
ಲಂಡನ್(ಮಾ.04): ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರತಿಭಟನಾಕಾರರ ಸುರಕ್ಷತೆ ವಿಚಾರವು ಮುಂದಿನ ಸೋಮವಾರ ಬ್ರಿಟನ್ ಸಂಸತ್ತಿನಲ್ಲಿ ಪ್ರತಿಧ್ವನಿಸಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆ ವೇಳೆ ಈ ವಿಚಾರಗಳ ಕುರಿತಾಗಿ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ಒತ್ತಾಯಿಸಿ 10 ಸಾವಿರಕ್ಕೂ ಹೆಚ್ಚು ಇ-ಅರ್ಜಿಗಳು ಸಲ್ಲಿಕೆಯಾಗಿತ್ತು. 10 ಸಾವಿರಕ್ಕೂ ಹೆಚ್ಚು ಸಹಿ ಹೊಂದಿದ ಇ-ಅರ್ಜಿಗಳ ಕುರಿತಾಗಿ ಸಂಸತ್ತಿನಲ್ಲಿ ಚರ್ಚೆ ಕೈಗೆತ್ತಿಕೊಳ್ಳಬೇಕು. ಹೀಗಾಗಿ ಈ ಕುರಿತಾಗಿ ಮುಂದಿನ ಸೋಮವಾರ ಬ್ರಿಟನ್ ಸಂಸತ್ತು ಚರ್ಚೆ ನಡೆಸಲಿದೆ ಎಂದು ಬ್ರಿಟನ್ ಸಂಸತ್ತಿನ ಅರ್ಜಿಗಳ ಸಮಿತಿ ಬುಧವಾರ ಖಚಿತಪಡಿಸಿದೆ.
ಲಂಡನ್ನಲ್ಲಿರುವ ಸಂಸತ್ತಿನ ಆವರಣದಲ್ಲಿನ ವೆಸ್ಟ್ಮಿನ್ಸ್ಟರ್ ಹಾಲ್ನಲ್ಲಿ 90 ನಿಮಿಷಗಳ ಈ ಚರ್ಚೆಯಲ್ಲಿ ಸ್ಕಾಟಿಷ್ ನ್ಯಾಷನಲ್ ಪಕ್ಷದ ಸದಸ್ಯರೊಬ್ಬರು ಚರ್ಚೆಗೆ ಚಾಲನೆ ನೀಡಲಿದ್ದು, ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರತಿಭಟನಾಕಾರರ ಸುರಕ್ಷತೆಗೆ ಭಾರತದ ಸರ್ಕಾರದ ಮೇಲೆ ಬ್ರಿಟನ್ ಸರ್ಕಾರ ಒತ್ತಡ ಹೇರಬೇಕು ಎಂದು ಒತ್ತಾಯಿಸಲಿದ್ದಾರೆ. ಆ ಬಳಿಕ ಸಚಿವರೊಬ್ಬರು ಸರ್ಕಾರದ ಪರವಾಗಿ ಉತ್ತರಿಸಲಿದ್ದಾರೆ.
ನೂತನ 3 ಕೃಷಿ ಕಾಯ್ದೆಗಳ ಹಿಂಪಡೆತಕ್ಕೆ ಒತ್ತಾಯಿಸಿ ದಿಲ್ಲಿ ಗಡಿಗಳಲ್ಲಿ ರೈತರು ನಡೆಸುತ್ತಿರುವ ರೈತರ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಸಂಚು ಎಂದು ಆರೋಪಿಸಿತ್ತು. ಇದರ ಬೆನ್ನಲ್ಲೇ, ಭಾರತದ ವಿಚಾರಕ್ಕೆ ಸಂಬಂಧಿಸಿ ಬ್ರಿಟನ್ ಸಂಸತ್ತು ಚರ್ಚೆಗೆ ಅಸ್ತು ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ