ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎಎಲ್) ಶನಿವಾರವೂ ದಟ್ಟಮಂಜು ಕವಿದಿದ್ದರಿಂದ ವಿಮಾನ ಸಂಚಾರ ಸೇವೆಯಲ್ಲಿ ಕೆಲಕಾಲ ವ್ಯತ್ಯಯ ಉಂಟಾಗಿ ಸಾವಿರಾರು ಪ್ರಯಾಣಿಕರು ಪರದಾಡಿದರು.
ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎಎಲ್) ಶನಿವಾರವೂ ದಟ್ಟಮಂಜು ಕವಿದಿದ್ದರಿಂದ ವಿಮಾನ ಸಂಚಾರ ಸೇವೆಯಲ್ಲಿ ಕೆಲಕಾಲ ವ್ಯತ್ಯಯ ಉಂಟಾಗಿ ಸಾವಿರಾರು ಪ್ರಯಾಣಿಕರು ಪರದಾಡಿದರು.
Add Asianetnews Kannada as a Preferred Source

ಬೆಳಗ್ಗೆ 6.33ರಿಂದ ಬೆಳಗ್ಗೆ 9.22ರ ವರೆಗೂ ವಾತಾವರಣದಲ್ಲಿ ದಟ್ಟಮಂಜು ಆವರಿಸಿದ್ದರಿಂದ ವಿಮಾನಗಳ ಟೇಕಾಫ್ ಮತ್ತು ಲ್ಯಾಂಡಿಂಗ್ ಸಮಸ್ಯೆಯಾಯಿತು. ಇದರಿಂದ 28 ವಿಮಾನಗಳ ಟೇಕಾಫ್ ಹಾಗೂ 12 ವಿಮಾನಗಳ ಲ್ಯಾಂಡಿಂಗ್ ವಿಳಂಬವಾಯಿತು.
ಈ ನಡುವೆ ಸುಮಾರು ಒಂದು ತಾಸಿಗೂ ಅಧಿಕ ಸಮಯ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. 7 ವಿಮಾನ ಚೆನ್ನೈ, 2 ಕೊಯಮತ್ತೂರು ಮತ್ತು 1 ವಿಮಾನವನ್ನು ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಯಿತು. ವಿಮಾನ ಸಂಚಾರ ವಿಳಂಬವಾದ್ದರಿಂದ ಪ್ರಯಾಣಿಕರು ಪರದಾಡಿದರು.
