ವ್ಯಾಪಾರ ಒಪ್ಪಂದದ ಕಿರಿಕ್‌ ಬಳಿಕ ಅಮೆರಿಕ ಅಧ್ಯಕ್ಷರ ಹೊಸ ವಿವಾದ!

Published : Feb 23, 2020, 01:14 PM ISTUpdated : Feb 23, 2020, 05:45 PM IST
ವ್ಯಾಪಾರ ಒಪ್ಪಂದದ ಕಿರಿಕ್‌ ಬಳಿಕ ಅಮೆರಿಕ ಅಧ್ಯಕ್ಷರ ಹೊಸ ವಿವಾದ!

ಸಾರಾಂಶ

ವ್ಯಾಪಾರ ಒಪ್ಪಂದದ ಕಿರಿಕ್‌ ಬಳಿಕ ಅಮೆರಿಕ ಅಧ್ಯಕ್ಷರ ಹೊಸ ವಿವಾದ| ಧಾರ್ಮಿಕ ಸ್ವಾತಂತ್ರ್ಯ ವಿಷಯವನ್ನು ಟ್ರಂಪ್‌ ಚರ್ಚಿಸುತ್ತಾರೆ: ಅಮೆರಿಕ| ಸಿಎಎ, ಎನ್‌ಆರ್‌ಸಿ ಬಗ್ಗೆ ಮಾತಾಡ್ತಾರಾ ಎಂಬ ಪ್ರಶ್ನೆಗೆ ಶ್ವೇತಭವನ ಉತ್ತರ

ವಾಷಿಂಗ್ಟನ್‌[ಫೆ.23]: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಎಂಬುದು ದೇಶದ ಆಂತರಿಕ ವಿಚಾರ ಎಂದು ಭಾರತ ಪ್ರತಿಪಾದಿಸಿಕೊಂಡು ಬಂದಿದ್ದರೂ, ತಮ್ಮ ಭಾರತ ಪ್ರವಾಸ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹಾಗೂ ಸಾರ್ವಜನಿಕ ಭಾಷಣದ ವೇಳೆ ಈ ವಿಚಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಪ್ರಸ್ತಾಪ ಮಾಡುವುದು ಬಹುತೇಕ ಖಚಿತವಾಗಿದೆ.

ಭಾರತದ ಪ್ರಜಾಸತ್ತಾತ್ಮಕ ಸಂಪ್ರದಾಯ ಹಾಗೂ ಸಂಸ್ಥೆಗಳ ಬಗ್ಗೆ ಅಮೆರಿಕ ಬಹಳ ಗೌರವ ಹೊಂದಿದೆ. ಆ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ಭಾರತಕ್ಕೆ ಅಮೆರಿಕ ಪ್ರೋತ್ಸಾಹ ನೀಡಲಿದೆ. ಮೋದಿ ಜತೆಗಿನ ಮಾತುಕತೆ ವೇಳೆ ಧಾರ್ಮಿಕ ಸ್ವಾತಂತ್ರ್ಯ ಕುರಿತ ವಿಚಾರವನ್ನು ಟ್ರಂಪ್‌ ಅವರು ಪ್ರಸ್ತಾಪಿಸಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

ಭಾರತ ಭೇಟಿ ಸಂದರ್ಭ ಮೋದಿ ಅವರೊಂದಿಗಿನ ಸಮಾಲೋಚನೆ ವೇಳೆ ಟ್ರಂಪ್‌ ಅವರು ಸಿಎಎ ಹಾಗೂ ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕ ನೋಂದಣಿ) ವಿಚಾರಗಳನ್ನು ಪ್ರಸ್ತಾಪಿಸುತ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು, ‘ನೀವು ಎತ್ತಿರುವ ವಿಷಯಗಳ ಬಗ್ಗೆ ನಮಗೆ ಕಳವಳವಿದೆ. ಪ್ರಜಾಪ್ರಭುತ್ವ ಹಾಗೂ ಧಾರ್ಮಿಕ ಸ್ವಾತಂತ್ರ್ಯ ಕುರಿತು ಉಭಯ ದೇಶಗಳು ಹೊಂದಿರುವ ಸಂಪ್ರದಾಯ ಕುರಿತು ತಮ್ಮ ಸಾರ್ವಜನಿಕ ಭಾಷಣ ಹಾಗೂ ಮೋದಿ ಜತೆಗಿನ ಖಾಸಗಿ ಮಾತುಕತೆ ವೇಳೆ ಟ್ರಂಪ್‌ ಅವರು ಮಾತನಾಡಲಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯ ವಿಚಾರ ನಮ್ಮ ಆಡಳಿತಕ್ಕೆ ತುಂಬಾ ಮಹತ್ವದ್ದಾಗಿದೆ’ ಎಂದು ಹೇಳಿದ್ದಾರೆ.

ಧಾರ್ಮಿಕ ಸ್ವಾತಂತ್ರ್ಯ, ಧಾರ್ಮಿಕ ಅಲ್ಪಸಂಖ್ಯಾತರಿಗೆ ಗೌರವ ಹಾಗೂ ಎಲ್ಲ ಧರ್ಮಗಳನ್ನು ಸಮಾನ ಕಾಣಬೇಕು ಎಂಬುದು ಭಾರತದ ಸಂವಿಧಾನದಲ್ಲೇ ಇದೆ. ಹೀಗಾಗಿ ಈ ವಿಚಾರ ಅಮೆರಿಕ ಅಧ್ಯಕ್ಷರಿಗೂ ಮಹತ್ವದ್ದು. ಆದ ಕಾರಣ ಈ ವಿಷಯ ಚರ್ಚೆಗೆ ಬರಲಿದೆ. ಭಾರತವು ಪ್ರಜಾಪ್ರಭುತ್ವದ ಬಲಿಷ್ಠ ಬುನಾದಿಯನ್ನು ಹೊಂದಿದೆ. ಧಾರ್ಮಿಕ, ಭಾಷಾ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ಶ್ರೀಮಂತ ದೇಶವಾಗಿದೆ. ಜತೆಗೆ ವಿಶ್ವದ 4 ಪ್ರಮುಖ ಧರ್ಮಗಳ ಜನನ ಸ್ಥಳವಾಗಿದೆ ಎಂದು ಹೇಳಿದ್ದಾರೆ.

ಬಲಿಷ್ಠ ಸಂಬಂಧ:

ಭಾರತಕ್ಕೆ ಅಮೆರಿಕ ಅಧ್ಯಕ್ಷರು ಭೇಟಿ ನೀಡುತ್ತಿರುವುದು ಉಭಯ ದೇಶಗಳ ನಡುವಣ ಬಲಿಷ್ಠ ಹಾಗೂ ದೀರ್ಘಕಾಲಿನ ಸಂಬಂಧವನ್ನು ತೋರ್ಪಡಿಸುತ್ತದೆ ಎಂದು ಶ್ವೇತಭವನ ತಿಳಿಸಿದೆ. ಇದೇ ವೇಳೆ ಈ ಭೇಟಿ ಸಂದರ್ಭ ವ್ಯಾಪಾರ ಒಪ್ಪಂದವೇರ್ಪಡುವ ಸಾಧ್ಯತೆ ಇಲ್ಲ ಎಂದೂ ತಿಳಿಸಿದೆ.

ಫೆಬ್ರವರಿ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!
ಸ್ಲಿಮ್ ಆಗೋಕೆ ಹೋಗಿ ಆರೋಗ್ಯವೇ ಹೋಯ್ತು: 11691 ರೂ ಪಾವತಿಸಿ ತೂಕ ಇಳಿಕೆ ಇಂಜೆಕ್ಷನ್ ಪಡೆದಾಕೆಗೆ ಆಘಾತ