ಕೆರೆಯಲ್ಲಿ ಈಜಲು ಹೋಗಿ ಯುವಕ ನೀರುಪಾಲು| ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದಲ್ಲಿ ನಡೆದ ಘಟನೆ| ಶವಕ್ಕಾಗಿ ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯ ಆರಂಭ| ಘಟನಾ ಸ್ಥಳಕ್ಕೆ ಕೆರೂರು ಪಿಎಸ್ಐ ಸಂಜಯ್ ತಿಪ್ಪರೆಡ್ಡಿ ಭೇಟಿ ನೀಡಿ|

ಬಾಗಲಕೋಟೆ(ಅ.28): ದೀಪಾವಳಿ ಹಬ್ಬದಂದೆ ದುರ್ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಕೆರೆಯಲ್ಲಿ ಈಜಲು ಹೋಗಿ ಯುವಕನೊಬ್ಬ ನೀರುಪಾಲಾದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನೀರು ಪಾಲಾದ ಯುವಕನನ್ನು ಫಕೀರಪ್ಪ ವಾಲೀಕಾರ (28) ಎಂದು ಗುರುತಿಸಲಾಗಿದೆ. 

Add Asianetnews Kannada as a Preferred SourcegooglePreferred

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಶವಕ್ಕಾಗಿ ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಕತ್ತಲಾದ ಹಿನ್ನೆಲೆಯಲ್ಲಿ ಶೋಧಕಾರ್ಯವನ್ನು ಇಂದಿಗೆ(ಸೋಮವಾರ) ಮುಂದೂಡಿದ್ದಾರೆ. ಘಟನಾ ಸ್ಥಳಕ್ಕೆ ಕೆರೂರು ಪಿಎಸ್ಐ ಸಂಜಯ್ ತಿಪ್ಪರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.