ಕೊರೋನಾ ಹಾವಳಿ ಮಧ್ಯೆ ದಾಳಿ ಇಟ್ಟ RS ವೈರಸ್, ನವಜಾತ ಮಕ್ಕಳೂ ಟಾರ್ಗೆಟ್‌!

Published : Aug 03, 2021, 12:46 PM IST
ಕೊರೋನಾ ಹಾವಳಿ ಮಧ್ಯೆ ದಾಳಿ ಇಟ್ಟ RS ವೈರಸ್, ನವಜಾತ ಮಕ್ಕಳೂ ಟಾರ್ಗೆಟ್‌!

ಸಾರಾಂಶ

* ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಮಧ್ಯೆಮತ್ತೊಂದು ಆತಂಕ * ಅಮೆರಿಕದಲ್ಲಿ ರೆಸ್ಪಿರೇಟರಿ ಸಿನ್ಸಿಟಿಯಲ್ ವೈರಸ್ (RSV) ನಿಂದ ಹೊಸ ಸಮಸ್ಯೆ * ಕಳೆದ 2 ವಾರಗಳಿಂದ 17 ವರ್ಷ ವಯಸ್ಸಿನ ಮಕ್ಕಳಲ್ಲಿ ಹೆಚ್ಚು ಕಾಣಿಸುತ್ತಿದೆ ಈ ಸಮಸ್ಯೆ  

ವಾಷಿಂಗ್ಟನ್(ಆ. 03): ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಮಧ್ಯೆ, ಅಮೆರಿಕದಲ್ಲಿ ರೆಸ್ಪಿರೇಟರಿ ಸಿನ್ಸಿಟಿಯಲ್ ವೈರಸ್ (RSV) ನಿಂದ ಹೊಸ ಸಮಸ್ಯೆ ತಲೆದೋರಿದೆ. ಈ ಸಾಂಕ್ರಾಮಿಕ ರೋಗವು ಕಳೆದ 2 ವಾರಗಳಿಂದ 17 ವರ್ಷ ವಯಸ್ಸಿನ ಮಕ್ಕಳಲ್ಲಿ ಹೆಚ್ಚು ಕಾಣಲಾರಂಭಿಸಿದೆ. ಇನ್ನು ಕೊರೋನಾದ ಡೆಲ್ಟಾ ರೂಪಾಂತರಿ ವೈರಸ್‌ಗಳ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಯುಎಸ್ ಆರೋಗ್ಯ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದು,  ಮಕ್ಕಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದರೆ ಏನು ಮಾಡುವುದು ಎಂಬ ಬಗ್ಗೆ ತಜ್ಞರೂ ಚಿಂತೆ ವ್ಯಕ್ತಪಡಿಸಿದ್ದಾರೆ.

ನ್ಯೂಯಾರ್ಕ್ ಟೈಮ್ಸ್ ವರದಿ, ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಈ ಬಗೆಗಿನ ಅಂಕಿ ಅಂಶಗಳನ್ನು ಮುಂದಿಟ್ಟು, ಜೂನ್ ತಿಂಗಳಲ್ಲಿ ಆರ್‌ಎಸ್‌ವಿ ಪ್ರಕರಣಗಳು ಕ್ರಮೇಣ ಹೆಚ್ಚಾಗಿದೆ, ಕಳೆದ ತಿಂಗಳಿಗಿಂತ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದಿದೆ. ಆರ್‌ಎಸ್‌ವಿ ದಾಳಿ ಇಟ್ಟರೆ ಮೂಗು ಸ್ರವಿಸುವಿಕೆ, ಕೆಮ್ಮು, ಸೀನುವಿಕೆ ಮತ್ತು ಜ್ವರದಂತಹ ಲಕ್ಷಣಗಳನ್ನು ಕಾಣಬಹುದು. ಹೂಸ್ಟನ್‌ನ ಟೆಕ್ಸಾಸ್ ಚಿಲ್ಡ್ರನ್ಸ್ ಹಾಸ್ಪಿಟಲ್‌ನ ಶಿಶುವೈದ್ಯೆ ಹೀದರ್ ಹಕ್ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಹಲವಾರು ತಿಂಗಳುಗಳ ಶೂನ್ಯ ಹಾಗೂ ಕೆಲವೇ ಮಕ್ಕಳಲ್ಲಿ ಈ ಸೋಂಕು ಕಂಡು ಬರುತ್ತಿತ್ತು. ಈಗ ನವಜಾತ ಶಿಶುಗಳು, ಮಕ್ಕಳು ಮತ್ತು ಹದಿಹರೆಯದವರು ಕೋವಿಡ್ ನಿಂದ ಬಳಲುತ್ತಿದ್ದಾರೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದಿದ್ದಾರೆ.

ನ್ಯೂಯಾರ್ಕ್ ಟೈಮ್ಸ್ನ ಮಾಹಿತಿಯ ಪ್ರಕಾರ, ಕಳೆದ ಎರಡು ವಾರಗಳಲ್ಲಿ ಅಮೆರಿಕದಲ್ಲಿ ಹೊಸ ಕೊರೋನವೈರಸ್ ಸೋಂಕಿನ ಪ್ರಕರಣಗಳು ಶೇ 148 ರಷ್ಟು ಹೆಚ್ಚಾಗಿದೆ. ಆದರೆ, ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆ 73 ರಷ್ಟು ಹೆಚ್ಚಾಗಿದೆ. ಡೆಲ್ಟಾ ರೂಪಾಂತರಿಯೇ ಇದಕ್ಕೆ ಕಾರಣವೆನ್ನಲಾಗಿದೆ. ಇದರೊಂದಿಗೆ, ಅನೇಕ ರಾಜ್ಯಗಳಲ್ಲಿ ಲಸಿಕೆ ಅಭಿಯಾನ ನಿಧಾನಗತಿಯಲ್ಲಿ ಸಾಗುತ್ತಿರುವುದೂ ಇದಕ್ಕೆ ಕಾರಣ ಎನ್ನಲಾಗಿದೆ.

ಭಾರತದಲ್ಲಿ ಮಕ್ಕಳ ಲಸಿಕೆ ಹಾಕುವ ಪ್ರಕ್ರಿಯೆ ಎಲ್ಲಿ ತಲುಪಿದೆ?

ಭಾರತದಲ್ಲಿ ಸಾಧ್ಯವಾದಷ್ಟು ಬೇಗ ಮಕ್ಕಳಿಗೆ ಲಸಿಕೆ ಹಾಕಲು ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಕೆಲವು ವರದಿಗಳ ಪ್ರಕಾರ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಮುಂದಿನ ತಿಂಗಳಿನಿಂದ ಮಕ್ಕಳಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಆರಂಭಿಸಬಹುದು ಎಂದು ಹೇಳಿದ್ದರು. ತಜ್ಞರ ಪ್ರಕಾರ, ಸೋಂಕಿನ ಸರಪಳಿಯನ್ನು ನಿಲ್ಲಿಸಲು ಮತ್ತು ಮತ್ತೆ ಶಾಲೆಯನ್ನು ಪ್ರಾರಂಭಿಸಲು ಇದು ಒಂದು ದೊಡ್ಡ ಹೆಜ್ಜೆ ಎನ್ನಲಾಗಿದೆ. ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಮತ್ತು ಝೈಡಸ್ ಕ್ಯಾಡಿಲಾ ಲಸಿಕೆಗಳ ಪ್ರಯೋಗ ನಡೆಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ: ಧರಣಿ ಗರ ಗರನೇ ತಿರುಗಿದ ಕ್ಷಣದ ವೀಡಿಯೋಗಳು ವೈರಲ್
ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ