
ಕೊಲಂಬೋ(ಜ.14): ಶ್ರೀಲಂಕಾದ ಬಹುತೇಕ ನ್ಯಾಯಾಧೀಶರು ಭ್ರಷ್ಟರು ಎಂಬ ಹೇಳಿಕೆ ನೀಡಿದ ವಿಪಕ್ಷ ನಾಯಕನಿಗೆ ಲಂಕಾದ ಸುಪ್ರೀಂ ಕೋರ್ಟ್ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಲಂಕಾದ ಮಾಜಿ ಸಚಿವ ರಾಮನಾಯಕೆ (57) ಎಂಬುವರೇ 4 ವರ್ಷದ ಸಜೆಗೆ ಗುರಿಯಾದವರು. ಆದರೆ ತಾನು ಭ್ರಷ್ಟಾಚಾರದ ವಿರುದ್ಧ ಧ್ವನಿಯೆತ್ತಿದ್ದಕ್ಕಾಗಿ ನನ್ನನ್ನು ಗುರಿಯಾಗಿಸಲಾಗಿದೆ ಎಂದು ರಂಜನ್ ರಾಮನಾಯಕೆ ಅವರು ದೂರಿದ್ದಾರೆ.
ಆದರೆ ಈ ಬಗ್ಗೆ 20 ಪುಟಗಳ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ನ್ಯಾಯಾಧೀಶರ ವಿರುದ್ಧ 2017ರಲ್ಲಿ ರಾಮನಾಯಕೆ ನೀಡಿದ ಭ್ರಷ್ಟಾಚಾರದ ಹೇಳಿಕೆಯನ್ನು ನ್ಯಾಯಾಂಗ ನಿಂದನೆಯಾಗಿ ಪರಿಗಣಿಸಲಾಗಿದ್ದು, ರಾಮನಾಯಕೆ ದೋಷಿಯಾಗಿದ್ದಾರೆ. ಹಾಗಾಗಿ ಅವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗುತ್ತಿದೆ ಎಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ