ಶರ​ಣಾ​ಗುವ ಸ್ಥಿತಿ ಬಂದರೆ ತಲೆ​ಗೆ ಗುಂಡು ಹಾರಿಸು: ಅಂಗರಕ್ಷಕನಿಗೆ ಸಲೇಹ್‌ ಸೂಚನೆ!

Published : Sep 06, 2021, 08:57 AM ISTUpdated : Sep 06, 2021, 09:39 AM IST
ಶರ​ಣಾ​ಗುವ ಸ್ಥಿತಿ ಬಂದರೆ ತಲೆ​ಗೆ ಗುಂಡು ಹಾರಿಸು: ಅಂಗರಕ್ಷಕನಿಗೆ ಸಲೇಹ್‌ ಸೂಚನೆ!

ಸಾರಾಂಶ

* ನಾನು ಎಂದಿಗೂ ತಾಲಿಬಾನ್‌ಗೆ ಶರಣಾಗಲ್ಲ: ಮಾಜಿ ಉಪಾಧ್ಯಕ್ಷ * ಶರ​ಣಾ​ಗುವ ಸ್ಥಿತಿ ಬಂದರೆ ತಲೆ​ಗೆ ಗುಂಡು ಹಾರಿಸು: ಅಂಗರಕ್ಷಕನಿಗೆ ಸಲೇಹ್‌ ಸೂಚನೆ

ಕಾಬೂಲ್‌(ಸೆ.06): ಪಂಜ್‌ಶೀರ್‌ ಪ್ರಾಂತ್ಯವನ್ನು ತಾಲಿಬಾನ್‌ ವಶಪಡಿಸಿಕೊಂಡಿರುವ ಬಗ್ಗೆ ಸುದ್ದಿಗಳು ಹರಿದಾಡುತ್ತಿರುವಾಗಲೇ ಮಾಜಿ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್‌, ‘ನಾನು ಎಂದಿಗೂ ತಾಲಿಬಾನ್‌ಗೆ ಶರಣಾಗತನಾಗುವುದಿಲ್ಲ. ಒಂದು ವೇಳೆ ಗಾಯಗೊಂಡು ಶರಣಾಗತನಾಗುವ ಪರಿಸ್ಥಿತಿ ಉದ್ಭವಿಸಿದರೆ ತನ್ನ ತಲೆಗೆ ಗುಂಡಿಟ್ಟು ಹತ್ಯೆ ಮಾಡಿಬಿಡು’ ಎಂದು ತಮ್ಮ ಅಂಗರಕ್ಷಕನಿಗೆ ಸೂಚನೆ ನೀಡಿದ್ದಾರೆ.

 

ಕಾಬೂಲ್‌ ತಾಲಿಬಾನಿಗಳ ವಶವಾಗಿದ್ದು ಹೇಗೆ ಎಂಬ ಕುರಿತು ಡೈಲಿ ಮೇಲ್‌ ವೆಬ್‌ಸೈಟ್‌ನಲ್ಲಿ ಲೇಖನ ಬರೆದಿರುವ ಸಲೇಹ್‌, ‘ಮಾಜಿ ಅಧ್ಯಕ್ಷ ಅಶ್ರಫ್‌ ಘನಿ ಮತ್ತು ಇತರ ಅಧಿಕಾರಿಗಳು ದೇಶಬಿಟ್ಟು ಪರಾರಿ ಆಗುವ ಮೂಲಕ ಜನತೆಗೆ ದ್ರೋಹ ಎಸಗಿದ್ದಾರೆ. ಅವರು ವಿದೇಶಿ ಹೋಟೆಲ್‌ ಮತ್ತು ವಿಲ್ಲಾಗಳಲ್ಲಿ ಉಳಿದುಕೊಂಡಿದ್ದಾರೆ ಮತ್ತು ಅಫ್ಘಾನಿಸ್ತಾನ ಜನರ ಬಳಿ ದಂಗೆ ಏಳುವಂತೆ ಕರೆ ನೀಡಿದ್ದಾರೆ. ಆದರೆ, ಇದು ಹೇಡಿತನ ಕೃತ್ಯ. ನಾವು ದಂಗೆಯನ್ನು ಬಯಸಿದರೆ ದಂಗೆಯನ್ನು ಸ್ವತಃ ಮುನ್ನಡೆಸಬೇಕು’ ಎಂದು ಹೇಳಿದ್ದಾರೆ.

ಇದೇ ವೇಳೆ ತಾವು ಕಾಬೂಲ್‌ ಅನ್ನು ಬಿಡುವಾಗಿನ ಸನ್ನಿವೇಶವನ್ನು ವಿವರಿಸಿರುವ ಸಲೇಹ್‌, ಕಾಬೂಲ್‌ ಬಿಡುವುದಕ್ಕೂ ಮುನ್ನ ನಾನು ಮುಖ್ಯ ಕಾವಲುಗಾರನನ್ನು ಕರೆದು, ‘ನಾವು ಪಂಜ್‌ಶೀರ್‌ಗೆ ತೆರಳುತ್ತಿದ್ದೇವೆ. ನಮ್ಮ ದಾರಿಯನ್ನು ಈಗಾಗಲೇ ನಿರ್ಧರಿಸಿ ಆಗಿದೆ. ಒಂದು ವೇಳೆ ನಾನೇನಾದರೂ ಗಾಯಗೊಂಡರೆ, ನನ್ನ ತಲೆಗೆ ಎರಡು ಬಾರಿ ಗುಂಡು ಹಾರಿಸು. ನಾನು ಎಂದಿಗೂ ತಾಲಿಬಾನಿಗಳಿಗೆ ಶರಣಾಗಲು ಬಯಸುವುದಿಲ್ಲ’ ಎಂದು ತಿಳಿಸಿರುವುದಾಗಿಯೂ ತಮ್ಮ ಲೇಖನದಲ್ಲಿ ಬರೆದುಕೊಂಡಿದ್ದಾರೆ.

ತಾಲಿಬಾನಿಗಳು ಕಾಬೂಲ್‌ ಅನ್ನು ಪ್ರವೇಶಿಸಿದ ವೇಳೆ ಅಫ್ಘಾನಿಸ್ತಾನ ಸೇನೆಯೇ ಅಲ್ಲಿಂದ ಕಾಲು ಕಿತ್ತಿತ್ತು. ಪೊಲೀಸ್‌ ಮುಖ್ಯಸ್ಥರ ಜೊತೆ ಮಾತನಾಡಿ ಯಾವುದೇ ಪಡೆಯನ್ನು ನಿಯೋಜನೆ ಮಾಡಲು ಕೂಡ ನನ್ನಿಂದ ಸಾಧ್ಯವಾಗಲಿಲ್ಲ. ನಾನು ಅಧ್ಯಕ್ಷರ ಅರಮನೆ ಮತ್ತು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಹಮ್ದುಲ್ಲಾ ಮೋಹಿಬ್‌ ಅವರನ್ನು ಸಂಪರ್ಕಿಸಲು ಯತ್ನಿಸಿದೆ. ಆದರೆ, ಅದರಿಂದ ಯಾವುದೇ ಪ್ರಯೋಜನ ಆಗಲಿಲಿಲ್ಲ ಎಂದಿ​ದ್ದಾ​ರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್