
ಲಂಡನ್(ಮಾ.15): ಪ್ರತಿಭಟನಾ ನಿರತ ರೈತರನ್ನು ಅನುಚಿತವಾಗಿ ನಡೆಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಭಾರತದ ವಿರುದ್ಧ ತನಿಖಾ ಆಯೋಗ ರಚನೆಗೆ ಒತ್ತಾಯಿಸುತ್ತಿರುವ ಖಲಿಸ್ತಾನ ಪರ ಸಂಘಟನೆ- ಸಿಖ್ ಫಾರ್ ಜಸ್ಟೀಸ್ ತನಗೆ 7 ಲಕ್ಷ ರು. ದೇಣಿಗೆ ನೀಡಿದೆ ಎಂಬ ಸಂಗತಿಯನ್ನು ವಿಶ್ವಸಂಸ್ಥೆ ಖಚಿತಪಡಿಸಿದೆ.
ಸಿಖ್ ಫಾರ್ ಜಸ್ಟೀಸ್ ಸಂಘಟನೆಯನ್ನು ಪ್ರತಿನಿಧಿಸುವ ವ್ಯಕ್ತಿಯೊಬ್ಬರಿಂದ ಮಾ.1ರಂದು 7 ಲಕ್ಷ ರು. ದೇಣಿಗೆ ಸ್ವೀಕರಿಸಲಾಗಿತ್ತು ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಹೈಕಮಿಷನರ್ ಕಚೇರಿಯ ವಕ್ತಾರರೊಬ್ಬರು ಮಾಹಿತಿ ನೀಡಿದ್ದಾರೆ. ವಿಶ್ವಸಂಸ್ಥೆಯ ನಿಷೇಧಿತ ಪಟ್ಟಿಯಲ್ಲಿ ಇಲ್ಲದೇ ಇರುವ ಯಾವುದೇ ಸಂಘಟನೆಯಿಂದ ದೇಣಿಗೆ ಬಂದರೂ ಅದನ್ನು ವಿಶ್ವಸಂಸ್ಥೆ ಸ್ವೀಕರಿಸುತ್ತದೆ.
ಅದೇ ರೀತಿ ಸಿಖ್ ಫಾರ್ ಜಸ್ಟೀಸ್ ಸಂಘಟನೆಯಿಂದಲೂ ದೇಣಿಗೆ ಸ್ವೀಕರಿಸಿದ್ದೇವೆ. ಆದರೆ, ಭಾರತದ ವಿರುದ್ಧ ವಿಶ್ವ ಸಂಸ್ಥೆಯಿಂದ ತನಿಖಾ ಆಯೋಗ ರಚಿಸುವ ಯಾವುದೇ ಉದ್ದೇಶ ಇಲ್ಲ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ