ಮ್ಯಾನ್ಮಾರ್‌ ಏರ್‌ಸ್ಟ್ರೈಕ್‌‌ಗೆ ಹೆದರಿ ಥಾಯ್ಲೆಂಡ್‌ಗೆ ಸಾವಿರಾರು ಜನ ವಲಸೆ!

Published : Mar 30, 2021, 12:41 PM IST
ಮ್ಯಾನ್ಮಾರ್‌ ಏರ್‌ಸ್ಟ್ರೈಕ್‌‌ಗೆ ಹೆದರಿ ಥಾಯ್ಲೆಂಡ್‌ಗೆ ಸಾವಿರಾರು ಜನ ವಲಸೆ!

ಸಾರಾಂಶ

 ಮ್ಯಾನ್ಮಾರ್‌ ಮಿಲಿಟರಿ ದಂಗೆ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಸೇನೆ ನಡೆಸುತ್ತಿರುವ ವೈಮಾನಿಕ ದಾಳಿ| ವೈಮಾನಿಕ ದಾಳಿಯಿಂದ ಪಾರಾಗಲು ಸಾವಿರಾರು ಮಂದಿ ಥಾಯ್ಲೆಂಡ್‌ ಕಡೆಗೆ ಪಲಾಯನ 

ಯಾಂಗಾವ್(ಮಾ.30)‌: ಮ್ಯಾನ್ಮಾರ್‌ ಮಿಲಿಟರಿ ದಂಗೆ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಸೇನೆ ನಡೆಸುತ್ತಿರುವ ವೈಮಾನಿಕ ದಾಳಿಯಿಂದ ಪಾರಾಗಲು ಸಾವಿರಾರು ಮಂದಿ ಥಾಯ್ಲೆಂಡ್‌ ಕಡೆಗೆ ಪಲಾಯನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರೆನ್‌ ಗ್ರಾಮದಿಂದ ಜನರ ಸಾಮೂಹಿಕ ವಲಸೆಯನ್ನು ನಿಯಂತ್ರಿಸಲು ಥಾಯ್‌ ಅಧಿಕಾರಿಗಳು ಇಲ್ಲಿನ ವಾಯುವ್ಯ ಗಡಿಯಲ್ಲಿ ಸೋಮವಾರದಿಂದ ಬೀಡುಬಿಟ್ಟಿದ್ದಾರೆ.

ಪ್ರಜಾಪ್ರಭುತ್ವ ಪರ ಪ್ರತಿಭಟನೆ ಹತ್ತಿಕ್ಕಲು ಮ್ಯಾನ್ಮಾರ್‌ ಸೇನೆ ಭಾನುವಾರ ತಡರಾತ್ರಿ 3 ಏರ್‌ಸ್ಟೆ್ರೖಕ್‌ಗಳನ್ನು ನಡೆಸಿದೆ. ಘಟನೆಯಲ್ಲಿ ಓರ್ವ ಮಗು ಗಂಭೀರವಾಗಿ ಗಾಯಗೊಂಡಿದೆ. ಅದೃಷ್ಟವಶಾತ್‌ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಸಂತ್ರಸ್ತ ಕರೆನ್‌ ಗ್ರಾಮಸ್ಥರಿಗೆ ಔಷದೋಪಚಾರ ಸೇರಿದಂತೆ ವಿವಿಧ ರೀತಿಯ ನೆರವು ನೀಡುತ್ತಿರುವ ಫ್ರೀ ಬರ್ಮಾ ಸಂಸ್ಥೆ ತಿಳಿಸಿದೆ.

ಸಂಭಾವ್ಯ ದಾಳಿಯಿಂದ ಪಾರಾಗಿ ಜೀವ ಉಳಿಸಿಕೊಳ್ಳಲು ಸುಮಾರು 2500 ಸಾವಿರ ಮಂದಿ ಎರಡೂ ದೇಶಗಳನ್ನು ವಿಭಜಿಸುವ ಸಾಲ್ವೀನ್‌ ನದಿಯನ್ನು ದಾಟಿ ಬಂದಿದ್ದಾರೆ. ಇನ್ನೂ ಅಂದಾಜು 10,000 ಮಂದಿ ಜೀವಭಯದಲ್ಲಿ ಮ್ಯಾನ್ಮಾರ್‌ನಿಂದ ಪಲಾಯನ ಮಾಡುವ ಸಾಧ್ಯತೆ ಇದೆ ಎಂದು ಏಜೆನ್ಸಿ ತಿಳಿಸಿದೆ.

ಕರೆನ್‌ ಜನರಿಗೆ ಹೆಚ್ಚಿನ ಸ್ವಾಯತ್ತತೆ ನೀಡಬೇಕೆಂದು ಕರೆನ್‌ ನ್ಯಾಷನಲ್‌ ಆರ್ಮಿ ಪ್ರತಿಭಟನೆ ಕೈಗೊಂಡಿದ್ದು, ಈ ಪ್ರತಿಭಟನೆ ಹತ್ತಿಕ್ಕಲು ಸೇನೆ ವೈಮಾನಿಕ ದಾಳಿ ನಡೆಸಿದೆ. ಇದರಿಂದ ಜನರು ಭೀತರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್
ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ: ಧರಣಿ ಗರ ಗರನೇ ತಿರುಗಿದ ಕ್ಷಣದ ವೀಡಿಯೋಗಳು ವೈರಲ್