ಆಸ್ಪತ್ರೆ ಆವರಣದಲ್ಲಿ ಕಸ ಬಿದ್ದಿದ್ದ ಕಸಕ್ಕೆ ಬೆಂಕಿ ಹಚ್ಚಿ ಸ್ವಚ್ಛ ಮಾಡಿದ ಸಚಿವ ಪ್ರಭು ಚೌಹಾಣ್| ಔರಾದ್ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ನಡೆದ ಘಟನೆ| ಆಸ್ಪತ್ರೆಯ ಆವರಣದಲ್ಲಿ ಅವ್ಯವಸ್ಥೆ, ಗಲೀಜು ನೋಡಿ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾದ ಸಚಿವರು| ಆಸ್ಪತ್ರೆಯಲ್ಲಿದ್ದ ವೈದ್ಯೆ ಡಾ.ಗಾಯತ್ರಿ ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು|
ಬೀದರ್(ಅ.28): ಆಸ್ಪತ್ರೆ ಆವರಣದಲ್ಲಿ ಕಸ ಬಿದ್ದಿದ್ದನ್ನು ಕಂಡು ಕಸಕ್ಕೆ ಖುದ್ದು ಸಚಿವರೇ ಬೆಂಕಿ ಇಟ್ಟ ಘಟನೆ ಜಿಲ್ಲೆಯ ಔರಾದ್ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಭಾನುವಾರ ನಡೆದಿದೆ.
Add Asianetnews Kannada as a Preferred Source

ಇಂದು ಪಟ್ಟಣದ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು, ಈ ವೇಳೆ ಆಸ್ಪತ್ರೆಯ ಆವರಣದಲ್ಲಿ ಬಿಸಾಕಿದ್ದ ಕಸವನ್ನ ಒಂದು ಕಡೆ ಗೂಡಿಸಿ ಅದಕ್ಕೆ ಬೆಂಕಿ ಸ್ವಚ್ಛ ಮಾಡಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ವೇಳೆ ಮಾತನಾಡಿದ ಅವರು, ಆಸ್ಪತ್ರೆಯ ಆವರಣದಲ್ಲಿ ಅವ್ಯವಸ್ಥೆ, ಗಲೀಜು ನೋಡಿ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾದರು. ಆಸ್ಪತ್ರೆಯಲ್ಲಿದ್ದ ವೈದ್ಯೆ ಡಾ.ಗಾಯತ್ರಿ ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಆಸ್ಪತ್ರೆ ಆವರಣವನ್ನ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸಚಿವ ಪ್ರಭು ಚೌಹಾಣ್ ಖಡಕ್ ಸೂಚನೆ ನೀಡಿದ್ದಾರೆ.
