ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರ್ಜರಿ ಘೋಷಣೆ| ಆರ್ಥಿಕ ಪುನಶ್ಚೇತನಕ್ಕೆ ಮುನ್ನುಡಿ ಬರೆದ ಮೋದಿ ಸರ್ಕಾರ| ಕಾರ್ಪೊರೇಟ್ ವಲಯಕ್ಕೆ ತೆರಿಗೆ ಕಡಿತ ಘೋಷಣೆ ಮಾಡಿದ ವಿತ್ತ ಸಚಿವೆ| ಗೃಹ ಬಳಕೆಯ ವಸ್ತುಗಳ ಉತ್ಪಾದನಾ ಕಂಪನಿಗಳಿಗೆ ತೆರಿಗೆ ಕಡಿತ| ಶೇ.30ರ ಬದಲು ಶೇ.25.2ಕ್ಕೆ ತೆರಿಗೆ ಕಡಿತ ಮಾಡುವ ನಿರ್ಧಾರ| ಗೃಹ ಬಳಕೆಯ ವಸ್ತುಗಳ ಮೇಲಿನ ಹೂಡಿಕೆಗೆ ಉತ್ತೇಜನದ ಆಶಾವಾದ| ಸುಗ್ರೀವಾಜ್ಞೆ ಮೂಲಕ ಅಗತ್ಯ ವಸ್ತುಗಳ ಮೇಲಿನ ತೆರಿಗೆ ಇಳಿಕೆಗೆ ಕ್ರಮ| ಕೇಂದ್ರದ ನಿರ್ಧಾರದಿಂದ ಬಿಸ್ಕಟ್ ಹಾಗೂ ಆಟೋಮೊಬೈಲ್ ಕ್ಷೇತ್ರಗಳಿಗೆ ಭಾರೀ ರಿಲೀಫ್|

ನವದೆಹಲಿ(ಸೆ.20): ಆರ್ಥಿಕ ಕುಸಿತಕ್ಕೆ ಒಂದೊಂದೇ ಪರಿಹಾರ ಕಂಡುಕೊಳ್ಳುತ್ತಿರುವ ಕೇಂದ್ರ ಸರ್ಕಾರ, ಹಲವು ಹೊಸ ಘೋಷಣೆಗಳ ಮೂಲಕ ಆರ್ಥಿಕ ಪುನಶ್ಚೇತನಕ್ಕೆ ಮುಂದಡಿ ಇಡುತ್ತಿದೆ.

Add Asianetnews Kannada as a Preferred SourcegooglePreferred

ಅದರಂತೆ ಕಾರ್ಪೊರೇಟ್ ವಲಯಕ್ಕೆ ಭರ್ಜರಿ ಕೊಡುಗೆ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತೆರಿಗೆ ಕಡಿತ ಮಾಡುವ ಮೂಲಕ ಪುನಶ್ಚೇತನದ ಮುನ್ನಡಿ ಬರೆದಿದ್ದಾರೆ.

Scroll to load tweet…

ಗೃಹ ಬಳಕೆಯ ವಸ್ತುಗಳ ಉತ್ಪಾದನಾ ಕಂಪನಿಗಳಿಗೆ ತೆರಿಗೆ ಕಡಿತಗೊಳಿಸಿರುವ ಕೇಂದ್ರ ಸರ್ಕಾರ, ಈ ಮೊದಲಿನ ಶೇ.30ರ ಬದಲು ಶೇ.25.2ಕ್ಕೆ ತೆರಿಗೆ ಕಡಿತ ಮಾಡುವ ನಿರ್ಧಾರಕ್ಕೆ ಬಂದಿದೆ. ಶೇ.22ರವರೆಗೂ ತೆರಿಗೆ ಕಡಿತದ ಅವಕಾಶ ಒದಗಿಸಲಾಗಿದೆ.

ಗೃಹ ಬಳಕೆಯ ವಸ್ತುಗಳ ಮೇಲಿನ ಹೂಡಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ತೆರಿಗೆ ಕಡಿತ ಮಾಡುವ ನಿರ್ಧಾರಕ್ಕೆ ಬರಲಾಗಿದ್ದು, ಸುಗ್ರೀವಾಜ್ಞೆ ಮೂಲಕ ಅಗತ್ಯ ವಸ್ತುಗಳ ಮೇಲಿನ ತೆರಿಗೆ ಇಳಿಕೆಗೆ ಕ್ರಮ ಕೈಗೊಂಡಿದೆ.

Scroll to load tweet…

ಕೇಂದ್ರದ ಈ ನಿರ್ಧಾರದಿಂದ ಮಂದಗತಿಯಲ್ಲಿ ಸಾಗುತ್ತಿರುವ ಬಿಸ್ಕಟ್ ಹಾಗೂ ಆಟೋಮೊಬೈಲ್ ಕ್ಷೇತ್ರಗಳು ವೇಗ ಹೆಚ್ಚಿಸಿಕೊಳ್ಳಲಿವೆ ಎಂದು ಆಶಾವಾದ ವ್ಯಕ್ತಪಡಿಸಲಾಗಿದೆ.