Asianet Suvarna News Asianet Suvarna News

ಬೆಂಗಳೂರು ಮಿಷನ್ 2022: ಬಜೆಟ್‌ನಲ್ಲಿ ರಾಜ್ಯ ರಾಜಧಾನಿಗೆ ಸಿಕ್ಕಿದ್ದಿಷ್ಟು...!

ವಿಶ್ವದಲ್ಲೇ ಬೆಂಗಳೂರು ಅತಿ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಮೂಲ ಸೌಕರ್ಯ ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಈ ಬಾರಿಯ ಬಜೆಟ್‌ನಲ್ಲಿ ಬೆಂಗಳೂರು ನಗರ ಅಭಿವೃದ್ಧಿಗೆ ಒಟ್ಟು 7795 ಕೋಟಿ ರೂ ಮೀಸಲಿಟ್ಟಿದ್ದಾರೆ. ಹಾಗಾದ್ರೆ ಬೆಂಗಳೂರಿಗೆ ಏನೆಲ್ಲಾ ಸಿಕ್ಕಿದೆ ಎನ್ನುವ ಸಂಕ್ಷಪ್ತ ಮಾಹಿತಿ ಈ ಕೆಳಗಿನಂತಿದೆ.

bengaluru mission and ease of living bsy budget 2021 highlights rbj
Author
Bengaluru, First Published Mar 8, 2021, 2:06 PM IST

ಬೆಂಗಳೂರು, (ಮಾ.08): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು (ಸೋಮವಾರ) 2021-22ರ ಬಜೆಟ್ ಮಂಡನೆ ಮಾಡಿದ್ದು, ಸಿಲಿಕಾನ್ ಸಿಟಿ, ರಾಜ್ಯದ ರಾಜಧಾನಿ ಬೆಂಗಳೂರಿಗೆ ಅನುದಾದ ಜೊತೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2021: ಕ್ಷಣ-ಕ್ಷಣದ ಮಾಹಿತಿ

ವಿಶ್ವದಲ್ಲೇ ಬೆಂಗಳೂರು ಅತಿ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಮೂಲ ಸೌಕರ್ಯ ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಬೆಂಗಳೂರು ನಗರ ಅಭಿವೃದ್ಧಿಗೆ ಒಟ್ಟು 7795 ಕೋಟಿ ರೂ ಮೀಸಲಿಟ್ಟಿದ್ದಾರೆ.

 ಅಲ್ಲದೇ ಈ ಬಾರಿಯ ಆಯವ್ಯಯದಲ್ಲಿ ಬೆಂಗಳೂರು ಮಿಷನ್ 2022- ಬೆಂಗಳೂರಿಗೆ ನವಚೈತನ್ಯ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಘೋಷಿಸಿದ್ದಾರೆ.

ವಿವಿಧ ಜಾತಿ ಸಮುದಾಯಗಳಿಗೆ ಬಜೆಟ್ಟಿನಲ್ಲಿ ಇಷ್ಟಿಷ್ಟು ಕೋಟಿ ಅನುದಾನ

ಬೆಂಗಳೂರಿಗೆ ಸಿಕ್ಕಿರುವ ಕೊಡುಗೆಗಳು

* ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನ ಹಾಗೂ ಆರ್ಗನ್ ಟ್ರಾನ್ಸ್‍ಪ್ಲಾಂಟ್ ಸಂಸ್ಥೆಯು ದೇಶದ ಮೊಟ್ಟ ಮೊದಲ ಅಂಗಾಂಗ ಕಸಿ ಸಂಸ್ಥೆ
* ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 234 ಕೆರೆಗಳಿಗೆ ಬೆಂಗಳೂರು ನಗರದ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308 ಎಂಎಲ್‌ಡಿ ನೀರು ತುಂಬಿಸುವ 500 ಕೋಟಿ ರೂ. ಯೋಜನೆ ಅನುಷ್ಠಾನ. 
* ಬೆಂಗಳೂರಿನಲ್ಲಿ ನಿರ್ಭಯಾ ಯೋಜನೆಯಲ್ಲಿ ನಗರಾದ್ಯಂತ 7,500 ಸಿಸಿ ಕ್ಯಾಮರಾಗಳ ಅಳವಡಿಕೆ. 

* ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ದರದ ಬಸ್ ಪಾಸ್. 'ವನಿತಾ ಸಂಗಾತಿ' ಬಸ್ ಪಾಸ್ ಹೆಸರಿನಲ್ಲಿ ಈ ಯೋಜನೆ ಜಾರಿ. 
* ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಕರ್ನಾಟಕ ಸಂಸ್ಕೃತಿ ಕೇಂದ್ರ ಸ್ಥಾಪನೆ. 
* ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು  67 ಕಿ. ಮೀ. ಫೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ.
ಬೈಯಪ್ಪನಹಳ್ಳಿಯಲ್ಲಿರುವ ಎನ್‍ಜಿಇಎಫ್‍ಗೆ ಸೇರಿದ 105 ಎಕರೆ ಜಮೀನಿನಲ್ಲಿ ಜನರಿಗೆ ಕಾನನದ ಅನುಭವ ನೀಡುವಂತಹ ವೃಕ್ಷೋದ್ಯಾನ ನಿರ್ಮಾಣ.
* ವಾಹನ ದಟ್ಟಣೆಯನ್ನು ಕಡಿಮೆ ಮಾಡಲು 15,767 ಕೋಟಿ ರೂ. ವೆಚ್ಚದಲ್ಲಿ ಉಪ ನಗರ ರೈಲು ಯೋಜನೆ.
* ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದಲ್ಲಿ ರೇಷ್ಮೆ ಇಲಾಖೆಯ ಎಲ್ಲಾ ಕಚೇರಿ ಒಂದೇ ಕಡೆ ಇರುವಂತೆ ರೇಷ್ಮೆ ಭವನ ಸ್ಥಾಪನೆ. 
*ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೆ ಟರ್ಮಿನಲ್ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 4,751 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.

* ಬೆಂಗಳೂರು ಉತ್ತರ ಭಾಗದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ. 45 ಲಕ್ಷ ರೂ. ತನಕ ಫ್ಲ್ಯಾಟ್‌ಗಳನ್ನು ಖರೀದಿ ಮಾಡುವಾಗ ಮುದ್ರಾಂಕ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. 
* ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಬಿಬಿಎಂಪಿ ಸಹಯೋಗದೊಂದಿಗೆ 450 ಕೋಟಿ ವೆಚ್ಚದಲ್ಲಿ ಕೆಸಿ ವ್ಯಾಲಿ ಆವರಣದ 248 ಎಂಎಲ್‌ಡಿ ಸಾಮರ್ಥ್ಯದ ಎಸ್‌ಟಿಪಿ ಪುನರುಜ್ಜೀವನ ಮತ್ತು ಉನ್ನತೀಕರಣಕ್ಕೆ ಕ್ರಮ.
* ಯಶವಂತಪುರ-ಚನ್ನಸಂದ್ರ ಮತ್ತು ಬೈಯಪ್ಪನಹಳ್ಳಿ- ಹೊಸೂರು ವಿಭಾಗಗಳ ನಡುವೆ ದ್ವಿಪಥ ರೈಲು ಯೋಜನೆಯನ್ನು ರೈಲ್ವೆ ಮಂತ್ರಾಲಯದ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇದಕ್ಕಾಗಿ 813ಕೋಟಿ ರೂ. ಮೀಸಲು
* ಕೋರಮಂಗಲ ಕಣಿವೆ ನೀರುಗಾಲುವೆಯನ್ನು 169 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಆ ನೀರುಗಾಲುವೆಯನ್ನು ಶುದ್ಧ ನೀರುಗಾಲುವೆಯನ್ನಾಗಿ ಪರಿವರ್ತಿಸಿ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು.

* ತ್ಯಾಜ್ಯ ನಿರ್ವಹಣೆಯಲ್ಲಿ ಬೆಂಗಳೂರು ಅನ್ನು ಮಾದರಿ ನಗರವನ್ನಾಗಿ ಅಭಿವೃದ್ಧಿ ಪಡಿಸಲು ಘನ ತ್ಯಾಜ್ಯ ಸಂಗ್ರಹಣೆ ಸಾಗಾಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪೆನಿಗಳನ್ನು ಸ್ಥಾಪಿಸಲಾಗುವುದು.
*  ಆಗಸ್ಟ್ 2021ರೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ವ್ಯವಸ್ಥೆ ಜಾರಿಗೆ ಕ್ರಮ. 
* ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆಗಳಲ್ಲಿ ಈ ಕಾರ್ಡ್ ಬಳಕೆಗೆ ಅವಕಾಶ. 
* ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳಲ್ಲಿ ಆಟೊಮೆಟಿಕ್ ಫೇರ್ ಕಲೆಕ್ಷನ್ ಯೋಜನೆ ಅನುಷ್ಠಾನ. 
* ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ 50 ಹಾಸಿಗೆ ಸಾಮರ್ಥ್ಯದ ಉಪಕೇಂದ್ರ. 

* ಬಿಬಿಎಂಪಿಯ 57 ವಾರ್ಡ್‌ಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ. 
* 33 ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿ ಶಾಲೆಗಳ ನವೀಕರಣ ಹಾಗೂ ಪುನರ್ ನಿರ್ಮಾಣ
* ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ವಾರಾಂತ್ಯದಲ್ಲಿ ಸಾಹಿತ್ಯ , ಸಾಂಸ್ಕಂತಿಕ, ಚಿತ್ರಸಂತೆ ಮತ್ತಿತರ ಜಾನಪದ ಕಾರ್ಯಕ್ರಮಗಳನ್ನು ಆಯೋಜಿಸಲು 2 ಕೋಟಿ ರೂ. ಮೀಸಲು.

Follow Us:
Download App:
  • android
  • ios