ಭಾರತದಿಂದ ಬಾಂಗ್ಲಾದೇಶಕ್ಕೆ ಹಿಂದಿರುಗುವ ಇಂಗಿತ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಶೇಖ್ ಹಸೀನಾ

Published : Feb 18, 2025, 05:45 PM ISTUpdated : Feb 18, 2025, 06:00 PM IST
ಭಾರತದಿಂದ ಬಾಂಗ್ಲಾದೇಶಕ್ಕೆ ಹಿಂದಿರುಗುವ ಇಂಗಿತ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಶೇಖ್ ಹಸೀನಾ

ಸಾರಾಂಶ

ಬಾಂಗ್ಲಾದೇಶದಲ್ಲಿನ ಪರಿಸ್ಥಿತಿ ಸುಧಾರಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹಲ್ಲೆಗೊಳಗಾದ ಪೊಲೀಸ್ ಅಧಿಕಾರಿಯ ಕುಟುಂಬಕ್ಕೆ ಸಹಾಯ ಹಸ್ತ ಚಾಚುವ ಭರವಸೆ ನೀಡಿದ್ದಾರೆ. ಕೊಲೆಗಾರರಿಗೆ ಶಿಕ್ಷೆಯಾಗುವುದು ಖಚಿತ ಎಂದಿರುವ ಅವರು, ಮಧ್ಯಂತರ ಸರ್ಕಾರದ "ಆಪರೇಷನ್ ಡೆವಿಲ್ ಹಂಟ್" ಅನ್ನು ಪ್ರಶ್ನಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಸುಧಾರಿಸಿದೆ. ದೀರ್ಘಕಾಲದಿಂದ ಸಮಸ್ಯೆಗಳು ನಡೆಯುತ್ತಿವೆ. ಈ ನಡುವೆ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶಕ್ಕೆ ವಾಪಸ್ ಬರಲು ಬಯಸಿದ್ದಾರೆ. ಸೋಮವಾರ ರಾತ್ರಿ ಬಾಂಗ್ಲಾದೇಶಕ್ಕೆ ವರ್ಚುವಲ್ ಸಂದೇಶದ ಮೂಲಕ ಅವರು ಆ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ಅವಾಮಿ ಲೀಗ್‌ನ ಸಾಮಾಜಿಕ ಮಾಧ್ಯಮ ಖಾತೆಯಿಂದ ಹಸೀನಾ ಅವರ ಭಾಷಣವನ್ನು ನೇರಪ್ರಸಾರ ಮಾಡಲಾಯಿತು. ಭಾಷಣದ ನಂತರ, ಹಲ್ಲೆಗೊಳಗಾದ ಪೊಲೀಸ್ ಅಧಿಕಾರಿಯ ಪತ್ನಿಯೊಂದಿಗೆ ಮಾತನಾಡಿದರು. ತನ್ನ ಪತಿ ಕುಟುಂಬಕ್ಕೆ ಏನನ್ನೂ ಬಿಟ್ಟಿಲ್ಲ ಎಂದು ಆಕೆ ಹೇಳಿದರು. ಮನೆಯಲ್ಲಿ ಮಕ್ಕಳಿದ್ದಾರೆ. ಈ ಪರಿಸ್ಥಿತಿಯಲ್ಲಿ ಹಸೀನಾ ಅವರ ಸಹಾಯ ಕೋರಿದರು.

ಬಾಂಗ್ಲಾದಿಂದ ಶೇಖ್ ಹಸೀನಾ ಎಸ್ಕೇಪ್‌ ಆಗಿರದಿದ್ದರೆ, 25 ನಿಮಿಷದಲ್ಲಿ ಹತ್ಯೆಯಾಗುತ್ತಿತ್ತು!

ಇದಕ್ಕೆ ಪ್ರತಿಕ್ರಿಯಿಸಿದ ಹಸೀನಾ, ಖಂಡಿತ ನಾನು ಸಹಾಯ ಮಾಡ್ತೀನಿ. ನಾನು ಬರ್ತೀನಿ. ಎಂದು ಹೇಳಿದರು. ಯಾವುದೇ ಕಾರಣಕ್ಕೂ ಕೊಲೆಗಾರರಿಗೆ ತಪ್ಪಿಸಿಕೊಳ್ಳಲು ಬಿಡುವುದಿಲ್ಲ. ನನ್ನ ತಂದೆ-ತಾಯಿ, ಮೂವರು ಸಹೋದರರನ್ನು ಕೊಂದಾಗಲೂ ಅವರಿಗೆ ಕ್ಷಮಾದಾನ ನೀಡಲಾಗಿತ್ತು. ಆದರೆ ನಾನು ಅವರಿಗೆ ಶಿಕ್ಷೆ ವಿಧಿಸಿದೆ. ಈ ಪೊಲೀಸ್ ಹತ್ಯೆಯನ್ನೂ ನಾನು ಒಂದು ದಿನ ನ್ಯಾಯ ನೀಡುತ್ತೇನೆ.

ಸೋಮವಾರ ರಾತ್ರಿ ನಡೆದ ವರ್ಚುವಲ್ ಚರ್ಚೆಯಲ್ಲಿ ಹಸೀನಾ ಪೊಲೀಸ್ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುವ ಭರವಸೆ ನೀಡಿದರು. ಆದರೆ, ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದರು. “ಧೈರ್ಯ ಗೆಡಿರಿ, ಕಾಯಿರಿ. ನಾನು ದೇಶಕ್ಕೆ ವಾಪಸ್ ಬಂದಾಗ, ಪ್ರತಿ ಕುಟುಂಬಕ್ಕೂ ಸಹಾಯ ಮಾಡ್ತೀನಿ. ಕೊಲೆಗಾರರಿಗೆ ಶಿಕ್ಷೆಯಾಗುವುದು ಖಚಿತ” ಎಂದರು.

ಶೇಖ್ ಹಸೀನಾ ವಿಚಾರಣೆಗೆ ಭಾರತಕ್ಕೆ ಬರಲು ತುದಿಗಾಲಲ್ಲಿ ನಿಂತಿದೆ ಬಾಂಗ್ಲಾ ತನಿಖಾ ತಂಡ

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಗೃಹ ಸಚಿವಾಲಯವು ಅಪರಾಧಿಗಳನ್ನು ಹಿಡಿಯಲು ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. “ಆಪರೇಷನ್ ಡೆವಿಲ್ ಹಂಟ್” ಎಂಬ ಹೆಸರಿನಲ್ಲಿ ದೇಶಾದ್ಯಂತ ಸಾವಿರಾರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಶೇಖ್ ಹಸೀನಾ, ಈಗ “ಆಪರೇಷನ್ ಡೆವಿಲ್ ಹಂಟ್” ಶುರುವಾಗಿದೆ. ಯಾರು ಡೆವಿಲ್, ಯಾರನ್ನು ಹುಡುಕುತ್ತಿದ್ದಾರೆ? ಎಂದು ಪ್ರಶ್ನಿಸಿದರು. ಮೃತ ಪೊಲೀಸ್ ಅಧಿಕಾರಿಯ ಕುಟುಂಬದ ಪರಿಸ್ಥಿತಿಯನ್ನು ಉಲ್ಲೇಖಿಸಿ, ಮಧ್ಯಂತರ ಸರ್ಕಾರ ದೇಶವನ್ನು ಆಳಲು ವಿಫಲವಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುರುಷರ ಕೊರತೆ: ಈ ದೇಶದಲ್ಲಿ ಗಂಡನ ಬಾಡಿಗೆಗೆ ಪಡೆಯುತ್ತಾರೆ ಹೆಣ್ಣು ಮಕ್ಕಳು
ಅಸ್ವಸ್ಥ ಖಲೀದಾ ಜಿಯಾ ಹೆಚ್ಚಿನ ಚಿಕಿತ್ಸೆಗೆ ನಾಳೆ ಲಂಡನ್‌ಗೆ