ಈ 7 ಪ್ರಾಂತ್ಯಕ್ಕೆ ಸದ್ಯಕ್ಕೆ ಪ್ರಯಾಣ ಮಾಡದಂತೆ ಭಾರತೀಯರಿಗೆ ರಾಯಭಾರ ಅಧಿಕಾರಿಗಳ ಎಚ್ಚರಿಕೆ

Published : Jul 25, 2025, 03:43 PM ISTUpdated : Jul 25, 2025, 03:45 PM IST
Thailand and Cambodia Clash Over Ancient Temple

ಸಾರಾಂಶ

ವಿದೇಶದ ಈ 7 ಪ್ರಾಂತ್ಯಕ್ಕೆ ಭಾರತೀಯರು ಪ್ರಯಾಣ ಮಾಡಬೇಡಿ ಎಂದು ರಾಯಭಾರಿ ಕಚೇರಿ ಖಡಕ್ ಸೂಚನೆ ನೀಡಿದೆ. ಥಾಯ್ಲೆಂಡ್-ಕಾಂಬೋಡಿಯಾ ಯುದ್ಧದ ಬೆನ್ನಲ್ಲೇ ಅಧಿಕಾರಿಗಳು ಎಚ್ಚರಿಸಿದ್ದಾರೆ. ಯಾವ ಪ್ರಾಂತ್ಯದ ಪ್ರಯಾಣ ರದ್ಧುಗೊಳಿಸಲು ಸೂಚಿಸಿದ್ದಾರೆ.

ಥಾಯ್ಲೆಂಡ್ (ಜು.25) ಭಾರತೀಯರಿಗೆ ವಿದೇಶಾಂಗ ರಾಯಭಾರ ಕಚೇರಿ ಅಧಿಕಾರಿಗಳು ಮಹತ್ವದ ಸೂಚನೆ ನೀಡಿದ್ದಾರೆ. ಥಾಯ್ಲೆಂಡ್ ಹಾಗೂ ಕಾಂಬೋಡಿಯಾ ದೇಶ ಸಾವಿರಾರು ವರ್ಷ ಹಳೇ ಹಿಂದೂ ಶಿವನ ದೇವಾಲಯ ಹಾಗೂ ಸುತ್ತಮುತ್ತಲಿನ ದೇಗುಲಕ್ಕಾಗಿ ಯುದ್ಧ ಆರಂಭಿಸಿದೆ. ರಾಕೆಟ್ ದಾಳಿ, ಆರ್ಟಿಲರಿ, ಮಿಸೈಲ್ ಸೇರಿದಂತೆ ಹಲವು ಶಸ್ತಾಸ್ತ್ರಗಳ ಬಳಕೆ ಮಾಡುತ್ತಿದೆ. ಇದರ ಪರಿಣಾಮ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಥಾಯ್ಲೆಂಡ್‌ನ ಭಾರತೀಯ ರಾಯಭಾರ ಕಚೇರಿ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸದ್ಯ ಥಾಯ್ಲೆಂಡ್‌ನ 7 ಪ್ರಾಂತ್ಯಗಳಿಗೆ ಭೇಟಿ ನೀಡದಂತೆ ಸೂಚನೆ ನೀಡಿದೆ.

ಥಾಯ್ಲೆಂಡ್ ಭಾರತೀಯ ರಾಯಭಾರ ಕಚೇರಿ ಭಾರತೀಯರಿಗೆ ಮಾರ್ಗಸೂಚಿ ಪ್ರಕಟಿಸಿದೆ. ಗುರುವಾರ (ಜುಲೈ 24) ರಂದು ಕಾಂಬೋಡಿಯಾ ಏಕಾಏಕಿ ಥಾಯ್ಲೆಂಡ್ ಮೇಲೆ ರಾಕೆಟ್ ದಾಳಿ ನಡೆಸಿದ್ದರೆ, ಇತ್ತ ಥಾಯ್ಲೆಂಡ್ ಏರ್ ಸ್ಟ್ರೈಕ್ ಮೂಲಕ ಪ್ರತಿದಾಳಿ ನಡೆಸಿದೆ. ಶುಕ್ರವಾರವೂ ದಾಳಿ ಮುಂದುವರಿದಿದೆ. ಈಗಾಲೇ ಥಾಯ್ಲೆಂಡ್ ಪ್ರವಾಸೋದ್ಯಮ ಇಲಾಖೆ ಪ್ರವಾಸಿಗರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಭಾರತೀಯ ರಾಯಭಾರ ಕಚೇರಿ ತಮ್ಮ ಭಾರತೀಯ ನಾಗರೀಕರಿಗೆ ಎಚ್ಚರಿಕೆ ನೀಡಿದೆ.

ಯುದ್ಧದಿಂದ ನಿರ್ಬಂಧಿಸಿರುವ ಥಾಯ್ಲೆಂಡ್‌ನ 7 ಪ್ರಾಂತ್ಯ ಯಾವುದು

ಉಬೋನ್ ರಚ್‌ತಾನಿ

ಸುರಿನ್

ಸಿಸಾಕೆಟ್

ಬುರಿಯಮ್

ಸಾ ಕಾವೋ

ಚಂತಬುರಿ

ಟ್ರಾಟ್

 

 

ಕಾಂಬೋಡಿಯಾ ಗಡಿ ಭಾಗದಲ್ಲಿರುವ ಥಾಯ್ಲೆಂಡ್ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಸಾವಿರಾರು ವರ್ಷಗಳ ಪುರಾತನ ಹಿಂದೂ ದೇವಾಲಯಗಳಿವೆ. ಇಷ್ಟೇ ಅಲ್ಲ ಪ್ರಾಕೃತಿಕವಾಗಿಯೂ ಸುಂದರ ತಾಣಗಳಾಗಿದೆ. ಹೀಗಾಗಿ ಭಾರತ ಮಾತ್ರವಲ್ಲ ಹಲವು ದೇಶಗಳಿಂದ ಈ ಪ್ರಾಂತ್ಯಗಳಿಗೆ ಭೇಟಿ ನೀಡುತ್ತಾರೆ. ಆದರೆ ಸದ್ಯ ಯುದ್ಧದ ಸಂಘರ್ಷ ಹೆಚ್ಚಾಗಿರುವ ಕಾರಣ ಈ ಪ್ರದೇಶಕ್ಕೆ ಭೇಟಿ ನೀಡುವುದು ಸುರಕ್ಷಿತವಲ್ಲ ಎಂದು ಸೂಚಿಸಲಾಗಿದೆ. ಗುರುವಾರ ಕಾಂಬೋಡಿಯಾ ನಡೆಸಿದ ರಾಕೆಟ್ ದಾಳಿಯಲ್ಲಿ 10 ನಾಗರೀಕರು ಮೃತಪಟ್ಟಿದ್ದರು. ಹೀಗಾಗಿ ಪರಿಸ್ಥಿತಿ ಗಂಭೀರವಾಗುತ್ತಿರುವ ಕಾರಣ ಮಹತ್ವದ ಸೂಚನೆ ನೀಡಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!
ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!