ರಿಲಯನ್ಸ್‌ ಕಮ್ಯುನಿಕೇಷನ್ಸ್ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅನಿಲ್ ಅಂಬಾನಿ|   ಛಾಯಾ ವಿರಾನಿ, ರ್‍ಯಾನಾ ಕರಾನಿ, ಮಂಜರಿ ಕಾಕೆರ್, ಸುರೇಶ್ ರಂಗಾಚಾರ್ ರಾಜೀನಾಮೆ| ಮುಖ್ಯ ಹಣಕಾಸು ಅಧಿಕಾರಿ ಸ್ಥಾನಕ್ಕೆ ವಿ. ಮಣಿಕಂಠನ್ ರಾಜೀನಾಮೆ| ದಿವಾಳಿ ಪ್ರಕ್ರಿಯೆ ಎದುರಿಸುತ್ತಿರುವ ರಿಲಯನ್ಸ್ ಕಮ್ಯುನಿಕೇಷನ್ಸ್| 

ಮುಂಬೈ(ನ.16): ಮಹತ್ವದ ಬೆಳವಣಿಗೆಯೊಂದರಲ್ಲಿ ರಿಲಯನ್ಸ್‌ ಕಮ್ಯುನಿಕೇಷನ್ಸ್ ಅಧ್ಯಕ್ಷ ಅನಿಲ್ ಅಂಬಾನಿ, ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"

ಸೋದರ ಅನಿಲ್‌ರ ಆರ್‌ಕಾಂ ಮುಕೇಶ್‌ ಅಂಬಾನಿ ತೆಕ್ಕೆಗೆ?

ಅಲ್ಲದೇ ಛಾಯಾ ವಿರಾನಿ, ರ್‍ಯಾನಾ ಕರಾನಿ, ಮಂಜರಿ ಕಾಕೆರ್ ಮತ್ತು ಸುರೇಶ್ ರಂಗಾಚಾರ್ ಕೂಡ ಏಕಕಾಲದಲ್ಲಿ ಕಂಪನಿಯ ನಿರ್ದೇಶಕ ಹುದ್ದಗೆ ರಾಜೀನಾಮೆ ಸಲ್ಲಿಸಿದ್ದಾರೆ. 

Scroll to load tweet…

ಕಳೆದ ಅಕ್ಟೋಬರ್ 4ರಂದು ವಿ. ಮಣಿಕಂಠನ್ ಕೂಡ ಕಂಪನಿಯ ನಿರ್ದೇಶಕ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಾಲ ತೀರಿಸಲು ಮುಂಬೈನ ಕೇಂದ್ರ ಕಚೇರಿಯನ್ನೇ ಮಾರಲು ಅನಿಲ್‌ ಅಂಬಾನಿ ನಿರ್ಧಾರ?

ದಿವಾಳಿ ಪ್ರಕ್ರಿಯೆ ಎದುರಿಸುತ್ತಿರುವ ರಿಲಯನ್ಸ್ ಕಮ್ಯುನಿಕೇಷನ್ಸ್, ಕಳೆದ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ 30,142 ರೂ. ನಷ್ಟ ಅನುಭವಿಸಿದೆ.<br/>