Asianet Suvarna News Asianet Suvarna News

ವಿಶ್ವ ಕನ್ನಡಿಗರ ಸಮ್ಮೇಳನದಲ್ಲಿ ಸುವರ್ಣ ನ್ಯೂಸ್ ನಿರೂಪಕಿ ಶ್ವೇತಾ ಆಚಾರ್ಯಗೆ ಸನ್ಮಾನ

ಬೆಂಗಳೂರಿನ ಜಯ ಕರ್ನಾಟಕ ಸಂಘಟನೆ ಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಸಮ್ಮಿಲನ ಕಾರ್ಯಕ್ರಮ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್ ನಿರೂಪಕಿ ಶ್ವೇತಾ ಆಚಾರ್ಯ ಅವರಿಗೆ ಸನ್ಮಾನಿಸಲಾಯಿತು.

Suvarna News anchor Shweta Acharya honored at world Kannadiga Conference at Banglore akb
Author
First Published Nov 28, 2022, 7:44 PM IST

ಬೆಂಗಳೂರು: ಬೆಂಗಳೂರಿನ ಜಯ ಕರ್ನಾಟಕ ಸಂಘಟನೆ ಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಸಮ್ಮಿಲನ ಕಾರ್ಯಕ್ರಮ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್ ನಿರೂಪಕಿ ಶ್ವೇತಾ ಆಚಾರ್ಯ ಅವರಿಗೆ ಸನ್ಮಾನಿಸಲಾಯಿತು. ಕನ್ನಡ ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ನಿರೂಪಕಿ ಶ್ವೇತಾ ಆಚಾರ್ಯ ಅವರನ್ನು ಜಯ ಕರ್ನಾಟಕ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. 

Suvarna News anchor Shweta Acharya honored at world Kannadiga Conference at Banglore akb

ಜಯ ಕರ್ನಾಟಕ ಸಂಘಟನೆಯೂ ಕಳೆದ 15 ವರ್ಷಗಳಿಂದ ನಾಡಿನಾದ್ಯಂತ ನೆಲ, ಜಲ ಭಾಷೆ ಸಂಸ್ಕೃತಿ ವಿಚಾರದಲ್ಲಿ ಜನಾಂದೋಲನದ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದು, ಉತ್ತಮ ಹೆಸರನ್ನು ಹೊಂದಿದೆ. ಕನ್ನಡ ಭಾಷೆ ಸಂಸ್ಖೃತಿ, ಸಾಹಿತ್ಯ ಕಲೆ ಹಾಗೂ ಈ ಮಣ್ಣಿನ ಸೊಗಡನ್ನು ಇನ್ನಷ್ಟು ಪಸರಿಸುವ ಉದ್ದೇಶದಿಂದ ಈ ಕನ್ನಡ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿವಿಧ ದೇಶಗಳ ರಾಯಭಾರಿಗಳು, ಕನ್ನಡ ಸಾಹಿತಿಗಳು, ನಟರು, ಉದ್ಯಮಿಗಳು ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

Suvarna News anchor Shweta Acharya honored at world Kannadiga Conference at Banglore akb

Follow Us:
Download App:
  • android
  • ios