಷಿ ಎನ್ನಿಸಿಕೊಂಡಿದ್ದ ಉತ್ತರಪ್ರದೇಶದ ಶೆಹಜಾದಿ ಎಂಬ ಮಹಿಳೆಯನ್ನು ಅರಬ್ ರಾಷ್ಟ್ರ ಅಬುಧಾಬಿಯಲ್ಲಿ ಫೆ.15ರಂದು ಮರಣದಂಡನೆ ಶಿಕ್ಷೆಗೆ ಒಳಪಡಿಸಲಾಗಿದೆ.
ತಮ್ಮ ಮಗಳ ಯೋಗಕ್ಷೇಮದ ಮಾಹಿತಿ ಕೋರಿ ಆಕೆಯ ಪೋಷಕರು ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರವು, ಶೆಹಜಾದಿಯನ್ನು ಗಲ್ಲು ಶಿಕ್ಷೆಗೆ ಒಳಪಡಿಸಿರುವ ಆಘಾತಕಾರಿ ಮಾಹಿತಿ ನೀಡಿದೆ. ಇದೇ ವೇಳೆ. ಮಾ.5ರಂದು ಅಬುಧಾಬಿಯಲ್ಲಿ ಆಕೆಯ ಅಂತ್ಯಕ್ರಿಯೆ ನಡೆಯಲಿದ್ದು, ಕುಟುಂಬಸ್ಥರು ಭಾಗವಹಿಸಬಹುದು’ ಎಂದು ವಿದೇಶಾಂಗ ಸಚಿವಾಲಯವು ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಬೇಡ ಬೇಡ ಅಂದ್ರು ಈಜುಕೊಳದಲ್ಲಿ ಪಲ್ಟಿ ಹೊಡೆದ 84ರ ಅಜ್ಜಿ: ವೀಡಿಯೋ ವೈರಲ್
ಏನಿದು ಪ್ರಕರಣ?:
ಉತ್ತರ ಪ್ರದೇಶದ ಶೆಹಜಾದಿ (33) ಎಂಬ ಮಹಿಳೆಗೆ ಉಜೈರ್ ಎಂಬಾತ ವಂಚಿಸಿ ದುಬೈ ದಂಪತಿಗೆ ಮಾರಾಟ ಮಾಡಿದ್ದ. ದಂಪತಿ ಆಕೆಯನ್ನು ತಮ್ಮ ಮಗುವಿನ ಆರೈಕೆಗೆ ನೇಮಿಸಿದ್ದರು. ಆದರೆ ಕೆಲದಿನಗಳಲ್ಲಿ ಮಗು ಮೃತಪಟ್ಟಿತ್ತು. ಶೆಹಜಾದಿಯೇ ಮಗುವಿನ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಿ ದಂಪತಿ ದೂರು ನೀಡಿದ್ದರು. ತನಿಖೆ ಬಳಿಕ ಅಬುಧಾಬಿ ನ್ಯಾಯಾಲಯ ಆಕೆಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.
ಶೆಹಜಾದಿ ರಕ್ಷಣೆ ಕೋರಿ ಆಕೆಯ ಪೋಷಕರು ಕೇಂದ್ರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆ ಪ್ರಕರಣದ ಮರುಪರಿಶೀಲನೆ ನಡೆಸುವಂತೆ ಭಾರತೀಯ ರಾಯಭಾರಿ ಕಚೇರಿ ಅಬುಧಾಬಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆದರೆ ಫೆ.15ರಂದೇ ಆಕೆಯನ್ನು ಗಲ್ಲಿಗೇರಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಬಿಜೆಪಿ ಜೊತೆ ಮೈತ್ರಿಯ ಅಗತ್ಯವಿಲ್ಲ ಎಂದ ಓಮರ್ ಅಬ್ದುಲ್ಲಾ । J&K CM Omar Abdullah on alliance with BJP
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ