KSRTC ಬಸ್ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ವೇಳೆ ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ.
ಬಳ್ಳಾರಿ (ಅ.11): KSRTC ಬಸ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ.
Add Asianetnews Kannada as a Preferred Source

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಶಿವಪುರ ಬಳಿ ಅಪಘಾತವಾಗಿದ್ದು ಟಾಟಾ ಏಸ್ ನಲ್ಲಿ ಪ್ರಯಾಣಿಸುತ್ತಿದ್ದ ನಾಗಮ್ಮ, ನಾಗಣ್ಣ, ಚಾಲಕ ಪ್ರಕಾಶ್ ಸಾವಿಗೀಡಾಗಿದ್ದಾರೆ.
ಬೆಂಗಳೂರಿನಿಂದ ಹೊರಪೇಟೆ ತೆರಳುತ್ತಿದ್ದ KSRTC ಬಸ್ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಬೆಳ್ಳಂಬೆಳಗ್ಗೆ ಅಪಘಾತಕ್ಕೆ ಈಡಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಸಬಂಧ ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
