ಬಡತನ ಹೋಗಲಾಡಿಸಿದರೂ ನಮಗೆ ನೊಬೆಲ್‌ ಇಲ್ಲ: ಚೀನಾ ಅಳಲು

Published : Oct 17, 2019, 08:29 AM IST
ಬಡತನ ಹೋಗಲಾಡಿಸಿದರೂ ನಮಗೆ ನೊಬೆಲ್‌ ಇಲ್ಲ: ಚೀನಾ ಅಳಲು

ಸಾರಾಂಶ

ಬಡತನ ಹೋಗಲಾಡಿಸಿದರೂ ನಮಗೆ ನೊಬೆಲ್‌ ಇಲ್ಲ: ಚೀನಾ ಅಳಲು| ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್‌ ಬ್ಯಾನರ್ಜಿ ಹಾಗೂ ಇನ್ನಿಬ್ಬರಿಗೆ ಪ್ರತಿಷ್ಠಿತ ನೊಬೆಲ್‌ ಪ್ರಶಸ್ತಿ ಲಭಿಸಿದಕ್ಕೆ ಆಕ್ರೋಶ

ಬೀಜಿಂಗ್‌[ಅ.17] : ಭಾರತದ ವಿರುದ್ಧ ಸದಾ ವಕ್ರ ದೃಷ್ಠಿಯಿಂದ ನೋಡುವ ಚೀನಾ, ಬಡತನ ನಿರ್ಮೂಲನೆ ಪ್ರಯತ್ನಿಸಿದ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್‌ ಬ್ಯಾನರ್ಜಿ ಹಾಗೂ ಇನ್ನಿಬ್ಬರಿಗೆ ಪ್ರತಿಷ್ಠಿತ ನೊಬೆಲ್‌ ಪ್ರಶಸ್ತಿ ಲಭಿಸಿದಕ್ಕೆ ಉರಿದು ಬಿದ್ದಿದೆ.

ಚೀನಾ ಎಂಟೂವರೆ ಕೋಟಿ ಜನರನ್ನು ಭಾರೀ ಬಡತನದಿಂದ ಮೇಲೆತ್ತಿದರೂ ನೊಬೆಲ್‌ ಸಿಕ್ಕಿಲ್ಲ. ಚೀನಾ ಈ ಸಾಧನೆಗೆ ನೊಬೆಲ್‌ ಸಿಗಬೇಕಿತ್ತು ಎಂದು ಅಲ್ಲಿನ ಜನ ಸಾಮಾಜಿಕ ಜಾಲ ತಾಣಗಳಲ್ಲಿ ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ತಮಗೂ ನೊಬೆಲ್‌ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಚೀನಿಯರು ಚಳುವಳಿಯನ್ನೂ ಆರಂಭಿಸಿದ್ದು, ಭಾರೀ ಟ್ರೆಂಡಿಂಗ್‌ ಪಡೆದುಕೊಂಡಿದೆ.

ವಿವಿಧ ಅಭಿಪ್ರಾಯಗಳನ್ನು ವ್ಯಕ್ತ ಪಡಿಸಿರುವ ನೆಟ್ಟಿಗರು, ಚೀನಾದ ಸಹಾಯವಿಲ್ಲದೇ ಯಾವುದೇ ಬಡತನ ನಿರ್ಮೂಲನಾ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್: ಏನಿದು ಥಾಯ್‌ ವಿಚಿತ್ರ ನಿಯಮ!
ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ