
ಕರಾಚಿ: ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿರುವ ಅಮೆರಿಕದ ರಾಯಭಾರ ಕಚೇರಿಗೆ ಗುಂಪೊಂದು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಭಾನುವಾರ ನಡೆದಿದೆ.
ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹಾರಿಸಿದ ಗುಂಡೇಟಿಗೆ 9 ಮಂದಿ ಸಾವನ್ನಪ್ಪಿದ್ದಾರೆ.
ದೂತಾವಾಸಕ್ಕೆ ಮುತ್ತಿಗೆ ಹಾಕುವ ವೇಳೆ ಕೆಲ ಪ್ರತಿಭಟನಾಕಾರರು ಕಲ್ಲುತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸಿದರೂ ಅದು ಫಲಕೊಡದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಈ ವೇಳೆ 9 ಮಂದಿ ಹತರಾಗಿ, 32 ಮಂದಿ ಗಾಯಗೊಂಡಿದ್ದಾರೆ. ಅತ್ತ ಖಮೇನಿ ಹತ್ಯೆ ಖಂಡಿಸಿ ಇಸ್ಲಾಮಾಬಾದ್, ಲಾಹೋರ್ನಲ್ಲಿಯೂ ಪ್ರತಿಭಟನೆ ನಡೆದಿವೆ. ಖಮೇನಿ ಭಾವಚಿತ್ರಗಳನ್ನು ಹಿಡಿದು, ಅಮೆರಿಕ ವಿರುದ್ಧ ಘೋಷಣೆ ಕೂಗುತ್ತಾ ಧರಣಿಯನ್ನು ಮುಂದುವರೆಸಲಾಗಿದೆ. ಭದ್ರತೆ ಬಿಗಿಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ