ಕೋರೋನಾ ನಾಶಕ್ಕೆ ದ್ರಾವಣ ಸಿಂಪಡಣೆ ಭಾರೀ ಡೇಂಜರ್!

Published : May 18, 2020, 08:12 AM ISTUpdated : May 18, 2020, 09:12 AM IST
ಕೋರೋನಾ ನಾಶಕ್ಕೆ ದ್ರಾವಣ ಸಿಂಪಡಣೆ ಭಾರೀ ಡೇಂಜರ್!

ಸಾರಾಂಶ

ಕೋರೋನಾ ನಾಶಕ್ಕೆ ದ್ರಾವಣ ಸಿಂಪಡಣೆ ಡೇಂಜರ್‌: ವಿಶ್ವಸಂಸ್ಥೆ| ವೈರಸ್‌ ಸಾಯಲ್ಲ, ಆರೋಗ್ಯಕ್ಕೆ ಅಪಾಯ

ಜಿನೆವಾ(ಮೇ.18):: ಕೊರೋನಾ ವೈರಸ್‌ ನಾಶಪಡಿಸಲು ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಮನುಷ್ಯರ ಮೇಲೆ ರಾಸಾಯನಿಕ ಮಿಶ್ರಿತ ದ್ರಾವಣ ಸಿಂಪಡಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಮತ್ತು ಅದು ಅಪಾಯಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.

ಈ ಕುರಿತು ವರದಿಯೊಂದನ್ನು ಬಿಡುಗಡೆ ಮಾಡಿರುವ ಸಂಸ್ಥೆ, ‘ಬೀದಿಗಳು ಅಥವಾ ಮಾರುಕಟ್ಟೆಯಂತಹ ಪ್ರದೇಶಗಳಿಗೆ ದ್ರಾವಣ ಸಿಂಪಡಣೆ ಮಾಡುವುದು ಅಥವಾ ಫ್ಯೂಮಿಗೇಶನ್‌ ಮಾಡುವುದರಿಂದ ಕೊರೋನಾ ವೈರಸ್‌ ಸೇರಿದಂತೆ ಯಾವ ವೈರಾಣುವೂ ಸಾಯುವುದಿಲ್ಲ. ಏಕೆಂದರೆ ಈ ರಾಸಾಯನಿಕದ ಶಕ್ತಿ ಬೀದಿಯಲ್ಲಿರುವ ಕೊಳಕಿನಿಂದಲೇ ನಾಶವಾಗಿಹೋಗುತ್ತದೆ. ಮೇಲಾಗಿ ಇಂತಹ ದ್ರಾವಣ ಎಲ್ಲ ಕಡೆಗೂ ತಾಗುವುದಿಲ್ಲ. ಇನ್ನು, ಕ್ಲೋರೀನ್‌ ಹಾಗೂ ಇನ್ನಿತರ ರಾಸಾಯನಿಕಗಳಿರುವ ಈ ದ್ರಾವಣವನ್ನು ಮನುಷ್ಯರ ಮೇಲಂತೂ ಸಿಂಪಡಣೆ ಮಾಡಲೇಬಾರದು. ಅದು ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದಲ್ಲ. ಇಂತಹ ರಾಸಾಯನಿಕ ಸಿಂಪಡಣೆಯಿಂದ ಕೊರೋನಾಪೀಡಿತ ವ್ಯಕ್ತಿ ಇನ್ನೊಬ್ಬರಿಗೆ ಕೊರೋನಾ ಹರಡುವುದನ್ನು ತಪ್ಪಿಸಲು ಅಥವಾ ಆರೋಗ್ಯವಂತ ವ್ಯಕ್ತಿ ಕೊರೋನಾ ಸೋಂಕು ತಗಲಿಸಿಕೊಳ್ಳುವುದನ್ನು ತಪ್ಪಿಸಲು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ.

ಸ್ಯಾನಿಟೈಸರ್‌ ಬಳಕೆ ಹೇಗಿರಬೇಕು? ಬೇಕಾಬಿಟ್ಟಿ ಸ್ಯಾನಿಟೈಸರ್‌ ಬಳಸೋದು ಡೇಂಜರ್!

ಭಾರತ, ಚೀನಾ ಸೇರಿದಂತೆ ಅನೇಕ ದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕೊರೋನಾ ವೈರಸ್‌ ನಾಶಪಡಿಸುವ ಉದ್ದೇಶದಿಂದ ರಾಸಾಯನಿಕ ಸಿಂಪಡಣೆ ಹಾಗೂ ಫ್ಯೂಮಿಗೇಶನ್‌ ಮಾಡಲಾಗುತ್ತಿದೆ. ಮಾರುಕಟ್ಟೆಯಂತಹ ಪ್ರದೇಶಗಳಿಗೆ ಪ್ರವೇಶಿಸುವ ಸಾರ್ವಜನಿಕರ ಮೇಲೂ ರಾಸಾಯನಿಕ ಸಿಂಪಡಣೆ ಮಾಡುವ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಎಚ್ಚರಿಕೆ ಮಹತ್ವ ಪಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!
ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?