ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್ ಸ್ಪೋರ್ಟ್ಸ್ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಒನ್ ಇಂಡಿಯಾ, ವಿಜಯ ಕರ್ನಾಟಕ ವೆಬ್, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಸುವರ್ಣ ನ್ಯೂಸ್ ಸುದ್ದಿ ಮಾಧ್ಯಮದ ಡಿಜಿಟಲ್ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ದೃಶ್ಯ ಮಾಧ್ಯಮ, ಡಿಜಿಟಲ್ ಮಾಧ್ಯಮದಲ್ಲಿ 4ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಪತ್ರಿಕೋದ್ಯಮದ ಸ್ನಾತಕೋತ್ತರ ಪದವಿ ಇದೆ. ಜ್ಯೋತಿಷ್ಯ, ಲೈಫ್ಸ್ಟೈಲ್ ನೆಚ್ಚಿನ ಕ್ಷೇತ್ರ. ಉತ್ತರ ಕನ್ನಡದ ಹುಡುಗಿ. ಚಿತ್ರಕಲೆ ಪಂಚಪ್ರಾಣ. ಓದು, ಪ್ರಕೃತಿ ಸೌಂದರ್ಯ ಸವಿಯುವುದು ಇಷ್ಟ.
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್ ನ್ಯೂಸ್ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಹುಟ್ಟಿದ್ದು ಬೆಂಗಳೂರು ಗ್ರಾಮಾಂತರದ ಶಿವಗಂಗೆಯ ಆಲೂರು. ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಎಂಎಸ್ಸಿ ಪದವೀಧರ. 2011ರಲ್ಲಿ ಪತ್ರಿಕೋದ್ಯಮಕ್ಕೆ ಎಂಟ್ರಿ. ಅಲ್ಲಿಂದ ಈವರೆಗೆ 4 ನ್ಯೂಸ್ ಚಾನಲ್ಸ್, ಪತ್ರಿಕೆಯೊಂದರಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. 2014ರಿಂದಲೂ ಸುವರ್ಣ ನ್ಯೂಸ್ನಲ್ಲಿ ಕೆಲಸ. ಕ್ರೈಂ ರಿಪೋರ್ಟರ್ ಆಗಿದ್ದೆ. ಈಗ ನ್ಯೂಸ್ ರೂಂನ ಕರೆಂಟ್ ಅಫೇರ್ಸ್ ಹೊಣೆ ಇದೆ. ಸಂಜೆ 6 ಗಂಟೆಗೆ ನ್ಯೂಸ್ 360 ಎಂಬ ಕನ್ನಡದ ಮೊದಲ ಎಕ್ಸ್ ಪ್ಲೇನರ್ ಶೋ ನಡೆಸಿ ಕೊಡುತ್ತೇನೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಆಸಕ್ತಿ. ಬರೆಯೋದು ನೆಚ್ಚಿನ ಹವ್ಯಾಸ.
ಸ್ವಾಮಿನಾಥನ್ ಗುರುಮೂರ್ತಿ ತುಘಲಕ್ ಸಂಪಾದಕರು. ಇವರ ದೃಷ್ಟಿಕೋನವನ್ನು ನಿಮಯ ರೂಪಿಸುವವರು ಸದಾ ಗಮನಿಸುತ್ತಿರುತ್ತಾರೆ. ರಾಜ್ಯ ರಾಜಕಾರಣದ ಗಮ್ಯ ತಲುಪುವಲ್ಲಿಯೂ ಇವರ ಚಿಂತನೆಗಳು ಮುಖ್ಯ ಪಾತ್ರವಹಿಸುತ್ತವೆ. ದಶಕಗಳ ಇವರ ವಸ್ತು ನಿಷ್ಟ ವರದಿಗಳು ದೇಶಾದ್ಯಾಂತ ಹಲವು ತಿರುವುಗಳಿಗೆ ಕಾರಣವಾಗಿವೆ. ಕಾರ್ಪೋರೇಟ್ ಜಗತ್ತಿನ ದೈತ್ಯ ಕಂಪನಿಗಳಾದ ರಿಲಯನ್ಸ್ನಂತ ಕಂಪನಿಗಳು ಹಾಗೂ ಸರಕಾರದ ನಡುವಿನ ಕಾನೂನುಬಾಹಿರ ವ್ಯವಹಾರ, ಬೋಫೋರ್ಸ್ನಂತ ಹಗರಣಗಳ ಬಗ್ಗೆ ಇಡೀ ಜಗತ್ತಿಗೇ ಗೊತ್ತು ಮಾಡಿಸಿದ ಇವರು ಭ್ರಷ್ಟಚಾರದ ವಿರುದ್ಧ ಸಮರ ಸಾರಿದವರು. ಗುಣಮಟ್ಟದ ಸಂಶೋಧನೆ, ಆಳ ಅಧ್ಯಯನ ಹಾಗೂ ಸಂಘರ್ಷಕ್ಕೆ ಪರಿಹಾರ ಕಂಡು ಕೊಳ್ಳುವ ವಿವೇಕಾನಂದ ಅಂತಾರಾಷ್ಟ್ರೀಯ ಸಂಸ್ಥೆಯ ಸಂಸ್ಥಾಪಕರಲ್ಲಿ ಒಬ್ಬರು. ಐಐಟಿ ಮುಂಬೈ ಅತಿಥಿ ಉಪನ್ಯಾಸಕರು. ಅರ್ಥಶಾಸ್ತ್ರ, ವಿತ್ತೀಯ ನಿರ್ವಹಣೆ ಪರಿಣತರು. ಸಸ್ತ್ರ ವಿಶ್ವವಿದ್ಯಾಲಯದ ಕಾನೂನು ಮಾನವಶಾಸ್ತ್ರದ ಪ್ರಸಿದ್ಧ ಪ್ರಾಧ್ಯಾಪಕರೂ ಹೌದು.
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ. ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ ಜನಶ್ರೀ, ಸಮಯ ಹಾಗೂ ಈ ನಾಡು ಇಂಡಿಯಾ ಈ ಟಿವಿ ಭಾರತ್ ಸೇರಿ ಎಲೆಕ್ಟ್ರಿಕ್ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಊರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್ನಲ್ಲೀಗ ಸೀನಿಯರ್ ಸಬ್ ಎಡಿಟರ್.
ಭವಾನಿ ಭಟ್ ನಾನೊಬ್ಬ ಗೃಹಿಣಿ. ಕನ್ನಡ ಪತ್ರಿಕೆಗಳಿಗೆ ಬೇರೆ ಬೇರೆ ಹೆಸರಲ್ಲಿ ಬರೆಯುತ್ತೇನೆ. ಕೆಲವು ಕಾಲ ಕನ್ನಡದ ಪತ್ರಿಕೆಗಳ ರಿಪೋರ್ಟಂಗ್ ಮತ್ತು ಡೆಸ್ಕ್ನಲ್ಲಿದ್ದು ಪಳಗಿದೆ. ಬಳಿಕ ಸುಮಾರು 15 ವರ್ಷಗಳಿಂದ ಫ್ರೀಲ್ಯಾನ್ಸರ್ ಆಗಿ ಲೇಖನಗಳನ್ನು ಬರೆಯುತ್ತಿದ್ದೇನೆ. ಡಿಜಿಟಲ್ ಕ್ಷೇತ್ರ ಬೆಳವಣಿಗೆಯಾದ ಬಳಿಕ ಇಲ್ಲೂ ಸಾಕಷ್ಟು ಬರೆದೆ. ಲೈಫ್ಸ್ಟೈಲ್, ಸಾಹಿತ್ಯ, ಸಿನಿಮಾ, ರಿಲೇಶನ್ಶಿಪ್, ಹಿಸ್ಟರಿ, ಕ್ರೀಡೆ, ಆರೋಗ್ಯ ಹೀಗೆ ಹಲವು ಆಸಕ್ತಿ ಮತ್ತು ತಜ್ಞತೆ. ಅನುವಾದದಲ್ಲಿಯೂ ಕೈಯಾಡಿಸಿ ಕೆಲವು ಇಂಗ್ಲಿಷ್ ಕೃತಿಗಳನ್ನು ಕನ್ನಡಕ್ಕೆ ತಂದಿರುವೆ.
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ವಿಜಯನಗರ ಜಿಲ್ಲೆ ಕಂದಗಲ್ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಪತ್ರಿಕೋದ್ಯಮದಲ್ಲಿ 2 ದಶಕಗಳ ಅನುಭವ. ರಾಜ್ಯ ಪತ್ರಿಕೆಗಳಾದ ವಿಜಯ ಕರ್ನಾಟಕ, ಕನ್ನಡ ಪ್ರಭ, ಡಿಜಿಟಲ್ ಮಾಧ್ಯಮವಾದ vijayakarnataka.com, oneindia.com, kannadaprabha.comಗಳಲ್ಲಿಯೂ ಕೆಲಸ ಮಾಡಿದ್ದೇನೆ. ರಿಪೋರ್ಟರ್, ಸಬ್ ಎಡಿಟರ್ ಆಗಿಯೂ ಕಾರ್ಯ ನಿರ್ವಹಣೆ. ಆರೋಗ್ಯ, ಜೀವನಶೈಲಿ ಸುದ್ದಿ ಬರೆಯೋದರಲ್ಲಿ ಎತ್ತಿದ ಕೈ. ದೇಶ, ವಿದೇಶ, ರಾಜಕೀಯ ಸುದ್ದಿಗಳನ್ನು ಬರೆಯೋದು ಖುಷಿ. ಸದ್ಯ ಸುವರ್ಣ ನ್ಯೂಸ್.ಕಾಮ್ ನಲ್ಲಿ ಹಿರಿಯ ಸಹಾಯಕ ಸಂಪಾದಕಿಯಾಗಿ ಕಾರ್ಯ ನಿರ್ವಹಣೆ. ಡಿಜಿಟಲ್ ಮಾಧ್ಯಮದಲ್ಲಿ ಪರಿಪೂರ್ಣ ಜ್ಞಾನ ಇರೋ ಏಕೈಕ ಪತ್ರಕರ್ತೆ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತೇನೆ. ತೀರ್ಥಹಳ್ಳಿಯವಳು.
ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಮ್ನಲ್ಲಿ ಹಿರಿಯ ಉಪ ಸಂಪಾದಕ. ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದೇನೆ. ನನ್ನ ಊರು ಬಾಗಲಕೋಟೆ ಜಿಲ್ಲೆಯ ಹುನಗುಂದ . ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ಪಡೆದಿದ್ದೇನೆ. ಈಟಿವಿ ಭಾರತ್, ವೇ ಟು ನ್ಯೂಸ್ ಡಿಜಿಟಲ್ ಮಾಧ್ಯಮದಲ್ಲಿ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಕ್ರೀಡೆ, ಚಲನಚಿತ್ರ, ರಾಜಕೀಯ ಸುದ್ದಿಗಳ ಬಗ್ಗೆ ಅತೀವ ಆಸಕ್ತಿ ಇದೆ. ಸಂಗೀತ ಕೇಳುವುದು, ಕ್ರಿಕೆಟ್ ಆಡುವುದು ನೆಚ್ಚಿನ ಹವ್ಯಾಸಗಳಾಗಿವೆ.
ಮಹ್ಮದ್ ರಫಿಕ್ ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮಂಡ್ಯ ಜಿಲ್ಲೆಯ ಮಳವಳ್ಳಿಯವರು. ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಎಂಎ ಮುಗಿಸಿ, ಸೇರಿದ್ದು ವಿಜಯ ಕರ್ನಾಟಕ ಪತ್ರಿಕೆಗೆ. ಸೂರ್ಯೋದಯ ಸೇರಿ ಪತ್ರಿಕೆಗಳಲ್ಲಿ 7 ವರ್ಷಗಳ ಅನುಭವ. ನ್ಯೂಸ್ ಚಾನೆಲ್ಗಳಿನ್ನೂ ಸರಿಯಾಗಿ ಕಣ್ಬಿಡದ ಕಾಲದಲ್ಲೇ ದೃಶ್ಯ ಮಾಧ್ಯಮಕ್ಕೆ ಕಾಲಿಟ್ಟಿದ್ದು, ಟೆಲಿವಿಷನ್ ಪಟ್ಟುಗಳೆಲ್ಲ ಕರತಲಾಮಲಕ. ಉದಯ ಟಿವಿಯಲ್ಲಿ 2 ವರ್ಷ ಸೇವೆ. ಕಳೆದ 17 ವರ್ಷದಿಂದಲೂ ಸುವರ್ಣ ನ್ಯೂಸ್ ಇನ್ಪುಟ್, ಔಟ್ಪುಟ್ ಹೆಡ್ ಆಗಿ ಕಾರ್ಯ ನಿರ್ವಹಣೆ. ಪತ್ರಿಕೆ- ಟಿವಿ ಎರಡರ ಅಗಾಧ ಅನುಭವ ಇರುವ ಏಕೈಕ ಪತ್ರಕರ್ತೆ. ಪ್ರತಿಷ್ಠಿತ ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಪತ್ರಕರ್ತರ ಸಂಘ, ಕೆಂಪೇಗೌಡ ಪ್ರಶಸ್ತಿ, ಪಬ್ಲಿಕ್ ರಿಲೇಷನ್ ಕೌನ್ಸಿಲ್ ಆಫ್ ಇಂಡಿಯಾ, ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿಗಳು ಮುಡಿಗೇರಿವೆ. ಸದ್ಯ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯೆ, ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಸಿಲಬಸ್ ಕಮಿಟಿ ಸದಸ್ಯೆಯಾಗಿಯೂ ನೇಮಕ.
ಮೆಕ್ಯಾನಿಕಲ್ ಇಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವೀಧರ. ಎಡಿಡಿ ಇಂಜಿನಿಯರಿಂಗ್ ಕಾಂಪೊನೆಂಟ್ಸ್ (ಇಂಡಿಯಾ) ಪ್ರೈ ಲಿಮಿಟೆಡ್ ಸಂಸ್ಥೆಯ ನಿರ್ದೇಶಕ (ಎಡಿಡಿ ಇಂಜಿನಿಯರಿಂಗ್ ಜಿಎಂಬಿಎಚ್ ಜರ್ಮನಿಯ ಅಂಗಸಂಸ್ಥೆ). ಬಾಹ್ಯಾಕಾಶ, ರಕ್ಷಣೆ, ಅಂತಾರಾಷ್ಟ್ರೀಯ ವ್ಯವಹಾರಗಳ ವಿಶ್ಲೇಷಕ. ಸಂಯುಕ್ತ ಕರ್ನಾಟಕ ಪತ್ರಿಕೆ, ಕನ್ನಡ ಪ್ರಭ (ಇಂಡಿಯನ್ ಎಕ್ಸ್ಪ್ರೆಸ್) ಜಾಲತಾಣಗಳ ಅಂಕಣಕಾರ. ಸುವರ್ಣ ನ್ಯೂಸ್, ವಿಜಯ ಕರ್ನಾಟಕ, ಉದಯವಾಣಿ, ವಿಶ್ವವಾಣಿ, ಒನ್ ಇಂಡಿಯಾದಂತಹ ಪತ್ರಿಕೆಗಳು, ಜಾಲತಾಣಗಳಿಗೆ ನಿರಂತರ ಲೇಖನಗಳು. ವಿವಿಧ ರಾಷ್ಟ್ರೀಯ, ಅಂತಾರಾಷ್ಟ್ರೀಯ ಇಂಗ್ಲಿಷ್ ಪತ್ರಿಕೆಗಳು, ನಿಯತಕಾಲಿಕೆಗಳಲ್ಲಿ ಲೇಖನಗಳು ಪ್ರಕಟ. ಪ್ರಚಲಿತ ವಿಚಾರಗಳ ಕುರಿತು ಸುವರ್ಣ ನ್ಯೂಸ್, ದೂರದರ್ಶನ, ಆಲ್ ಇಂಡಿಯಾ ರೇಡಿಯೋ, ಚಂದನ ವಾಹಿನಿಗಳಲ್ಲಿ ಪ್ಯಾನೆಲಿಸ್ಟ್ ಆಗಿ ಭಾಗಿ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ವಾಹಿನಿಗಳಲ್ಲಿ ಸಂವಾದ, ಚರ್ಚೆಗಳಲ್ಲಿ ಪ್ಯಾನೆಲಿಸ್ಟ್.
ಮೂಲತಃ ಮಂಗಳೂರಿನವಳು. ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮದ ಸ್ನಾತಕೋತ್ತರ ಪದವಿ ಇದೆ. ಕಳೆದ 12 ವರ್ಷಗಳಿಂದ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದೇನೆ. ಸುದ್ದಿ ಬಿಡುಗಡೆ, ಗಲ್ಫ್ ಕನ್ನಡಿಗ, ಈ ಟಿವಿ ಭಾರತ್, ಕನ್ನಡ ನ್ಯೂಸ್ ನೌ, ವಿಜಯಕರ್ನಾಟಕ ಹಾಗೂ ಈಗ ಏಷ್ಯಾನೆಟ್ ಸುವರ್ಣದಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮನೋರಂಜನೆ, ಲೈಫ್ ಸ್ಟೈಲ್, ಟ್ರಾವೆಲ್ ವಿಷಯಗಳಲ್ಲಿ ಆಸಕ್ತಿ. ಪುಸ್ತಕ ಓದುವ ಹವ್ಯಾಸವೂ ಇದೆ.
ಕೋಲಾರ ಜಿಲ್ಲೆಯ ಚಿಂತಾಮಣಿ ಊರು. ಓದಿದ್ದೂ ಅಲ್ಲಿಯೇ. ಮೈಸೂರು ಮುಕ್ತ ವಿಶ್ವವಿದ್ಯಾಲಯದ ಎಂಎ ಪದವಿ ಇದೆ. ಚಿಕ್ಕಂದಿನಿಂದಲೂ ಓದೋದು ಅಂದ್ರೆ ಇಷ್ಟ. ಉದಯವಾಣಿಯಲ್ಲಿ ಸಮೂಹ ಸಂಪಾದಕರಿಗೆ ಆಪ್ತ ಕಾರ್ಯದರ್ಶಿಯಾಗಿ 8 ವರ್ಷ ಸೇವೆ. ಆಗಲೇ ಅವಳು, ಬಹುಮುಖಿ, ಮಕ್ಕಳ ಪುರವಣಿ, ಉದಯವಾಣಿಯ ಸೋದರ ಪತ್ರಿಕೆಗಳಾದ ತರಂಗ, ತುಷಾರಕ್ಕೆ ಲೇಖನಗಳನ್ನು ಬರೆಯುತ್ತಿದ್ದೆ. ಕಥೆ, ಮಕ್ಕಳಿಗಾಗಿ ಪೌರಾಣಿಕ ಕಥೆಗಳು, ಪುಸ್ತಕ ಪರಿಚಯ ಮೊದಲಾದ ಬರಹಗಳನ್ನು ಪ್ರಕಟಗೊಂಡಿವೆ. ಪ್ರಸ್ತುತ ಕನ್ನಡಪ್ರಭ ಪತ್ರಿಕೆಯ ಪ್ರಧಾನ ಸಂಪಾದಕರ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ. ಮೂವಿ ನೋಡೋ ಹುಚ್ಚಿದೆ. ಅದರ ರಿವ್ಯೂ ಬರೆಯೋದು ಅಚ್ಚುಮೆಚ್ಚು. ಪುಸ್ತಕಗಳನ್ನು ರಿವ್ಯೂ ಮಾಡೋ ಹವ್ಯಾಸವಿದೆ.
ಮೂಲತಃ ಉತ್ತರ ಕರ್ನಾಟಕದ ಹುಬ್ಬಳ್ಳಿ. ಆಟೋ ಮೊಬೈಲ್ ಎಂಜಿನಿಯರಿಂಗ್ ಶಿಕ್ಷಣದ ನಂತರ ಬದಲಾಯಿತು ದಿಕ್ಕು. ರಾಜಕೀಯ ವರದಿಗಾರಿಕೆ ಮಾಡಲೆಂದೇ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ವಿದ್ಯುನ್ಮಾನ ಮಾಧ್ಯಮ ಸ್ನಾತಕೋತ್ತರ ಅಧ್ಯಯನ. ದಿಲ್ಲಿಯಲ್ಲಿ ಸುವರ್ಣ ನ್ಯೂಸ್ ವರದಿಗಾರನಾಗಿ ಆಯ್ಕೆ. 18 ವರ್ಷಗಳಿಂದಲೂ ಒಂದೇ ಸಂಸ್ಥೆ ಯಲ್ಲಿ ಕೆಲಸ ಮಾಡುತ್ತಿರುವುದು ವಿಶೇಷ. ರಾಜಕೀಯ ವರದಿಗಾರಿಕೆ ಮತ್ತು ನಿಖರ ವಿಶ್ಲೇಷಣೆಗಳಿಗೆ ಕನ್ನಡ ಪತ್ರಿಕೋದ್ಯಮದಲ್ಲಿ ಮಾತ್ರವಲ್ಲ, ರಾಷ್ಟ್ರೀಯ ಮಾಧ್ಯಮದಲ್ಲೂ ಹೆಸರುವಾಸಿ. 2015ರಿಂದ ಕನ್ನಡ ಪ್ರಭ ಪತ್ರಿಕೆಯಲ್ಲಿ 'ಇಂಡಿಯಾ ಗೇಟ್' ಎಂಬ ದಿಲ್ಲಿ ರಾಜಕೀಯದ ಒಳ ಸುಳಿವು ಅಂಕಣ ಪ್ರಕಟವಾಗುತ್ತಿದೆ. ಸುವರ್ಣ ನ್ಯೂಸ್ನ 'ಮಾರ್ನಿಂಗ್ ನ್ಯೂಸ್ ಅವರ್' ಸಂಜೆ 'ಪಾರ್ಟಿ ರೌಂಡ್ಸ್' 'ಲೆಫ್ಟ್ ರೈಟ್ ಸೆಂಟರ್' ಕಾರ್ಯಕ್ರಮಗಳು ಹೆಚ್ಚು ಪ್ರಸಿದ್ಧ.
ಏಷ್ಯಾನೆಟ್ ಸುವರ್ಣನ್ಯೂಸ್.ಕಾಮ್ನಲ್ಲಿ ಉಪ ಸಂಪಾದಕ. ಸಿನಿಮಾ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದೇನೆ. ಇಂಡಿಯನ್ ಎಕ್ಸ್ಪ್ರೆಸ್, ಒನ್ ಇಂಡಿಯಾ ಕನ್ನಡ ಹಾಗೂ ವಿಜಯ ಕರ್ನಾಟಕ ವೆಬ್ನಲ್ಲಿ ಕೆಲಸ ಮಾಡಿದ ಅನುಭವವಿದೆ. ಕಳೆದ 15 ವರ್ಷಗಳಿಂದ ನಿರಂತರ ಬರವಣಿಗೆ ಉದ್ಯೋಗದಲ್ಲಿದ್ದೇನೆ. ಸುದ್ದಿ ಮಾಧ್ಯಮವಲ್ಲದೇ ಮನರಂಜನಾ ಮಾಧ್ಯಮದಲ್ಲೂ ಕೆಲಸ ಮಾಡಿದ್ದೇನೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಹುಟ್ಟೂರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದೇನೆ. ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ, ಮಾನವೀಯತೆಗೆ ಮೊದಲ ಪ್ರಾಶಸ್ತ್ಯ.
Roopa Hegde ಮೂಲತಃ ಉತ್ತರ ಕನ್ನಡದ ಯಲ್ಲಾಪುರದವಳು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಸ್ತೂರಿ, ಸಮಯ ಹಾಗೂ ಸುವರ್ಣ ವಾಹಿನಿಯಲ್ಲಿ ಕೆಲಸ ಮಾಡಿದ್ದೇನೆ. ಈಗ ಏಷ್ಯಾನೆಟ್ ಕನ್ನಡದಲ್ಲಿ ಫ್ರೀಲಾನ್ಸರ್ ಆಗಿ ಕೆಲಸ ಮಾಡುತ್ತಿದ್ದೇನೆ. ಟ್ರೆಂಡಿಂಗ್ ನ್ಯೂಸಲ್ಲಿ ಹೆಚ್ಚು ಆಸಕ್ತಿ ಇದ್ದು, ಸಿನಿಮಾ, ಬ್ಯುಸಿನೆಸ್, ಆರೋಗ್ಯ, ಕ್ರೈಂ, ಕ್ರೀಡೆ ಸೇರಿ ಎಲ್ಲ ಕ್ಷೇತ್ರದ ಸುದ್ದಿ ಬರೆಯುತ್ತೇನೆ.
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್, ರೋಟರಿ ಎಕ್ಸಲೆನ್ಸ್ ಅವಾರ್ಡ್ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಮತ್ತು ಏಷ್ಯಾನೆಟ್ ಸುವರ್ಣದಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ನಿರ್ವಹಣೆ.
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.