
ಲಂಡನ್(ಜೂ. 03) ಕೊರೋನಾ ಕಾಲದಲ್ಲಿ ಮತ್ತೊಂದು ಸುದ್ದಿ ಬಂದಿದೆ. ಭಾರತದ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ. ಟೋಪಿ ಹಾಕಿ ಲಂಡನ್ ನಲ್ಲಿ ಹಾಯಾಗಿದ್ದ ಒಂದು ಕಾಲದ ಮದ್ಯದ ದೊರೆ ವಿಜಯ್ ಮಲ್ಯರನ್ನು ಭಾರತಕ್ಕೆ ವಾಪಸ್ ಕರೆತರಲಾಗುತ್ತಿದೆ.
ವರದಿ ಹೇಳಿರುವಂತೆ ಬುಧವಾರ ಮಧ್ಯರಾತ್ರಿ ಮುಂಬೈ ವಿಮಾನ ನಿಲ್ದಾಣಕ್ಕೆ ಮಲ್ಯರನ್ನು ಕರೆದು ತರಲಾಗುತ್ತಿದೆ. ಭಾರತದ ವಿದೇಶಾಂಗ ಇಲಾಖೆ ಮಾತ್ರ ಇಲ್ಲಿಯವರೆಗೆ ಯಾವುದೆ ಸ್ಪಷ್ಟನೆ ನೀಡಿಲ್ಲ.
ಕಾನೂನು ಪ್ರಕಾರ ಹೊರಡಿಸಹುದಾದ ಎಲ್ಲ ರೀತಿಯ ನೋಟಿಸ್ ಗಳನ್ನು ವಿಜಯ್ ಮಲ್ಯ ಮೇಲೆ ಈಗಾಗಲೇ ಜಾರಿ ಮಾಡಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್ ಗಳಿಗೆ ಮಲ್ಯ ವಂಚಿಸಿರುವುದು ಒಂಭತ್ತು ಸಾವಿರ ಕೋಟು ರೂ. ಗೂ ಅಧಿಕ!
ಬ್ರಿಟನ್ನಿನ ಪ್ರಜೆಯೂ ಆಗಿರುವ ಮಲ್ಯರನ್ನು ಭಾರತಕ್ಕೆ ಗಡೀಪಾರು ಮಾಡಬೇಕೆಂದು ಅಲ್ಲಿನ ಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಆಯ್ಕೆಗಳೆಲ್ಲ ಇತ್ತೀಚೆಗಷ್ಟೇ ಮುಕ್ತಾಯವಾಗಿದ್ದವು. . ಹೀಗಾಗಿ ಇನ್ನು 28 ದಿನದೊಳಗೆ ಅವರನ್ನು ಗಡೀಪಾರು ಮಾಡಲಾಗುತ್ತದೆ ಎಂದೇ ಹೇಳಲಾಗಿತ್ತು. ಸಾಲ ಮಾಡಿಕೊಂಡಿರುವ ಮಲ್ಯ ಜಾರಿ ನಿರ್ದೇಶನಾಲಯ, ಸಿಬಿಐ ಎಲ್ಲರ ವಿಚಾರಣೆಗೂ ಬೇಕಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ