ಉಗ್ರರ ಸ್ವರ್ಗಗಳ ಮೇಲೆ ಆರ್ಥಿಕ ದಿಗ್ಬಂಧನ ಹೇರಬೇಕು: ಜಗತ್ತಿಗೆ ಅಮಿತ್ ಶಾ ಕರೆ

Published : Nov 20, 2022, 10:33 AM IST
ಉಗ್ರರ ಸ್ವರ್ಗಗಳ ಮೇಲೆ ಆರ್ಥಿಕ ದಿಗ್ಬಂಧನ ಹೇರಬೇಕು: ಜಗತ್ತಿಗೆ ಅಮಿತ್ ಶಾ ಕರೆ

ಸಾರಾಂಶ

ಭಯೋತ್ಪಾದನೆ ವಿರುದ್ಧ ಜಾಗತಿಕ ಸಮುದಾಯವು ಹೆಗಲಿಗೆ ಹೆಗಲು ಕೊಟ್ಟು ಹೋರಾಡಬೇಕು ಎಂದು ಎಲ್ಲ ದೇಶಗಳಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರೆ ಕೊಟ್ಟಿದ್ದಾರೆ. ಅಲ್ಲದೆ, ‘ಉಗ್ರರ ಸ್ವರ್ಗ’ ಎನ್ನಿಸಿರುವ ದೇಶಗಳ ಮೇಲೆ ಆರ್ಥಿಕ ದಿಗ್ಭಂಧನ ಹೇರಬೇಕು ಎಂದು ಪಾಕಿಸ್ತಾನದ ಹೆಸರೆತ್ತದೇ ಪರೋಕ್ಷ ಮನವಿ ಮಾಡಿದ್ದಾರೆ.

ನವದೆಹಲಿ: ಭಯೋತ್ಪಾದನೆ ವಿರುದ್ಧ ಜಾಗತಿಕ ಸಮುದಾಯವು ಹೆಗಲಿಗೆ ಹೆಗಲು ಕೊಟ್ಟು ಹೋರಾಡಬೇಕು ಎಂದು ಎಲ್ಲ ದೇಶಗಳಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರೆ ಕೊಟ್ಟಿದ್ದಾರೆ. ಅಲ್ಲದೆ, ‘ಉಗ್ರರ ಸ್ವರ್ಗ’ ಎನ್ನಿಸಿರುವ ದೇಶಗಳ ಮೇಲೆ ಆರ್ಥಿಕ ದಿಗ್ಭಂಧನ ಹೇರಬೇಕು ಎಂದು ಪಾಕಿಸ್ತಾನದ ಹೆಸರೆತ್ತದೇ ಪರೋಕ್ಷ ಮನವಿ ಮಾಡಿದ್ದಾರೆ. ದಿಲ್ಲಿಯಲ್ಲಿ ಶುಕ್ರವಾರ ಅರಂಭವಾಗಿದ್ದ 2 ದಿನಗಳ ‘ಭಯೋತ್ಪಾದನೆಗೆ ಹಣಕಾಸು ನೆರವು ಬೇಡ’ ಹೆಸರಿನ 3ನೇ ಅಂತರಾಷ್ಟ್ರೀಯ ಸಮ್ಮೇಳನದ (International Conference) ಸಮಾರೋಪ ಸಮಾರಂಭದಲ್ಲಿ ಶನಿವಾರ ಮಾತನಡಿದ ಶಾ (Amit Shah), ‘ಭಯೋತ್ಪಾದನೆಯನ್ನೇ ತಮ್ಮ ವಿದೇಶಾಂಗ ನೀತಿಯನ್ನಾಗಿ ಮಾಡಿಕೊಂಡಿರುವ ಕೆಲ ದೇಶಗಳು ಭಯೋತ್ಪಾದನೆಗೆ ಸ್ವರ್ಗವಾಗಿವೆ. ಇವುಗಳನ್ನು ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ ಏಕಾಂಗಿಯನ್ನಾಗಿ ಮಾಡುವ ಮೂಲಕ ಭಯೋತ್ಪಾದನೆಯನ್ನು ತಡೆಗಟ್ಟಬಹುದು’ ಎಂದು ಹೇಳಿದರು.ಅಲ್ಲದೇ, ‘ಭಯೋತ್ಪದನೆಗೆ ಯಾವುದೇ ಅಂತರಾಷ್ಟ್ರೀಯ ಗಡಿ ಎಂಬುದಿಲ್ಲ ಹಾಗಾಗಿ ಎಲ್ಲ ಬೇಧಗಳನ್ನು ಮರೆತು ದೇಶಗಳು ಒಂದಾಗಿ ಹೋರಾಡಬೇಕು. ಉಗ್ರರಿಗೆ ಹೊಸ ತಂತ್ರಜ್ಞಾನದ ಮೂಲಕ ಹಣದ ಹರಿವನ್ನೂ ತಡೆಗಟ್ಟಬೇಕು’ ಎಂದರು.


ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ವಿಶ್ವದ ನಾಯಕತ್ವ ವಹಿಸಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ವಿದೇಶಾಂಗ ನೀತಿ ಹೆಸರಲ್ಲಿ ಭಯೋತ್ಪಾದನೆ ಬೆಂಬಲಿಸುವ ದೇಶಗಳಿಗೆ ತಕ್ಕ ಪಾಠ, ಪಾಕ್-ಚೀನಾಗೆ ಮೋದಿ ಎಚ್ಚರಿಕೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆಕಾಶಕ್ಕೇ ಕನ್ನಡಿ ಹಾಕಿ ರಾತ್ರಿಗೆ ಗುಡ್‌ ಬೈ ಸಾಹಸ!
PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!