ಜಾಧವ್‌ಗೆ ಭಾರತೀಯ ವಕೀಲರನ್ನು ನೇಮಕ ಮಾಡಬೇಕು: ಭಾರತ

Published : Aug 22, 2020, 02:30 PM ISTUpdated : Aug 22, 2020, 03:40 PM IST
ಜಾಧವ್‌ಗೆ ಭಾರತೀಯ ವಕೀಲರನ್ನು ನೇಮಕ ಮಾಡಬೇಕು: ಭಾರತ

ಸಾರಾಂಶ

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲಭೂಷಣ್‌ ಜಾಧವ್| ಮೇಲ್ಮನವಿ ಸಲ್ಲಿಸಲು ಭಾರತೀಯ ವಕೀಲರನ್ನು ನೇಮಕ ಮಾಡುವಂತೆ ಭಾರತದ ಒತ್ತಾಯ| 

ನವದೆಹಲಿ(ಆ.22): ಬೇಹುಗಾರಿಕೆಯ ಸುಳ್ಳು ಆರೋಪದಲ್ಲಿ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲಭೂಷಣ್‌ ಜಾಧವ್‌ಗೆ, ತನ್ನ ವಿರುದ್ಧ ನೀಡಲಾಗಿರುವ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಭಾರತೀಯ ವಕೀಲರನ್ನು ನೇಮಕ ಮಾಡಬೇಕು ಎಂದು ಭಾರತ ಮತ್ತೆ ಒತ್ತಾಯಿಸಿದೆ.

ಕುಲಭೂಷಣ್ ಜಾಧವ್ ಕೇಸಲ್ಲಿ ಪಾಕ್ ಮತ್ತೆ ಕ್ಯಾತೆ..!

ಈ ಬಗ್ಗೆ ಸಾಪ್ತಾಹಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಇಲಾಖೆಯ ವಕ್ತಾರ ಅನುರಾಗ್‌ ಶ್ರೀವಾಸ್ತವ, ಮುಕ್ತ ಹಾಗೂ ನ್ಯಾಯೋಚಿತ ವಿಚಾರಣೆಗೆ ಕುಲಭೂಷಣ್‌ ಜಾಧವ್‌ಗೆ ಭಾರತೀಯ ವಕೀಲರನ್ನು ನೇಮಕ ಮಾಡಬೇಕು ಎಂದು ಹೇಳಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಭಾರತದಿಂದ ಮತ್ತೆ ಪಾಕ್‌ ಮಾನ ಹರಾಜು!

ಮಿಲಿಟರಿ ನ್ಯಾಯಾಲಯದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಜಾಧವ್‌ಗೆ ತನ್ನ ತೀರ್ಪಿನ ವಿರುದ್ದ ಇಸ್ಲಾಮಾಬಾದ್‌ ಹೈ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಇದ್ದು, ಈ ವೇಳೆ ಜಾಧವ್‌ ಪರ ಪಾಕಿಸ್ತಾನದ ವಕೀಲ ಇದ್ದರೆ ಪಾಕ್‌ ಸರ್ಕಾರ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಭಾರತೀಯ ವಕೀಲರ ನೇಮಕ ಮಾಡಬೇಕು ಎಂದು ಭಾರತ ಒತ್ತಾಯಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಮನೆ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ ‘ಸಾಕ್ಷ್ಯ’ ಬಿಡುಗಡೆ
ಹೊಸ ವರ್ಷ ಪಾರ್ಟಿಯಲ್ಲಿದ್ದ ಜನರಿಗೆ ಭೂಕಂಪದ ಶಾಕ್, ನೋಡಾ ನಗರದಲ್ಲಿ 6.0 ತೀವ್ರತೆ ಕಂಪನ