ಬೆಂಗಳೂರಿನ ಜಯ ಕರ್ನಾಟಕ ಸಂಘಟನೆ ಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಸಮ್ಮಿಲನ ಕಾರ್ಯಕ್ರಮ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್ ನಿರೂಪಕಿ ಶ್ವೇತಾ ಆಚಾರ್ಯ ಅವರಿಗೆ ಸನ್ಮಾನಿಸಲಾಯಿತು.
ಬೆಂಗಳೂರು: ಬೆಂಗಳೂರಿನ ಜಯ ಕರ್ನಾಟಕ ಸಂಘಟನೆ ಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಸಮ್ಮಿಲನ ಕಾರ್ಯಕ್ರಮ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್ ನಿರೂಪಕಿ ಶ್ವೇತಾ ಆಚಾರ್ಯ ಅವರಿಗೆ ಸನ್ಮಾನಿಸಲಾಯಿತು. ಕನ್ನಡ ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ನಿರೂಪಕಿ ಶ್ವೇತಾ ಆಚಾರ್ಯ ಅವರನ್ನು ಜಯ ಕರ್ನಾಟಕ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು.
![]()
ಜಯ ಕರ್ನಾಟಕ ಸಂಘಟನೆಯೂ ಕಳೆದ 15 ವರ್ಷಗಳಿಂದ ನಾಡಿನಾದ್ಯಂತ ನೆಲ, ಜಲ ಭಾಷೆ ಸಂಸ್ಕೃತಿ ವಿಚಾರದಲ್ಲಿ ಜನಾಂದೋಲನದ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದು, ಉತ್ತಮ ಹೆಸರನ್ನು ಹೊಂದಿದೆ. ಕನ್ನಡ ಭಾಷೆ ಸಂಸ್ಖೃತಿ, ಸಾಹಿತ್ಯ ಕಲೆ ಹಾಗೂ ಈ ಮಣ್ಣಿನ ಸೊಗಡನ್ನು ಇನ್ನಷ್ಟು ಪಸರಿಸುವ ಉದ್ದೇಶದಿಂದ ಈ ಕನ್ನಡ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿವಿಧ ದೇಶಗಳ ರಾಯಭಾರಿಗಳು, ಕನ್ನಡ ಸಾಹಿತಿಗಳು, ನಟರು, ಉದ್ಯಮಿಗಳು ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
![]()