ಕನ್ನಡಿಗ ಶ್ರೀ ಶ್ರೀ ರವಿಶಂಕರ್ ಗುರೂಜಿ ನೇತೃತ್ತದಲ್ಲಿ ವಿಶ್ವದ ಮೊದಲ ಧ್ಯಾನ ದಿನ!

Published : Dec 22, 2024, 06:00 AM IST
ಕನ್ನಡಿಗ ಶ್ರೀ ಶ್ರೀ ರವಿಶಂಕರ್ ಗುರೂಜಿ ನೇತೃತ್ತದಲ್ಲಿ ವಿಶ್ವದ ಮೊದಲ ಧ್ಯಾನ ದಿನ!

ಸಾರಾಂಶ

ಭಾರತ ಮತ್ತು ವಿಶ್ವಸಂಸ್ಥೆ ಸಹಭಾಗಿತ್ವದಲ್ಲಿ 'ಜಾಗತಿಕ ಶಾಂತಿ ಮತ್ತು ಸಾಮರಸ್ಯಕ್ಕಾಗಿ ಧ್ಯಾನ' ಎಂಬ ಘೋಷ ವಾಕ್ಯದಡಿ ಮೊದಲ ಬಾರಿಗೆ ವಿಶ್ವ ಧ್ಯಾನ ದಿನವನ್ನು ಶನಿವಾರ ಆಚರಿಸಲಾಯಿತು. ಈ ಮೂಲಕ ಮುಂದಿನ ವರ್ಷಗಳಲ್ಲಿ ಡಿ.21ರಂದು ವಿಶ್ವ ಧ್ಯಾನ ದಿನ ಆಚರಣೆಗೆ ಮುನ್ನುಡಿ ಬರೆಯಲಾಗಿದೆ. ಬಳಿಕ ಶ್ರೀ ಶ್ರೀ ನೇತೃತ್ವದಲ್ಲಿ ಧ್ಯಾನ ಕಾರ್ಯಕ್ರಮ ನಡೆಸಲಾಗಿದೆ. 

ವಿಶ್ವಸಂಸ್ಥೆ(ಡಿ.22):  ಭಾರತದ ಯೋಗ ಪರಂಪರೆಗೆ ಈ ಹಿಂದೆ ಮನ್ನಣೆ ನೀಡಿದ್ದ ವಿಶ್ವಸಂಸ್ಥೆ ಇದೀಗ ಭಾರತದ ಧ್ಯಾನಕ್ಕೂ ಮನ್ನಣೆ ನೀಡಿದೆ. ಕನ್ನಡಿಗ ಶ್ರೀ ಶ್ರೀ ರವಿಶಂಕರ್ ಗುರೂಜಿ ನೇತೃತ್ವದಲ್ಲಿ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮೊದಲ ವಿಶ್ವ ಧ್ಯಾನ ದಿನ ಘೋಷಣೆ ಮಾಡಲಾಗಿದ್ದು, ಮೊದಲ ದಿನವನ್ನು ಶನಿವಾರ ವಿಶ್ವಾದ್ಯಂತ ಆಚರಿಸಲಾಗಿದೆ. ಮೊದಲ ದಿನದ ವಿಶ್ವ ಧ್ಯಾನದ ಆಚರಣೆಯಲ್ಲಿ ವಿಶ್ವದ ನೂರಾರು ದೇಶಗಳ 85 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದು ಗಿನ್ನೆಸ್ ದಾಖಲೆ ಪುಟಕ್ಕೆ ಸೇರಿದೆ. 

ಭಾರತ ಮತ್ತು ವಿಶ್ವಸಂಸ್ಥೆ ಸಹಭಾಗಿತ್ವದಲ್ಲಿ 'ಜಾಗತಿಕ ಶಾಂತಿ ಮತ್ತು ಸಾಮರಸ್ಯಕ್ಕಾಗಿ ಧ್ಯಾನ' ಎಂಬ ಘೋಷ ವಾಕ್ಯದಡಿ ಮೊದಲ ಬಾರಿಗೆ ವಿಶ್ವ ಧ್ಯಾನ ದಿನವನ್ನು ಶನಿವಾರ ಆಚರಿಸಲಾಯಿತು. ಈ ಮೂಲಕ ಮುಂದಿನ ವರ್ಷಗಳಲ್ಲಿ ಡಿ.21ರಂದು ವಿಶ್ವ ಧ್ಯಾನ ದಿನ ಆಚರಣೆಗೆ ಮುನ್ನುಡಿ ಬರೆಯಲಾಗಿದೆ. ಬಳಿಕ ಶ್ರೀ ಶ್ರೀ ನೇತೃತ್ವದಲ್ಲಿ ಧ್ಯಾನ ಕಾರ್ಯಕ್ರಮ ನಡೆಸಲಾಗಿದೆ. 

ಈ ನವರಾತ್ರಿಯಂದು ನಿಮ್ಮ ಸಂಕಲ್ಪಗಳನ್ನು ಸಾಕಾರಗೊಳಿಸಿ ಗುರುದೇವ್ ಶ್ರೀ ಶ್ರೀ ರವಿಶಂಕರ್

ವಿಶ್ವ ಧ್ಯಾನ ದಿನ ಘೋಷಣೆ ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗುರುದೇವ್ ಶ್ರೀ ಶ್ರೀ ರವಿಶಂಕರ್, 'ಒಂದು ಪ್ರಶಾಂತವಾದ ಮನಸ್ಸು ಇತರ ನೂರು ಜನರಿಗೆ ಉತ್ತಮವಾದ ವಾತಾವರಣ ಸೃಷ್ಟಿಸಬಲ್ಲದು. ಸಾಮೂಹಿಕ ಒಳಿತಿಗಾಗಿ, ಸಾಮರಸ್ಯಕ್ಕಾಗಿ ಮತ್ತು ಆಧ್ಯಾತ್ಮಿಕ ಬೆಳವಣಿಗೆಗಾಗಿ ವ್ಯಕ್ತಿಗಳು ಹಾಗೂ ರಾಷ್ಟ್ರಗಳು ಧ್ಯಾನವನ್ನು ಆಲಿಂಗಿಸಬೇಕು' ಎಂದು ಕರೆ ನೀಡಿದರು. 

ದಿನನಿತ್ಯದ ಜೀವನದಲ್ಲಿ ಧ್ಯಾನವನ್ನು ಅಳವಡಿಸಿಕೊಳ್ಳಲೇಬೇಕಾದ ತುರ್ತು ಸ್ಥಿತಿ ಈಗ ಬಂದಾಗಿದೆ ಎಂದ ಅವರು 'ಧ್ಯಾನವು ಪ್ರತಿಯೊಂದು ವ್ಯಕ್ತಿಗೂ, ಪ್ರತಿಯೊಂದು ಮನೆಗೂ ತಲುಪಬೇಕು. ಇದು ಆಧುನಿಕ ದಿನದ ಸವಾಲುಗಳಾದ ಆತಂಕ, ಕೌಟುಂಬಿಕ ಹಿಂಸಾಚಾರ, ಮಾದಕ ಚಟಗಳಿಂದ ಹೊರಬರುವ ದಾರಿಯಾಗಿದೆ. ಧ್ಯಾನವು ಧರ್ಮಗಳನ್ನು, ಭೂಮಿಯ ಗಡಿಗಳನ್ನು, ವಯೋಮಿತಿಗಳನ್ನು ಮೀರಿರುವಂತದ್ದು. ಇದರಿಂದಾಗಿ ಧ್ಯಾನವು ಜಾಗತಿಕವಾಗಿ ಪ್ರಸಕ್ತವಾಗಿದೆ. ಪ್ರತಿಯೊಂದು ರಾಷ್ಟ್ರವೂ ಸಹ ತನ್ನ ಪ್ರಜೆಗಳಿಗೆ ಹೇಗೆ ವಿಶ್ರಮಿಸುವುದು, ತಮ್ಮ ಭಾವನೆಗಳನ್ನು ಹೇಗೆ ನಿಭಾಯಿಸುವುದು ಎಂಬುದರ ಬಗ್ಗೆ ಪ್ರಶಿಕ್ಷಣವನ್ನು ನೀಡಿದರೆ, ಈ ಜಗತ್ತು ಬಹಳ ಉತ್ತಮವಾದ ಸ್ಥಳವಾಗುತ್ತದೆ' ಎಂದು ಹೇಳಿದರು. 

ಬರಲಿದೆ ಶ್ರೀ ಶ್ರೀ ರವಿಶಂಕರ ಗುರೂಜಿ ಜೀವನಕಥನ ಆಧರಿಸಿದ ಸಿನಿಮಾ..!

ಮೂರು ದಾಖಲೆ: 

ಶ್ರೀ ಶ್ರೀ ನೇತೃತ್ವದ ಆರ್ಟ್ ಆಫ್ ಲಿವಿಂಗ್ ನೇತೃತ್ವದಲ್ಲಿ ಶನಿವಾರ ವಿಶ್ವಾದ್ಯಂತ ಧ್ಯಾನ ದಿನ ಆಚರಿಸಲಾಯಿತು. ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ 85 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಂಡರು. ಶನಿವಾರದ ಕಾರ್ಯಕ್ರಮವು ಗಿನ್ನೆಸ್ ವಿಶ್ವದಾಖಲೆ, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ವಿಶ್ವದಾಖಲೆ ದಾಖಲೆಗಳ ಪುಟ ಸೇರುವಲ್ಲಿ ಯಶಸ್ವಿಯಾಗಿದೆ. 

ಧರ್ಮ, ಜಾತಿ, ಗಡಿ ಮೀರಿದೆ ಧ್ಯಾನ 

ಧ್ಯಾನವು ಧರ್ಮ, ಭೂಮಿಯ ಗಡಿ, ವಯೋಮಿತಿಗಳ ಮೀರಿರುವಂ ತಹದ್ದು. ಹೀಗಾಗಿ ಧ್ಯಾನವು ಜಾಗತಿಕವಾಗಿ ಪ್ರಸಕ್ತವಾಗಿದೆ. ಪ್ರತಿಯೊಂದು ರಾಷ್ಟ್ರವೂ ತನ್ನ ಪ್ರಜೆಗಳಿಗೆ ಹೇಗೆ ವಿಶ್ರಮಿಸುವುದು, ತಮ್ಮ ಭಾವನೆಗಳನ್ನು ಹೇಗೆ ನಿಭಾ ಯಿಸುವುದು ಎಂಬುದರ ಬಗ್ಗೆ ಪ್ರಶಿಕ್ಷಣವನ್ನು ನೀಡಿದರೆ, ಈ ಜಗತ್ತು ಬಹಳ ಉತ್ತಮವಾದ ಸ್ಥಳವಾಗುತ್ತದೆ ಎಂದು ಶ್ರೀ ಶ್ರೀ ರವಿಶಂಕರ ಗುರೂಜಿ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ: ಧರಣಿ ಗರ ಗರನೇ ತಿರುಗಿದ ಕ್ಷಣದ ವೀಡಿಯೋಗಳು ವೈರಲ್
ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ