ಕತಾರ್ ಭಾರತ ಮೂಲದ ಆಡಳಿತ ಸಮಿತಿಗೆ  ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆ

Published : Jan 19, 2021, 09:28 PM ISTUpdated : Jan 19, 2021, 09:36 PM IST
ಕತಾರ್ ಭಾರತ ಮೂಲದ ಆಡಳಿತ ಸಮಿತಿಗೆ  ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆ

ಸಾರಾಂಶ

ಕತಾರ್ ಭಾರತ ಮೂಲದ ಆಡಳಿತ ಸಮಿತಿಯ ಚುನಾವಣೆ/ ಅವಿರೋಧ ಆಯ್ಕೆಯಾದ ಸುಬ್ರಮಣ್ಯ ಹೆಬ್ಬಾಗಿಲು/ ಕನ್ನಡಿಗರ ಹಿತ  ಕಾಪಾಡಿಕೊಂಡು ಬಂದಿದ್ದಾರೆ

ಕತಾರ್(ಜ. 19)   ಕತಾರ್ ಭಾರತ ಮೂಲದ ಆಡಳಿತ ಸಮಿತಿಯ ಚುನಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಸಾಂಸ್ಕೃತಿಕ ಕೇಂದ್ರದ ಮುಂದಿನ 2 ವರ್ಷಗಳ ಆಡಳಿತ ಸಮಿತಿಗೆ ಸುಬ್ರಮಣ್ಯ ಅವರು ಆಯ್ಕೆಯಾಗಿದ್ದಾರೆ. ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನೆಲೆಸಿರುವ ಭಾರತೀಯರ  ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

'ಡಿಜಿಪೋಲ್' ಎಂಬ ತಂತ್ರಾಂಶವನ್ನು (ಮೊಬೈಲ್  ಎಪ್) ಪ್ರತ್ಯೇಕವಾಗಿ ಈ ಚುನಾಣೆಗೆಂದೇ ಮಾಡಲಾಗಿತ್ತು ಹಾಗೂ ಪ್ರತಿಯೊಬ್ಬರ ಮೊಬೈಲ್ ಗೆ ಇನ್ ಸ್ಟಾಲ್ ಮಾಡಲಾಗಿತ್ತು ಇದರ ಪರಿಣಾಮ ಎಂಬಂತೆ ಶೇ.  90 ಮತದಾನ ಆಯಿತು.

ಕತಾರ್‌ನಲ್ಲಿ ಜಯಭೇರಿ ಬಾರಿಸಿದ ಕನ್ನಡಿಗರಿಗೆ ಸನ್ಮಾನ

 ಸುಬ್ರಮಣ್ಯ ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಯ ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್: ಏನಿದು ಥಾಯ್‌ ವಿಚಿತ್ರ ನಿಯಮ!
ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ