
ಜಮ್ಮು(ಮಾ.29): ಉತ್ತರ ಕಾಶ್ಮೀರದ ತೀತ್ವಾಲ್ನ ಪಾಕ್-ಭಾರತ ಗಡಿ ನಿಯಂತ್ರಣ ರೇಖೆಯ ಬಳಿ ಮಾತಾ ಶಾರದಾ ದೇವಾಲಯ ಹಾಗೂ ಕೇಂದ್ರದ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಈ ದೇವಾಲಯ ನಿರ್ಮಾಣ ಯೋಜನೆಗೆ 2021 ಡಿಸೆಂಬರ್ನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಇದಕ್ಕೆ ಶೃಂಗೇರಿಯ ಮಠ ಅನುಮೋದನೆ ನೀಡಿದ್ದು, ಕರ್ನಾಟಕದ ಬಿಡದಿಯಲ್ಲಿ ದೇವಾಲಯ ನಿರ್ಮಾಣಕ್ಕೆ ಬೇಕಾದ ಕಲ್ಲುಗಳನ್ನು ಕೆತ್ತಲಾಗುತ್ತಿದೆ.
‘ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿರುವ ಈ ದೇವಾಲಯವನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಶತಮಾನಗಳಷ್ಟುಹಳೆಯದಾದ ಶಾರದಾಪೀಠ ದೇವಾಲಯ ಪುನರುಜ್ಜೀವನಗೊಳಿಸುವ ಉದ್ದೇಶದಿಂದ ನಿರ್ಮಾಣ ಮಾಡಲಾಗುತ್ತಿದೆ. ದೇವಾಲಯ ನಿರ್ಮಾಣ ಮಾಡುವ ಸ್ಥಳದಲ್ಲಿ ಪೂಜೆಯನ್ನು ಕೈಗೊಳ್ಳಲಾಗಿತ್ತು. ದೇಶದ ವಿವಿಧ ಭಾಗದಲ್ಲಿರುವ ಕಾಶ್ಮೀರಿ ಹಿಂದೂಗಳು ಹಾಗೂ ಸಿಖ್ಖರು ಭಾಗವಹಿಸಿದ್ದರು’ ಎಂದು ಸೇವ್ ಶಾರದಾ ಸಮಿತಿಯ ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ