
ದೆಹಲಿ(ಮೇ.14): ಪೈಲಟ್ ಮತ್ತು ಖಲ್ಸಾ ಏಡ್ ಸ್ವಯಂಸೇವಕ ಯುಕೆ ಮೂಲದ ಜಸ್ಪಾಲ್ ಸಿಂಗ್ ಅವರಿಗೆ ಪ್ರಧಾನ ಮಂತ್ರಿ ಪಾಯಿಂಟ್ಸ್ ಆಫ್ ಲೈಟ್ ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ.
ಶ್ರೀ ಸಿಂಗ್ ಅವರಿಗೆ ಬರೆದ ವೈಯಕ್ತಿಕ ಪತ್ರದಲ್ಲಿ, ಯುಕೆ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್, ಶ್ರೀ ಕಿಂಗ್ ಅವರು ಕೊರೊನಾವೈರಸ್ ವಿರುದ್ಧದ ಭಾರತದ ಯುದ್ಧಕ್ಕೆ ಅಗಾಧ ಕೊಡುಗೆ ನೀಡಿದ್ದಾರೆ ಎಂದು ಕೇಳಲು ಹೆಮ್ಮೆ ಇದೆ ಎಂದು ಹೇಳಿದ್ದಾರೆ. COVID-19 ವಿರುದ್ಧದ ದೇಶದ ಯುದ್ಧದಲ್ಲಿ ಸಹಾಯ ಮಾಡಲು ಪೈಲಟ್ 200 ದೇಣಿಗೆ ಪಡೆದ ಆಮ್ಲಜನಕ ಕಾನ್ಸನ್ಟ್ರೇಟರ್ ಭಾರತಕ್ಕೆ ತಲುಪಿಸಿದ್ದಾರೆ.
ಅಮೆರಿಕದಲ್ಲಿ 12-15 ವರ್ಷದ ಮಕ್ಕಳಿಗೆ ಸಾಮೂಹಿಕ ಲಸಿಕೆ ಅಭಿಯಾನ
ಭಾರತವು ಕರೋನವೈರಸ್ನ ಎರಡನೇ ಅಲೆಯನ್ನು ಎದುರಿಸುತ್ತಿದ್ದು ದೇಶದ ಹಲವಾರು ಭಾಗಗಳಲ್ಲಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ಕೊರತೆ ಕಂಡುಬಂದಿದೆ. ಇತ್ತೀಚೆಗೆ ಭಾರತೀಯ ಆಸ್ಪತ್ರೆಗಳಲ್ಲಿ ಆಮ್ಲಜನಕದ ಅವಶ್ಯಕತೆಗಳು ಏಕಾಏಕಿ 10 ಪಟ್ಟು ಹೆಚ್ಚಾಗಿದೆ ಎಂದು ಮಿಲಿಯನ್ ಸ್ಪಾರ್ಕ್ಸ್ ಫೌಂಡೇಶನ್ ಸಂಸ್ಥಾಪಕ ಅಭಿನವ್ ಮಾಥುರ್ ಹೇಳಿದ್ದಾರೆ.
ಭಾರತದಲ್ಲಿ COVID-19 ಪರಿಣಾಮವನ್ನು ಕಂಡ ನಂತರ ನೆರವು ನೀಡಲು ಅವರು ಅವರು ಕೆಲಸ ಮಾಡುತ್ತಿದ್ದ ಕಂಪನಿ ಒಪ್ಪಿಗೆ ಕೇಳಿದ್ದರು. ಕೋವಿಡ್ ರಿಲೀಫ್ನಲ್ಲಿ ಅವರು ಮಾಡಿದ ಕೆಲಸಕ್ಕಾಗಿ, ಶ್ರೀ ಸಿಂಗ್ ಅವರಿಗೆ ಪ್ರಧಾನ ಮಂತ್ರಿ ಪಾಯಿಂಟ್ಸ್ ಆಫ್ ಲೈಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ