
ನವದೆಹಲಿ (ಏ. 30) ಭಾರತದ ನೆರವಿಗೆ ನಾವು ಬರುತ್ತೇವೆ ಎಂದು ಚೀನಾ ಹೇಳಿತ್ತು. ಈಗ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂದೇಶ ರವಾನಿಸಿದ್ದು, ಕೋವಿಡ್ -19 ಪರಿಸ್ಥಿತಿಯನ್ನು ಎದುರಿಸಲು ಸಹಕಾರ ನೀಡುತ್ತೇವೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.
ಕೊರೋನಾ ಆರಂಭವಾದ ನಂತರ ಎರಡು ರಾಷ್ಟ್ರಗಳ ನಾಯಕರ ನಡುವೆ ಇದೇ ಮೊದಲ ಸಾರಿ ಸಂವಹನವಾಗಿದೆ. ಇನ್ನೊಂದು ಕಡೆ ಎರಡು ದೇಶದ ವಿದೇಶಾಂಗ ಸಚಿವರ ನಡುವೆ ದೂರವಾಣಿ ಮಾತುಕತೆಯೂ ನಡೆದಿದೆ.
ಭಾರತದ ಹೋರಾಟಕ್ಕೆ ಜಪಾನ್ ನೆರವು, ಆಕ್ಸಿಜನ್, ವೆಂಟಿಲೇಟರ್ ಹೆಲ್ಪ್
ಶುಕ್ರವಾರ ಮಾತನಾಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್, ಭಾರತದಲ್ಲಿ ಸಾಂಕ್ರಾಮಿಕ ಪರಿಸ್ಥಿತಿಯನ್ನು ಚೀನಾ ನಿಕಟವಾಗಿ ಅನುಸರಿಸುತ್ತಿದೆ ಎಂದು ಹೇಳಿದರು. ಭಾರತದ ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಅವರಿಗೆ ಸಂದೇಶ ಬಂದಿದೆ.
ಚೀನಾ ಮತ್ತು ಭಾರತದ ನಡುವೆ ಗಡಿ ವಿವಾದ ನಡೆದೇ ಇದೆ. ಚೀನಿ ಆಪ್ ಗಳನ್ನು ನಿಷೇಧ ಮಾಡಿದ್ದ ಭಾರತ ತಿರುಗೇಟು ನೀಡಿತ್ತು. ಆದರೆ ಈಗ ಎಲ್ಲರ ಪರಿಸ್ಥಿತಿ ಕೊರೋನಾ ವಿರುದ್ಧ ಹೋರಾಡುವುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ