Asianet Suvarna News Asianet Suvarna News

Bengaluru: 'ಲವ್ ಜಿಹಾದ್ ವಿರೋಧಿ ಪೊಲೀಸ್ ದಳ' ಸ್ಥಾಪನೆಗೆ ಸರ್ಕಾರಕ್ಕೆ ಮನವಿ

ಲವ್ ಜಿಹಾದ್ ಮೂಲಕ ಮತಾಂತರದ ಘಟನೆಗಳನ್ನು ತಡೆಯಬೇಕು.
ಮತಾಂತರ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು.
ಹಿಂದೂ ಜನಜಾಗೃತಿ ಸಮಿತಿ ಹಾಗೂ ದುರ್ಗಾ ವಾಹಿನಿಯಿಂದ ಗೃಹ ಸಚಿವರಿಗೆ ಮನವಿ

Request to government to establish anti love jihad police force sat
Author
First Published Dec 11, 2022, 2:30 PM IST

ಬೆಂಗಳೂರು (ಡಿ.11): ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಘಟನೆಗಳ ಹಿನ್ನೆಲೆ 'ಲವ್ ಜಿಹಾದ್' ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ 'ಪೊಲೀಸ್ ವಿಶೇಷ ಶಾಖೆ'ಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ದುರ್ಗಾ ವಾಹಿನಿಯಿಂದ ಮಾನ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ನೀಡಲಾಯಿತು. 

ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ಅವರು, ದೆಹಲಿಯ ಜಿಹಾದಿ ಅಪ್ತಾಭ್ ಹಿಂದೂ ಯುವತಿ ಶ್ರದ್ಧಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದಂತೆ ರಾಜ್ಯದಲ್ಲಿ ಸಹ ಹೆಚ್ಚು ಲವ್ ಜಿಹಾದ್ ಘಟನೆಗಳು ನಡೆಯುತ್ತಿದೆ. ಕಳೆದ ವಾರ ರಾಯಚೂರಿನಲ್ಲಿ ಇಬ್ಬರು ಹಿಂದೂ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗಿ ಇಸ್ಲಾಮ್ ಗೆ ಮತಾಂತರವಾದರು. ಪೋಷಕರು ದೂರು ನೀಡಿದರೂ ಸಹ ಪೋಲಿಸರು ಅಪರಾಧಿಯ ಬಂಧನ ಮಾಡಿಲ್ಲ. ಈ ಪ್ರಕರಣವನ್ನು ಮತಾಂತರ ಕಾಯಿದೆ ಎಂದು ನೊಂದಣಿ ಮಾಡಿಲ್ಲ ಎಂದರು.

ಕಾರ್ಕಳದಲ್ಲಿ Love Jihad ಎಚ್ಚರಿಕೆಯ ಬ್ಯಾನರ್‌ ಪತ್ತೆ

ಶಾಹೀನ್‌ ಗ್ಯಾಂಗ್ ಮಟ್ಟಹಾಕಿ: ಮಾರ್ಚ್ 2022 ರಂದು ಗದಗದಲ್ಲಿ ಅಪೂರ್ವ ಯುವತಿಯು ಇಸ್ಲಾಮ್‌ಗೆ ಮತಾಂತರ ಮಾಡಿ, ನಂತರ ಆಕೆಯ  ಹತ್ಯೆ ಮಾಡಲು ಪ್ರಯತ್ನ ನಡೆಯಿತು. ಮಂಗಳೂರು, ಉಡುಪಿ, ಶಿವಮೊಗ್ಗ, ಕೊಡಗು ಮತ್ತು ಬೆಂಗಳೂರಿನಲ್ಲಿ ಅನೇಕ ಮುಸಲ್ಮಾನ್ ಯುವತಿಯರ ಶಾಹಿನ್ ಗ್ಯಾಂಗ್ ಲವ್ ಜಿಹಾದ್ ಮಾಡಲು ಕಾರ್ಯ ನಿರತವಾಗಿದೆ. ಅವರು ಹಿಂದೂ ಯುವತಿಯರನ್ನು ಮುಸಲ್ಮಾನ್ ಯುವಕರ ಜೊತೆಗೆ ಪರಿಚಯಿಸಿ ಲವ್ ಜಿಹಾದ್ ಮಾಡಿಸುತ್ತಾರೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಇದ್ದರೂ ಸಹ ವ್ಯಾಪಕವಾಗಿ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚಾಗಿದೆ. ಇದನ್ನು ತಡೆಯಲು 'ಲವ್ ಜಿಹಾದ್ ವಿರೋಧಿ ಪೊಲೀಸ್ ದಳ' ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹ ಮಾಡಿದರು.

ಲವ್‌ ಜಿಹಾದ್‌ ಆರೋಪ: ಮದುವೆಗೆ ಒಂದು ತಿಂಗಳು ಇರುವಾಗ ಯುವತಿ ಎಸ್ಕೇಪ್

21,000 ಯುವತಿಯರು ಕಣ್ಮರೆ: ಲವ್ ಜಿಹಾದ್ ಗೆ ಪ್ರಚೋಧನೆ ನೀಡುವ ಮಸೀದಿ,‌ ಮದರಸಾ, ಮೌಲ್ವಿ, ಶಾಹಿನ್ ಗ್ಯಾಂಗ್‌ ಮೇಲೆ ಕ್ರಮ ಜರುಗಿಸಬೇಕು. ಅಷ್ಟೇ ಅಲ್ಲದೇ ರಾಜ್ಯದಲ್ಲಿ 21,000 ಯುವತಿಯರು, ಮಹಿಳೆಯರು ಕಾಣೆಯಾಗಿದ್ದಾರೆ, ಅದರ ಹಿಂದೆ ಲವ್ ಜಿಹಾದ್ ಮಾಫಿಯಾ ಕಾರ್ಯನಿರತ ಇದೆಯಾ ಪರಿಶೀಲನೆ‌ ಮಾಡಬೇಕು ಎಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ, ರಣರಾಗಿಣಿ ಮಹಿಳಾ‌‌ ಶಾಖೆಯ ಭವ್ಯಗೌಡ, ದುರ್ಗಾ ವಾಹಿನಿಯ ನಂದಿನಿ ರಾಜ್, ಶ್ರೀರಾಮ ಸೇನೆಯ ಸುಂದ್ರೇಶ, ಅಮರನಾಥ ಇತರರು ಉಪಸ್ಥಿತರಿದ್ದರು.

ಲವ್ ಜಿಹಾದ್‌ ವಿರೋಧಿ ಪೊಲೀಸ್‌ ದಳ ಸ್ಥಾಪನೆ ಬಗ್ಗೆ ಸರ್ಕಾರದಲ್ಲಿ ಚರ್ಚೆ ಮಾಡುತ್ತೇವೆ. ಮತಾಂತರ ಉದ್ದೇಶದಿಂದ ನಡೆಯುವ ಲವ್ ಜಿಹಾದ್ ಪ್ರಕರಣಗಳನ್ನು ಮತಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಲು ಪೊಲೀಸ್ ಇಲಾಖೆಯ ಸಭೆಯಲ್ಲಿ ಸೂಚಿಸುತ್ತೇವೆ' 
- ಅರಗ ಜ್ಞಾನೇಂದ್ರ, ಗೃಹ ಸಚಿವ

Follow Us:
Download App:
  • android
  • ios