ಲೆಬನಾನ್ ಇಸ್ರೇಲ್ ಗಡಿಯಲ್ಲಿ 600 ಭಾರತೀಯ ಯೋಧರ ನಿಯೋಜನೆ

Published : Sep 25, 2024, 06:46 PM ISTUpdated : Sep 26, 2024, 02:49 PM IST
ಲೆಬನಾನ್ ಇಸ್ರೇಲ್ ಗಡಿಯಲ್ಲಿ 600 ಭಾರತೀಯ ಯೋಧರ ನಿಯೋಜನೆ

ಸಾರಾಂಶ

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಹಾಗೂ ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಯುದ್ಧದಿಂದಾಗಿ ಅಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಯಾವುದೇ ಕ್ಷಣದಲ್ಲಾದರೂ ಅಲ್ಲಿ ಏನು ಬೇಕಾದರೂ ನಡೆಯುವಂತಹ ಸ್ಥಿತಿ ಇದೆ. ಹೀಗಿರುವಾಗ ಅಲ್ಲಿ ಭಾರತೀಯ ಸೇನೆಯ ಯೋಧರನ್ನು ನಿಯೋಜಿಸಲಾಗಿದೆ.

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಹಾಗೂ ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಯುದ್ಧದಿಂದಾಗಿ ಅಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಯಾವುದೇ ಕ್ಷಣದಲ್ಲಾದರೂ ಅಲ್ಲಿ ಏನು ಬೇಕಾದರೂ ನಡೆಯುವಂತಹ ಸ್ಥಿತಿ ಇದೆ. ಹೀಗಿರುವಾಗ ಅಲ್ಲಿ ಭಾರತೀಯ ಸೇನೆಯ ಯೋಧರನ್ನು ನಿಯೋಜಿಸಲಾಗಿದೆ. ವಿಶ್ವಸಂಸ್ಥೆಯ ಶಾಂತಿ ಪಾಲನ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 600ಕ್ಕೂ ಹೆಚ್ಚು ಭಾರತೀಯ ಯೋಧರನ್ನು ಇಸ್ರೇಲ್ ಲೆಬನಾನ್ ಗಡಿ ಭಾಗದಲ್ಲಿ ನಿಯೋಜಿಸಲಾಗಿದ್ದು, ಅಲ್ಲಿ ಭಾರತೀಯ ಸೇನೆ ಮಹತ್ವದ ಪಾತ್ರ ವಹಿಸಲಿದೆ.  

ಇತ್ತೀಚೆಗೆ ಲೆಬನಾನ್‌ನಲ್ಲಿ ನಡೆದ ಪೇಜರ್‌ ಹಾಗೂ ವಾಕಿಟಾಕಿಗಳ ಸ್ಫೋಟದಿಂದಾಗಿ ಹಲವು ಸಾವು ನೋವುಗಳು ಸಂಭವಿಸಿದ್ದು, ಇದಾದ ನಂತರ ಲೆಬನಾನ್ನ ಹೆಜ್ಬುಲ್ಲಾ ಸಂಘಟನೆ ಹಾಗೂ ಇಸ್ರೇಲ್‌ ನಡುವಿನ ಸಂಬಂಧ ಯುದ್ಧದಂಚಿಗೆ ಬಂದು ನಿಂತಿದೆ. ಇಂತಹ ಬಿಸಿಯೇರಿದ ವಾತಾವರಣದಲ್ಲಿ ಅಂದಾಜು 600 ಭಾರತೀಯ ಯೋಧರು ಗಡಿ ಭಾಗದಲ್ಲಿ ಶಾಂತಿ ಹಾಗೂ ಸ್ಥಿರತೆಯ ಬಗ್ಗೆ ತುಂಬಾ ಹತ್ತಿರದಿಂದ ಪರಿಶೀಲಿಸುತ್ತಿದ್ದಾರೆ. 

Israel-Hezbollah War: ಹಿಜ್ಬುಲ್ಲಾಗೆ ಆರಂಭದಲ್ಲೇ ಪೆಟ್ಟು ಕೊಟ್ಟ ಇಸ್ರೇಲ್!

ಭಾರತೀಯ ಯೋಧರು ಬ್ಲೂ ಲೈನ್‌ನಲ್ಲಿ ನಿಯೋಜಿಸಲ್ಪಟ್ಟಿದ್ದು,  ಈ ಬ್ಲೂಲೈನ್‌ ಇಸ್ರೇಲ್ ಹಾಗೂ ಲೆಬನಾನ್‌ ನಡುವಣ ಗಡಿಯಾಗಿದೆ. ವಿಶ್ವಸಂಸ್ಥೆಯ ಶಾಂತಿ ಪಾಲನ ಪಡೆಯ ಇಂಟಿರಿಮ್‌ ಪೋರ್ಸ್‌ ಇನ್ ಲೆಬನಾನ್‌ (UNIFIL) ಭಾಗವಾಗಿ ನಮ್ಮ ಭಾರತೀಯ ಯೋಧರು ಅಲ್ಲಿ ನಿಯೋಜಿಸಲ್ಪಟ್ಟಿದ್ದಾರೆ. ಈ ಹಿಂಸೆ ಪೀಡಿತ ಪ್ರದೇಶದಲ್ಲಿ ಶಾಂತಿ ಸ್ಥಾಪನೆ ಮಾಡುವುದು ಹಾಗೂ ಹಿಂಸಾಚಾರವನ್ನು ತಡೆಯುವುದು ಈ ಪಡೆಯ ಗುರಿಯಾಗಿದೆ. ಇಲ್ಲಿ ಭಾರತೀಯ ಯೋಧರು ನೇರವಾಗಿ ಯುದ್ಧದಲ್ಲಿ ಭಾಗಿಯಾಗುವುದಿಲ್ಲ, ಆದರೆ ಇಲ್ಲಿ ಸ್ಥಿರತೆ  ಕಾಯ್ದುಕೊಳ್ಳುವುದು ಹಾಗೂ ಪ್ರಚೋದನೆಗಳನ್ನು ತಡೆಯುವುದರ ಬಗ್ಗೆ ಅವರು ಗಮನ ಹರಿಸುತ್ತಾರೆ. ಅದರಲ್ಲೂ ಅಲ್ಲಿ ಇರುವ ವಿಶ್ವಸಂಸ್ಥೆಯ ಸಿಬ್ಬಂದಿಯನ್ನು ಕಾಪಾಡುವುದು ಹಾಗೂ ಶಾಂತಿ ಕಾಯ್ದುಕೊಳ್ಳುವ ಕಾರ್ಯಾಚರಣೆ ಸಹಜವಾಗಿ ನಡೆದುಕೊಂಡು ಹೋಗುವಂತೆ ಮಾಡುವುದು ಅವರ ಪ್ರಾಥಮಿಕ ಜವಾಬ್ದಾರಿಯಾಗಿದೆ. ಅಲ್ಲದೇ ಗಡಿಯಲ್ಲಿ ಯಾವುದೇ ಹಿಂಸಾಚಾರ ನಡೆಯದಂತೆ ಕಾಪಾಡುವುದು ಕೂಡ ಅವರ ಜವಾಬ್ದಾರಿಯಾಗಿದೆ. 

ಹಿಜ್ಬುಲ್ಲಾಗಳು ಬಳಸುತ್ತಿದ್ದ ಎಲೆಕ್ಟ್ರಿಕ್ ಉಪಕರಣವಾದ ಪೇಜರ್ ಹಾಗೂ ವಾಕಿಟಾಕಿಗಳು ಒಂದೊಂದೇ ಸ್ಫೋಟಗೊಂಡ ನಂತರ ಇದು ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸುವುದಕ್ಕೆ ಕಾರಣವಾಯ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಡಿಫೆನ್ಸ್ ಫೋರ್ಸ್ ಲೆಬನಾನ್‌ನಾದ್ಯಂತ ನಡೆಸಿದ ದಾಳಿಯಲ್ಲಿ  ಅನೇಕರು 400ಕ್ಕೂ ಹೆಚ್ಚು ಸಾವು ಸಂಭವಿಸಿದ ಬಗ್ಗೆ ವರದಿಯಾಗಿದೆ. 

ಹೇಗಿತ್ತು ಗೊತ್ತಾ ಜಗತ್ತೇ ಕಾಣದ ನಿಗೂಢ ಕಾರ್ಯಾಚರಣೆ..? ಹೇಗೆ ನಡೆಯುತ್ತೆ ಗೊತ್ತಾ ಮೊಸಾದ್ ಕಾರ್ಯಾಚರಣೆ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್
ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ: ಧರಣಿ ಗರ ಗರನೇ ತಿರುಗಿದ ಕ್ಷಣದ ವೀಡಿಯೋಗಳು ವೈರಲ್