ಅಮೆರಿಕ ಚುನಾವಣೆ: ಭಾರತೀಯ ಮೂಲದವರ ಬೆಂಬಲ ಕಳೆದುಕೊಂಡರೇ ಬೈಡನ್​ ?

Published : Jul 10, 2024, 05:49 PM IST
ಅಮೆರಿಕ ಚುನಾವಣೆ: ಭಾರತೀಯ ಮೂಲದವರ ಬೆಂಬಲ ಕಳೆದುಕೊಂಡರೇ ಬೈಡನ್​ ?

ಸಾರಾಂಶ

2020ರ ಅಧ್ಯಕ್ಷೀ ಯ ಚುನಾವಣೆಗೆಹೋಲಿಸಿದರೆ 2024ರಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ರನ್ನು ಬೆಂಬಲಿಸುವ ಭಾರತ ಮೂಲದ ಅಮೆರಿಕನ್ನರ ಸಂಖ್ಯೆಯಲ್ಲಿ ಶೇ.19ರಷ್ಟು ಕುಸಿದಿದೆ. 

ಮೆರಿಕ ಅಧ್ಯಕ್ಷ ಜೋ ಬೈಡನ್​ಗೆ ಭಾರತೀಯ ಮೂಲದ ಅಮೇರಿಕನ್ನರ ಬೆಂಬಲ ಕಳೆದುಕೊಂಡಿದ್ದಾರಾ ? ಹೌದು ಎನ್ನುತ್ತಿದೆ ಸಮೀಕ್ಷೆ. ಏಷ್ಯನ್ಅಮೆರಿಕ (ಎಎವಿಎಸ್) ಮತದಾನದ ದೈವಾರ್ಷಿಕ ಸಮೀಕ್ಷೆಯಲ್ಲಿ, ಬೈಡನ್​ ಭಾರತೀಯ ಮೂಲದ ಅಮೇರಿಕನ್ನರ ಬೆಂಬಲ ಕಳೆದುಕೊಂಡಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. 

ಬೈಡನ್ ಬೆಂಬಲಿಸುವ ಭಾರತ ಮೂಲದ ಅಮೆರಿಕನ್ನರ ಸಂಖ್ಯೆಯಲ್ಲಿ ಶೇ.19ರಷ್ಟು ಕುಸಿತ ಆಗಿದೆ’ ಎ್ನುತ್ತಿದೆ ಈ ಸಮೀಕ್ಷೆ. ಏಷ್ಯನ್ ಅಮೆರಿಕದ ಮತದಾರರನ್ನು ಒಳಗೊಂಡು ನಡೆಸಿದ ದೀರ್ಘ ಕಾಲದ ಸಮೀಕ್ಷೆ, ಬೈಡನ್​ ಬೆಚ್ಚಿಬೀಳಿಸುವಂತೆ ಮಾಡಿದೆ. 

ಅಧ್ಯಕ್ಷ ಜೋ ಬೈ ಡನ್ ಹಾಗೂ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂ ಪ್ ನಡುವೆ ಜೂನ್ 27ರಂ ದು ನಡೆದ ಅಧ್ಯಕ್ಷೀಯ ಚರ್ಚೆ ಗೂ ಮುನ್ನ ಈ ಸಮೀಕ್ಷೆ ನಡೆಸಲಾಗಿತ್ತು. 2020ರ ಅಧ್ಯಕ್ಷೀ ಯ ಚುನಾವಣೆಗೆಹೋಲಿಸಿದರೆ 2024ರಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ರನ್ನು ಬೆಂಬಲಿಸುವ ಭಾರತ ಮೂಲದ ಅಮೆರಿಕನ್ನರ ಸಂಖ್ಯೆಯಲ್ಲಿ ಶೇ.19ರಷ್ಟು ಕುಸಿದಿದೆ.  ಎರಡು ದಶಕಗಳಲ್ಲಿ ಅಮೆರಿಕದಲ್ಲಿ ಮತದಾನದ ಹಕ್ಕು ಪಡೆದವರಲ್ಲಿ ಏಷ್ಯನ್–ಅಮೆರಿಕನ್ನರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

2016ಕ್ಕೆ ಹೋಲಿಸಿದರೆ ಮತದಾರರ ಸಂಖ್ಯೆಯಲ್ಲಿ ಶೇ.15ರಷ್ಟು ಏರಿಕೆಯಾಗಿದೆ. 2020ರಲ್ಲಿ ಮೊದಲ ಬಾರಿ ಮತ ಚಲಾಯಿಸಿದವರು ಗೆಲುವಿನ ನಿರ್ಣ ಯದಲ್ಲಿ ಪ್ರಮುಖ ವಹಿಸಿದ್ದ ರಾಜ್ಯಗಳಲ್ಲಿ ಬೈ ಡನ್ ಭಾರಿ ಮುನ್ನಡೆ ಕಾಯ್ದುಕೊಂಡಿದ್ದರು. ಈ ರಾಜ್ಯಗಳಲ್ಲಿಯೇ ಈ ಸಲ ಬೈ ಡನ್, ಬೆಂಬಲಿಸುವವರ ಪ್ರಮಾಣದಲ್ಲಿ ಕುಸಿತವಾಗಿದೆ.

ಇನ್ನು,  ಅಮೆರಿಕದ ಮೊದಲ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಪರ, ಶೇ.54ರಷ್ಟು ಏಷ್ಯನ್ಅಮೆರಿಕನ್ನರು ಒಲವು ಹೊಂದಿದ್ದು, ಶೇ 38ರಷ್ಟು ಮಂದಿ ಕಮಲಾ ಮರು ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಮೀಕ್ಷೆಗಳು ಬೈಡನ್​ ಮತ್ತು ಕಮಲಾ ಹ್ಯಾರಿಸ್​ ತಲೆಬಿಸಿ ಹೆಚ್ಚಿಸಿರುವುದು ಸುಳ್ಳಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

SM
About the Author

Shobha MC

ಮಂಡ್ಯ ಜಿಲ್ಲೆಯ ಮಳವಳ್ಳಿಯವರು. ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಎಂಎ ಮುಗಿಸಿ, ಸೇರಿದ್ದು ವಿಜಯ ಕರ್ನಾಟಕ ಪತ್ರಿಕೆಗೆ. ಸೂರ್ಯೋದಯ ಸೇರಿ ಪತ್ರಿಕೆಗಳಲ್ಲಿ 7 ವರ್ಷಗಳ ಅನುಭವ. ನ್ಯೂಸ್ ಚಾನೆಲ್ಗಳಿನ್ನೂ ಸರಿಯಾಗಿ ಕಣ್ಬಿಡದ ಕಾಲದಲ್ಲೇ ದೃಶ್ಯ ಮಾಧ್ಯಮಕ್ಕೆ ಕಾಲಿಟ್ಟಿದ್ದು, ಟೆಲಿವಿಷನ್ ಪಟ್ಟುಗಳೆಲ್ಲ ಕರತಲಾಮಲಕ. ಉದಯ ಟಿವಿಯಲ್ಲಿ 2 ವರ್ಷ ಸೇವೆ. ಕಳೆದ 17 ವರ್ಷದಿಂದಲೂ ಸುವರ್ಣ ನ್ಯೂಸ್ ಇನ್ಪುಟ್, ಔಟ್ಪುಟ್ ಹೆಡ್ ಆಗಿ ಕಾರ್ಯ ನಿರ್ವಹಣೆ. ಪತ್ರಿಕೆ- ಟಿವಿ ಎರಡರ ಅಗಾಧ ಅನುಭವ ಇರುವ ಏಕೈಕ ಪತ್ರಕರ್ತೆ. ಪ್ರತಿಷ್ಠಿತ ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಪತ್ರಕರ್ತರ ಸಂಘ, ಕೆಂಪೇಗೌಡ ಪ್ರಶಸ್ತಿ, ಪಬ್ಲಿಕ್ ರಿಲೇಷನ್ ಕೌನ್ಸಿಲ್ ಆಫ್ ಇಂಡಿಯಾ, ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿಗಳು ಮುಡಿಗೇರಿವೆ. ಸದ್ಯ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯೆ, ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಸಿಲಬಸ್ ಕಮಿಟಿ ಸದಸ್ಯೆಯಾಗಿಯೂ ನೇಮಕ.Read More...
Read more Articles on
click me!

Recommended Stories

ಟ್ರಂಪ್‌ ತೆರಿಗೆ ಶಾಕ್‌ಗೆ ಚೀನಾ ದಾಖಲೆಯ ತಿರುಗೇಟು
ಮೋದಿ ರೀತಿ ರೈತರಿಗೆ ಟ್ರಂಪ್‌ ಹಣ ವರ್ಗಾವಣೆ