Asianet Suvarna News Asianet Suvarna News

ಜನಸಾಮಾನ್ಯರಿಗೆ ಹಲವು ಅಗತ್ಯ ಯೋಜನೆ ಕೊಟ್ಟಿದ್ದು ಕಾಂಗ್ರೆಸ್‌ : ಕೈ ನಾಯಕ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಜನ ಸಾಮಾನ್ಯರಿಗೆ ಅಗತ್ಯ ಇರುವ ಯೋಜನೆಗಳ ಭಾಗ್ಯಗಳನ್ನು ನೀಡಿದ್ದಾರೆ. ಹಸಿವು ಮುಕ್ತ ರಾಜ್ಯ ಮಾಡಲು ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳಿಸಿದ್ದರಿಂದ ಕೊರೋನಾ ಸಂದರ್ಭದಲ್ಲಿ ಬಹಳಷ್ಟುಅನುಕೂಲವಾಯಿತು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಶಾಸಕ ಅಶೋಕ ಪಟ್ಟಣ ಹೇಳಿದರು.

Congress has given many necessary schemes to common people snr
Author
First Published Dec 23, 2022, 5:36 AM IST

  ರಾಮದುರ್ಗ (ಡಿ.23):  ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಜನ ಸಾಮಾನ್ಯರಿಗೆ ಅಗತ್ಯ ಇರುವ ಯೋಜನೆಗಳ ಭಾಗ್ಯಗಳನ್ನು ನೀಡಿದ್ದಾರೆ. ಹಸಿವು ಮುಕ್ತ ರಾಜ್ಯ ಮಾಡಲು ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳಿಸಿದ್ದರಿಂದ ಕೊರೋನಾ ಸಂದರ್ಭದಲ್ಲಿ ಬಹಳಷ್ಟುಅನುಕೂಲವಾಯಿತು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಶಾಸಕ ಅಶೋಕ ಪಟ್ಟಣ ಹೇಳಿದರು.

ತಾಲೂಕಿನ ಹೊಸಕೇರಿ ಗ್ರಾಮದಲ್ಲಿ ಕಾಂಗ್ರೆಸ್‌ (Congress)  ಕಾರ್ಯಕರ್ತರ ಸ್ವಾಭಿಮಾನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಸಾಧನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತಷ್ಟುಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕರೆ ನೀಡಿದರು.

ದೇಶದ ಸಮಗ್ರ ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯವಿದೆ. ಬಿಜೆಪಿ (BJP)  ಸರ್ಕಾರ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಆಗಿರುವ ಕೆಲಸಗಳನ್ನು ಮರೆತಿಲ್ಲ. ಮುಂದಿನ ಚುನಾವಣೆಯಲ್ಲಿ ಮತ್ತೇ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಲವು ಹಾಲಿಗಳಿಗೆ ಟಿಕೆಟ್

ಬೆಳಗಾವಿ(ಡಿ.21):  ಮುಂಬರುವ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಹಾಲಿ ಶಾಸಕರ ಕ್ಷೇತ್ರಗಳಿಗೂ ಅರ್ಜಿ ಆಹ್ವಾನಿಸಿದ ಪಕ್ಷದ ನಾಯಕರ ಧೋರಣೆಯನ್ನು ಕಾಂಗ್ರೆಸ್‌ ಶಾಸಕರು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಡೆದಿದೆ. ಶಾಸಕರ ಈ ಅಸಮಾಧಾನಕ್ಕೆ ಮಣಿದ ಕಾಂಗ್ರೆಸ್‌ ನಾಯಕತ್ವ ಎಲ್ಲ ಶಾಸಕರಿಗೂ ಟಿಕೆಟ್‌ ನೀಡುವುದಾಗಿ ಸಭೆಯಲ್ಲೇ ಖಚಿತಪಡಿಸಿತು ಎಂದು ಮೂಲಗಳು ತಿಳಿಸಿವೆ. ಬೆಳಗಾವಿಯಲ್ಲಿ ಸೋಮವಾರ ಸಂಜೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಘಟನೆ ನಡೆದಿದೆ.

ನಿಮ್ಮ ಮನೆಯ ನಾಯಿಯಾದ್ರೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ಯಾ ಎಂದ ಖರ್ಗೆ: ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

ಹಾಲಿ ಶಾಸಕರಿರುವ ಕ್ಷೇತ್ರಗಳಿಂದಲೂ ಟಿಕೆಟ್‌ಗಾಗಿ ಅರ್ಜಿ ಪಡೆದಿರುವುದು ಹಲವು ಗೊಂದಲಗಳನ್ನು ಸೃಷ್ಟಿಸಿದೆ. ಅರ್ಜಿ ಸಲ್ಲಿಸಿದವರು ನಾವೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಹೀಗಾಗಿ ಕ್ಷೇತ್ರ ಮಟ್ಟದ ನಾಯಕರು, ಕಾರ್ಯಕರ್ತರಲ್ಲಿ ಬಣಗಳು ಸೃಷ್ಟಿಯಾಗುತ್ತಿದ್ದು, ಅನಗತ್ಯ ಗೊಂದಲಗಳಿಗೆ ಕಾರಣವಾಗುತ್ತಿದೆ ಎಂದು ಅಸಮಾಧಾನ ತೋಡಿಕೊಂಡರು ಎನ್ನಲಾಗಿದೆ.

ಬರೀ ಗಾಂಧಿ ಎಂಬ ಹೆಸರನ್ನು ಇಟ್ಟುಕೊಂಡರೆ ಎಲ್ಲರೂ ಮಹಾತ್ಮರಾಗುವುದಿಲ್ಲ: ಈಶ್ವರಪ್ಪ

ಈ ವೇಳೆ ಸುರ್ಜೇವಾಲಾ ಅವರು, ಆ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ಶಾಸಕರಿಗೂ ಟಿಕೆಟ್‌ ನೀಡಲಾಗುವುದು. ಇದನ್ನು ಸ್ಥಳೀಯ ಕಾಂಗ್ರೆಸ್‌ ಸಮಿತಿಗಳಿಗೂ ಮಾಹಿತಿ ನೀಡಲಾಗುವುದು ಎಂದು ಹೇಳಿ ಸಮಾಧಾನಪಡಿಸಿದರು.

ಅನುದಾನಕ್ಕೆ ಒತ್ತಾಯಿಸಲು ನಿರ್ಧಾರ:

ಇನ್ನು ಚುನಾವಣಾ ವರ್ಷವಾಗಿರುವುದರಿಂದ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಾದ ಒತ್ತಡವಿದೆ. ಆದರೆ, ಸರ್ಕಾರವು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 25 ಕೋಟಿ ರು. ಅನುದಾನವನ್ನು ಬಿಜೆಪಿ ಕ್ಷೇತ್ರಗಳಿಗೆ ಮಾತ್ರ ಬಿಡುಗಡೆ ಮಾಡುತ್ತಿದೆ. ಕಾಂಗ್ರೆಸ್‌ ಕ್ಷೇತ್ರಗಳಿಗೆ ಅನುದಾನ ಮಂಜೂರಾಗಿದ್ದರೂ ಹಣ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರಿ ಅನುದಾನ ಬಿಡುಗಡೆ ಮಾಡಿಸಬೇಕು. ಇಲ್ಲದಿದ್ದರೆ ಕ್ಷೇತ್ರದಲ್ಲಿ ಕಾಮಗಾರಿಗಳು ನೆನೆಗುದಿಗೆ ಬೀಳಲಿದ್ದು, ಚುನಾವಣೆಗೆ ಕಷ್ಟವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು ಎಂದು ತಿಳಿದುಬಂದಿದೆ.

ತಮ್ಮ ಅಧಿಕಾರ ಅವಧಿಯಲ್ಲಿ .2600 ಕೋಟಿ ಅನುದಾನ, ವೀರಭದ್ರೇಶ್ವರ, ಬಸವೇಶ್ವರ ನೀರಾವರಿ ಶಾಶ್ವತ ಯೋಜನೆಗಳು ಸೇರಿದಂತೆ ತಾಲೂಕಿನಲ್ಲಿ ಸಮಗ್ರ ಅಭಿವೃದ್ಧಿ ಮಾಡಿರುವೆ. ಅಧಿಕಾರ ಕೊನೆಯ ಹಂತದಲ್ಲಿ ತಾಲೂಕಿನ ಕೆರೆಗಳನ್ನು ತುಂಬಿಸುವ ಯೋಜನೆಗಳು ಉಳಿದುಕೊಂಡಿವೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ರಾಮದುರ್ಗ ತಾಲೂಕನ್ನು ರಾಜ್ಯದಲ್ಲಿ ಮಾದರಿ ಮಾಡುವೆ ಎಂದು ಹೇಳಿದರು.

ನದಿಗೆ ಹೊಂದಿಕೊಂಡಿರುವ ಚಿಕ್ಕತಡಸಿ ಗ್ರಾಮವನ್ನು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಹಿಂದಿನ ಚುನಾವಣೆಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಿದ್ದರು. ಆದರೂ ರಾಜ್ಯ ಸರ್ಕಾರ ಇತ್ತ ಗಮನ ಹರಿಸಿಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ 6 ತಿಂಗಳಲ್ಲಿ ಇದನ್ನು ಸ್ಥಳಾಂತರಿಸುವೆ ಎಂದು ದೇವರ ಮೇಲೆ ಪ್ರಮಾಣ ಮಾಡುವೆ ಎಂದು ಭರವಸೆ ನೀಡಿದರು.

ತಾಲೂಕಿನ ಚಿಕ್ಕತಡಸಿ, ಕರಡಿಗುಡ್ಡ, ಬೆನ್ನೂರ, ಹಿರೇತಡಸಿ, ಇಡಗಲ್ಲ, ಚಿಕ್ಕಮೂಲಂಗಿ, ಹಿರೇಮೂಲಂಗಿ ಲಿಂಗದಾಳ ಗ್ರಾಮಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸ್ವಾಭಿಮಾನ ಸಭೆಗಳನ್ನು ನಡೆಸಿದರು.

ಈ ಸಂದರ್ಭದಲ್ಲಿ ಬಸನಗೌಡ ಮಾದನಗೌಡ್ರ, ಚಂದ್ರಗೌಡ ಪ್ರಕಾಶ ತಳವಾರ, ರಮೇಶ ಹೊಳೆನ್ನವರ, ವಿರುಪಾಕ್ಷಿಗೌಡ ಕುಲಕರ್ಣಿ, ಪಿ.ಎಫ್‌.ಹಳ್ಳಿ, ಹನಮಂತ ಜೋಶಿ, ಉಸ್ಮಾನಸಾಬ ಕಾಕಂಡಕಿ, ಶಿವಪ್ಪ ಕಿತ್ತಲಿ, ಶಂಕರ ಅಂಗಡಿ, ಶಿವಯೋಗಿ ಗೊಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Follow Us:
Download App:
  • android
  • ios