ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಮುಷ್ಕರ: ಯಾವಾಗ? ಇಲ್ಲಿದೆ ಮಾಹಿತಿ
9 ಕಾರ್ಮಿಕ ಸಂಘಟನೆಗಳನ್ನು ಒಳಗೊಂಡಿರುವ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ಒಕ್ಕೂಟದಿಂದ ಮುಷ್ಕರ| ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ
ನವದೆಹಲಿ(ಫೆ.10): ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣವನ್ನು ವಿರೋಧಿಸಿ, 9 ಕಾರ್ಮಿಕ ಸಂಘಟನೆಗಳನ್ನು ಒಳಗೊಂಡಿರುವ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ಒಕ್ಕೂಟ (ಯುಎಫ್ಬಿಯು) ಮಾಚ್ರ್ 15 ಮತ್ತು 16ರಂದು ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದೆ.
ಸಣ್ಣ ಹೂಡಿಕೆದಾರರೂ ಸರಕಾರಿ ಸಾಲ ಬಾಂಡ್ ಪಡೀಬಹುದು: RBI
ಕಳೆದ ವಾರ ಬಜೆಟ್ ಮಂಡಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಂಡವಾಳ ಹಿಂತೆಗೆತದ ಭಾಗವಾಗಿ 2 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲಾಗುವುದೆಂದು ಘೋಷಿಸಿದ್ದರು.
ಸರ್ಕಾರದ ಈ ನಿರ್ಣಯವನ್ನು ವಿರೋಧಿಸಿ ಒಕ್ಕೂಟವು ಪ್ರತಿಭಟನೆಗೆ ಕರೆ ನೀಡಿದೆ ಎಂದು ಅಖಿಲ ಭಾರತ ಬ್ಯಾಂಕ್ ಕಾರ್ಮಿಕರ ಸಂಘ (ಎಐಬಿಇಎ)ದ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ಮಂಗಳವಾರ ತಿಳಿಸಿದ್ದಾರೆ.
ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ: ಫೆ. 8ರಂದು ಗಂಗಾವತಿಯಲ್ಲಿ ಉದ್ಯೋಗ ಮೇಳ
ಕಳೆದ ನಾಲ್ಕು ವರ್ಷಗಳಲ್ಲಿ ಈಗಾಗಲೇ ಕೇಂದ್ರ ಸರ್ಕಾರ 14 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸಿದೆ.